22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಜೂ.18-23: ಉಜಿರೆಯಲ್ಲಿ ಬೆಂಗಳೂರು ಜೀವನ ಕಲೆ ಪ್ರತಿಷ್ಠಾನ ಸಂಸ್ಥೆ ವತಿಯಿಂದ ‘ಆನಂದೋತ್ಸವ ಶಿಬಿರ’

ಉಜಿರೆ : ಶ್ರೀ ರವಿ ಶಂಕರ್ ಗುರೂಜಿ ಯವರ “ಜೀವನ ಕಲೆ ಪ್ರತಿಷ್ಠಾನ” ಸಂಸ್ಥೆ ( ಆರ್ಟ್ ಆಫ್ ಲಿವಿಂಗ್ ಫೌಂಡೇಶನ್ ) ಬೆಂಗಳೂರು ಇವರ ವತಿಯಿಂದ ‘ಅನಂದೋತ್ಸವ ಶಿಬಿರ’ ಎಂಬ “ಯೋಗ ಮತ್ತು ಪ್ರಾಣಾಯಾಮ ಶಿಬಿರ” ಜೂನ್ 18 ರಿಂದ ಜೂನ್ 23ರ ವರೆಗೆ ಸಂಜೆ 5.30 ರಿಂದ 8 ರವರೆಗೆ ‘ಅರಿಪ್ಪಾಡಿ ಮಠ ಸಭಾಂಗಣ ಉಜಿರೆ ‘ ಇಲ್ಲಿ ಏರ್ಪಡಿಸಲಾಗಿದೆ ಎಂದು ಆರ್ಟ್ ಆಫ್ ಲಿವಿಂಗ್ ಸಂಸ್ಥೆ ತಿಳಿಸಿದೆ.

ಕಾರ್ಯಕ್ರಮವು ಸುದರ್ಶನ ಕ್ರಿಯೆ ಎಂಬ ಒಂದು ಲಯಬದ್ದ ಉಸಿರಾಟದ ಕಾರ್ಯಕ್ರಮವಾಗಿದ್ದು, ದೇಹದ ಆರೋಗ್ಯವನ್ನು ಕಾಪಾಡುವಲ್ಲಿ ಸಹಾಯಕವಾಗಿದೆ. ಪ್ರಪಂಚದ ಎಲ್ಲ ಕಡೆ ಮೂರುವರೆ ಕೋಟಿಗೂ ಹೆಚ್ಚು ಜನರು ಈ ಕಾರ್ಯಕ್ರಮದಲ್ಲಿ ಭಾಗವಹಿಸಿ ಪ್ರಯೋಜನ ಪಡೆದಿದ್ದಾರೆ. 180ಕ್ಕೂ ಹೆಚ್ಚು ದೇಶಗಲ್ಲಿ ‘ಜೀವನ ಕಲೆ ಪ್ರತೀಷ್ಠಾನ ‘ ಜನಪ್ರಿಯತೆಯನ್ನು ಗಳಿಸಿದೆ. ಅಮೆರಿಕದಲ್ಲಿ ನೂರಕ್ಕೂ ಹೆಚ್ಚು ವಿಶ್ವ ವಿದ್ಯಾಲಯಗಳಲ್ಲಿ ಇದನ್ನು ಪಠ್ಯ ಕ್ರಮವಾಗಿ ಅಳವಡಿಸಲಾಗಿದೆ. ಯುರೋಪ್ ಮತ್ತು ಆಫ್ರಿಕಾ ದೇಶಗಳಲ್ಲಿ ಜನರ ಒತ್ತಡ ಭರಿತ ಜೀವನ ಕ್ರಮವನ್ನು ಬದಲಾಯಿಸಿ ಪ್ರಶಾಂತ ಮನಸ್ಸನ್ನು ಕಂಡುಕೊಳ್ಳಲು ನೇರವಾಗಿದೆ. ಜನರು ಇದರ ಪ್ರಯೋಜನ ಪಡೆದುಕೊಳ್ಳುವಂತೆ ಸಂಸ್ಥೆಯು ಆಶಯ ವ್ಯಕ್ತಪಡಿಸಿದೆ. ಹೆಚ್ಚಿನ ಮಾಹಿತಿಗೆ ಸಂಪರ್ಕ ಸಂಖ್ಯೆ :9743642012

Related posts

ಪರಿಶಿಷ್ಟ ಜಾತಿ ಮತ್ತು ಪಂಗಡದವರ ಕಲ್ಯಾಣಕ್ಕೆಂದು ಮೀಸಲಾಗಿಟ್ಟ ಅನುದಾನವನ್ನು ಗ್ಯಾರಂಟಿ ಯೋಜನೆಗಳಿಗೆ ಬಳಕೆ: ಸರಕಾರವನ್ನು ತರಾಟೆಗೆ ತೆಗೆದುಕೊಂಡ ವಿಧಾನ ಪರಿಷತ್‌ ಸದಸ್ಯ ಪ್ರತಾಪಸಿಂಹ ನಾಯಕ್‌

Suddi Udaya

ಅಮೆರಿಕದಲ್ಲಿ ಕಾಲಭೈರವೇಶ್ವರ ದೇಗುಲ ನಿರ್ಮಾಣ: ಕಾಮಗಾರಿ ಪರಿಶೀಲಿಸಿದ ಮಠಾಧಿಪತಿ ನಿರ್ಮಲಾನಂದನಾಥ ಸ್ವಾಮೀಜಿ

Suddi Udaya

ಬೆಳ್ತಂಗಡಿ : ಏಳು ವರ್ಷಗಳಿಂದ ತಲೆಮರೆಸಿಕೊಂಡಿದ್ದ ವಾರೆಂಟ್ ಆರೋಪಿ ಬಂಧನ

Suddi Udaya

ಮಧ್ಯಪ್ರದೇಶದಲ್ಲಿ ನಡೆದ ರಾಷ್ಟ್ರೀಯ ಮಕ್ಕಳ ವಿಜ್ಞಾನ ಸಮಾವೇಶ: ಎಸ್. ಡಿ. ಎಂ ಆಂ.ಮಾ. ಶಾಲೆ ರಾಜ್ಯ ಪಠ್ಯಕ್ರಮದ, ವಿದ್ಯಾರ್ಥಿಗಳಾದ ಅಧಿಶ್ ಬಿ. ಸಿ ಮತ್ತು ಸಚಿತ್ ಭಟ್ ಅತ್ಯುತ್ತಮ ಸಂಶೋಧನೆ ಯ ಹೆಗ್ಗಳಿಕೆ

Suddi Udaya

ಬಿಜೆಪಿ ಸಕ್ರಿಯ ಸದಸ್ಯತ್ವ ಅಭಿಯಾನದಲ್ಲಿ ಸಂಸದ ಕ್ಯಾ. ಬ್ರಿಜೇಶ್ ಚೌಟರಿಂದ ಸದಸ್ಯತ್ವ ಮರು ನೋಂದಣಿ

Suddi Udaya

ಬೆಳ್ತಂಗಡಿ ಲಯನ್ಸ್ ಝೋನ್ ಮಟ್ಟದ ಸೆಮಿನಾರ್

Suddi Udaya
error: Content is protected !!