23.3 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ತಾಲೂಕು ಭಜನಾ ಪರಿಷತ್ತಿನ ನೇತೃತ್ವದಲ್ಲಿ ತಾಲೂಕು ಕುಣಿತ ಭಜನಾ ತರಬೇತಿದಾರ ಪ್ರಥಮ ಸಭೆ

ಬೆಳ್ತಂಗಡಿ: ದೇವರನ್ನು ಅತಿ ಸುಲಭವಾಗಿ ಒಲಿಸಿಕೊಳ್ಳಲು ಸುಲಭ ವಿಧಾನ ಎಂದರೆ ಅದು ಭಜನೆ ಆದುದರಿಂದ ಭಜನೆ ಎನ್ನುವುದು ಶ್ರದ್ಧಾಭಕ್ತಿಯಿಂದ ಕೂಡಿರಬೇಕು ವಿವಿಧತೆಯ ಭಜನೆಯಲ್ಲಿ ಏಕತೆಯನ್ನು ಕಾಣಬೇಕು ಮಾತ್ರವಲ್ಲದೇ ತಾಲೂಕಿನ ಒಳಗಡೆ ನಡೆಯುವಂತಹ ಭಜನಾ ಕಾರ್ಯಕ್ರಮಗಳಲ್ಲಿ ಹಾಗೂ ಭಜಕರಲ್ಲಿ ಕೆಲವೊಂದು ಸಣ್ಣಪುಟ್ಟ ಬದಲಾವಣೆಗಳನ್ನು ಮಾಡಿಕೊಳ್ಳುವುದಕೋಸ್ಕರ ಹಾಗೂ ಮುಂದಿನ ದಿನಗಳಲ್ಲಿ ನಾವು ಶ್ರದ್ಧಾ ಭಕ್ತಿಯಿಂದ ಮಾಡುವಂತಹ ಭಜನೆಯಲ್ಲಿಯೂ ಕೂಡ ಕೆಲವೊಂದು ನಿಯಮಗಳನ್ನು ಅನುಸರಿಸಬೇಕು ಎನ್ನುವ ಉದ್ದೇಶದಿಂದ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸಹಕಾರದೊಂದಿಗೆ ತಾಲೂಕು ಭಜನಾ ಪರಿಷತ್ತಿನ ವತಿಯಿಂದ ಬೆಳ್ತಂಗಡಿಯಲ್ಲಿ ಪ್ರಥಮ ಬಾರಿಗೆ ತಾಲೂಕಿನ ಒಳಗಡೆ ಭಜನಾ ತರಬೇತಿ ನೀಡುತ್ತಿರುವ ಎಲ್ಲಾ ತರಬೇತಿದಾರರುಗಳ ಸಭೆಯನ್ನು ನಡೆಸಲಾಯಿತು. ಮಾತ್ರವಲ್ಲದೆ ಕುಣಿತ ಭಜನೆಯಲ್ಲಿ ಕೆಲವೊಂದು ನಿಬಂಧನೆಗಳನ್ನು ಅನುಷ್ಠಾನಗೊಳಿಸುವುದಕೋಸ್ಕರ ತಾಲೂಕಿನಲ್ಲಿ ಕುಣಿತ ಭಜನೆಯ ತರಬೇತಿದಾರರ ಪ್ರಥಮ ಸಮಿತಿಯನ್ನು ರಚಿಸಲಾಯಿತು.


ಈ ಸಭೆ ಅಧ್ಯಕ್ಷತೆಯನ್ನು ತಾಲೂಕು ಭಜನಾ ಪರಿಷತ್ತಿನ ಅಧ್ಯಕ್ಷ ವೆಂಕಟೇಶ ಭಟ್ ಕಜೆ ಇವರು ವಹಿಸಿದ್ದರು. ವೇದಿಕೆಯಲ್ಲಿ ಉಪಾಧ್ಯಕ್ಷ ಜಯಪ್ರಸಾದ್ ಕಡಮ್ಮಾಜಿ, ಕಾರ್ಯದರ್ಶಿ ಪಿ ಚಂದ್ರಶೇಖರ್ ಸಾಲ್ಯಾನ್ ಕೊಯ್ಯೂರು, ಸುರೇಂದ್ರ ಯೋಜನಾಧಿಕಾರಿ ಬೆಳ್ತಂಗಡಿ ವಲಯ, ಕೃಷಿ ವಿಭಾಗದ ಅಧಿಕಾರಿ ರಾಮ್ ಕುಮಾರ್ ಉಪಸ್ಥಿತರಿದ್ದರು.


