23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ತಾಲೂಕು ಭಜನಾ ಪರಿಷತ್ತಿನ ನೇತೃತ್ವದಲ್ಲಿ ತಾಲೂಕು ಕುಣಿತ ಭಜನಾ ತರಬೇತಿದಾರ ಪ್ರಥಮ ಸಭೆ

ಬೆಳ್ತಂಗಡಿ: ದೇವರನ್ನು ಅತಿ ಸುಲಭವಾಗಿ ಒಲಿಸಿಕೊಳ್ಳಲು ಸುಲಭ ವಿಧಾನ ಎಂದರೆ ಅದು ಭಜನೆ ಆದುದರಿಂದ ಭಜನೆ ಎನ್ನುವುದು ಶ್ರದ್ಧಾಭಕ್ತಿಯಿಂದ ಕೂಡಿರಬೇಕು ವಿವಿಧತೆಯ ಭಜನೆಯಲ್ಲಿ ಏಕತೆಯನ್ನು ಕಾಣಬೇಕು ಮಾತ್ರವಲ್ಲದೇ ತಾಲೂಕಿನ ಒಳಗಡೆ ನಡೆಯುವಂತಹ ಭಜನಾ ಕಾರ್ಯಕ್ರಮಗಳಲ್ಲಿ ಹಾಗೂ ಭಜಕರಲ್ಲಿ ಕೆಲವೊಂದು ಸಣ್ಣಪುಟ್ಟ ಬದಲಾವಣೆಗಳನ್ನು ಮಾಡಿಕೊಳ್ಳುವುದಕೋಸ್ಕರ ಹಾಗೂ ಮುಂದಿನ ದಿನಗಳಲ್ಲಿ ನಾವು ಶ್ರದ್ಧಾ ಭಕ್ತಿಯಿಂದ ಮಾಡುವಂತಹ ಭಜನೆಯಲ್ಲಿಯೂ ಕೂಡ ಕೆಲವೊಂದು ನಿಯಮಗಳನ್ನು ಅನುಸರಿಸಬೇಕು ಎನ್ನುವ ಉದ್ದೇಶದಿಂದ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸಹಕಾರದೊಂದಿಗೆ ತಾಲೂಕು ಭಜನಾ ಪರಿಷತ್ತಿನ ವತಿಯಿಂದ ಬೆಳ್ತಂಗಡಿಯಲ್ಲಿ ಪ್ರಥಮ ಬಾರಿಗೆ ತಾಲೂಕಿನ ಒಳಗಡೆ ಭಜನಾ ತರಬೇತಿ ನೀಡುತ್ತಿರುವ ಎಲ್ಲಾ ತರಬೇತಿದಾರರುಗಳ ಸಭೆಯನ್ನು ನಡೆಸಲಾಯಿತು. ಮಾತ್ರವಲ್ಲದೆ ಕುಣಿತ ಭಜನೆಯಲ್ಲಿ ಕೆಲವೊಂದು ನಿಬಂಧನೆಗಳನ್ನು ಅನುಷ್ಠಾನಗೊಳಿಸುವುದಕೋಸ್ಕರ ತಾಲೂಕಿನಲ್ಲಿ ಕುಣಿತ ಭಜನೆಯ ತರಬೇತಿದಾರರ ಪ್ರಥಮ ಸಮಿತಿಯನ್ನು ರಚಿಸಲಾಯಿತು.


ಈ ಸಭೆ ಅಧ್ಯಕ್ಷತೆಯನ್ನು ತಾಲೂಕು ಭಜನಾ ಪರಿಷತ್ತಿನ ಅಧ್ಯಕ್ಷ ವೆಂಕಟೇಶ ಭಟ್ ಕಜೆ ಇವರು ವಹಿಸಿದ್ದರು. ವೇದಿಕೆಯಲ್ಲಿ ಉಪಾಧ್ಯಕ್ಷ ಜಯಪ್ರಸಾದ್ ಕಡಮ್ಮಾಜಿ, ಕಾರ್ಯದರ್ಶಿ ಪಿ ಚಂದ್ರಶೇಖರ್ ಸಾಲ್ಯಾನ್ ಕೊಯ್ಯೂರು, ಸುರೇಂದ್ರ ಯೋಜನಾಧಿಕಾರಿ ಬೆಳ್ತಂಗಡಿ ವಲಯ, ಕೃಷಿ ವಿಭಾಗದ ಅಧಿಕಾರಿ ರಾಮ್ ಕುಮಾರ್ ಉಪಸ್ಥಿತರಿದ್ದರು.


ಸಭೆಯಲ್ಲಿ ಭಜನಾ ಪರಿಷತ್ತಿನ ಸಂಯೋಜಕರುಗಳು ಹಾಗೂ ತಾಲೂಕಿನ ಭಜನಾ ಕುಣಿತ ಭಜನೆಯ ತರಬೇತಿದಾರರುಗಳು ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ ಲಯನ್ಸ್ ಕ್ಲಬ್ ಮತ್ತು ಲಯನ್ ಸೇವಾ ಟ್ರಸ್ಟ್ ವತಿಯಿಂದ ವಿವಿಧ ಸಂಸ್ಥೆಗಳಿಗೆ ರೂ. 1ಲಕ್ಷ ಸಹಾಯಧನ

Suddi Udaya

ಕೋರಂ ಕೊರತೆ; ಉಜಿರೆ ಗ್ರಾಮಸಭೆ ಮುಂದೂಡಿಕೆ

Suddi Udaya

ಆ. 3- 17: ಗುರುವಾಯನಕೆರೆ ಶಿವಂ ಟೆಕ್ಸ್‌ಟೈಲ್ಸ್‌ನಲ್ಲಿ ಆಷಾಡ ಡಿಸ್ಕೌಂಟ್ ಸೇಲ್: ಅಮೋಘ 10% ರಿಂದ 40% ವರೆಗೆ ಗ್ರಾಹಕರಿಗೆ ರಿಯಾಯಿತಿ

Suddi Udaya

ಭಾರಿ ಮಳೆ ನಾಳೆ (ಜೂ.27) ಪ್ರಾಥಮಿಕ ಪ್ರೌಢ ಶಾಲೆಗಳಿಗೆ ರಜೆ ಘೋಷಣೆ

Suddi Udaya

ವೇಣೂರು: ವಿದ್ಯಾರ್ಥಿನಿಯರನ್ನು ಚುಡಾಯಿಸುತ್ತಿದ್ದ ಯುವಕನ ಬಂಧನ: ಆರೋಪಿಯನ್ನು ಪೊಲೀಸರಿಗೆ ಒಪ್ಪಿಸಿದ ಹಿಂ.ಜಾ.ವೇ. ಕಾರ್ಯಕರ್ತರು

Suddi Udaya

ಚಂದ್ಕೂರು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಜಾತ್ರೋತ್ಸವದ ಪ್ರಯುಕ್ತ ನಡ- ಕನ್ಯಾಡಿ ಶೌರ್ಯ ವಿಪತ್ತು ನಿರ್ವಹಣಾ ತಂಡದಿಂದ ಶ್ರಮದಾನ

Suddi Udaya
error: Content is protected !!