ಸಭೆಯಲ್ಲಿ ಭಜನಾ ಪರಿಷತ್ತಿನ ಸಂಯೋಜಕರುಗಳು ಹಾಗೂ ತಾಲೂಕಿನ ಭಜನಾ ಕುಣಿತ ಭಜನೆಯ ತರಬೇತಿದಾರರುಗಳು ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜರವರಿಂದ ನಾಮಪತ್ರ ಸಲ್ಲಿಕೆ‌ ಕ್ಷಣಗಣನೆ

Suddi Udaya

ಬೆಳಾಲು ಪ್ರೌಢಶಾಲೆಯ ಮಕ್ಕಳಿಗೆ ಗದ್ದೆಯಲ್ಲಿ ಒಂದು ದಿನ ಕಾರ್ಯಕ್ರಮ:ವಿದ್ಯಾರ್ಥಿಗಳಿಗೆ ಪ್ರಾಯೋಗಿಕವಾಗಿ ಬೇಸಾಯದ ಪಾಠ

Suddi Udaya

ಮಲೆಬೆಟ್ಟು ಹಾಲು ಉತ್ಪಾದಕರ ಸಹಕಾರ ಸಂಘದಲ್ಲಿ ಯಾವುದೇ ಅವ್ಯವಹಾರಗಳು ನಡೆದಿಲ್ಲ: ನಿನ್ನೆ ನಡೆದ ಸಭೆಯಲ್ಲಿ ರಾಜೀನಾಮೆ ನೀಡಲು ನಿರ್ಣಯಿಸಲಾಗಿದೆಯೇ ಹೊರತು ನಾವು ರಾಜೀನಾಮೆ ನೀಡಿಲ್ಲ: ಪತ್ರಿಕಾಗೋಷ್ಠಿಯಲ್ಲಿ ಸಂಘದ ಅಧ್ಯಕ್ಷ ಪ್ರಮೋದ್ ಕುಮಾರ್ ಹೇಳಿಕೆ

Suddi Udaya

13 ವರ್ಷಗಳ ಹಿಂದೆ ಬಂಟ್ವಾಳದ ಕು! ಹೇಮಾವತಿ ನಾಪತ್ತೆ ಆಕೆಯ ಸಹೋದರ ನಿಂದ ಪುಂಜಾಲಕಟ್ಟೆ‌ಠಾಣೆಗೆ ನೀಡಿದ ದೂರನ್ನು ಸ್ವೀಕರಿಸಿದ ಎಸ್ ಐ ಟಿ

Suddi Udaya

ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿ ಬಳಂಜ, ಯುವ ಬಿಲ್ಲವ ಮತ್ತು ಮಹಿಳಾ ಬಿಲ್ಲವ ವೇದಿಕೆಯಿಂದ ಗುರುಗಳ 169 ನೇ ಜಯಂತಿ ಆಚರಣೆ, ನೂತನ ಆಡಳಿತ ಮಂಡಳಿಯ ಪದ ಪ್ರಧಾನ ಸಮಾರಂಭ

Suddi Udaya

ನಾವೂರು : ನಿರ್ಮಾಣವಾಗದ ರಸ್ತೆ, ಸಾರ್ವಜನಿಕರ ಆಕ್ರೋಶ, ಗ್ರಾಮಸ್ಥರೇ ಸೇರಿ ಪರ್ಯಾಯ ರಸ್ತೆ ನಿರ್ಮಾಣ

Suddi Udaya
error: Content is protected !!