July 23, 2026
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿ

ಬೆಳ್ತಂಗಡಿ ತಾಲೂಕು ಕುಣಿತ ಭಜನಾ ತರಬೇತಿಗಾರರ ಸಂಘದ ಅಧ್ಯಕ್ಷರಾಗಿ ಸಂದೇಶ್, ಕಾರ್ಯದರ್ಶಿಯಾಗಿ ವಿ ಹರೀಶ್, ಸಂಘಟನಾ ಕಾರ್ಯದರ್ಶಿಯಾಗಿ ನಾಗೇಶ್ ಆಯ್ಕೆ

ಬೆಳ್ತಂಗಡಿ : ಇಂದಿನ ಸ್ಪರ್ಧಾತ್ಮಕ ಭಜನೆಯಿಂದಾಗಿ ಮೂಲ ಭಜನೆಗೆ ಚ್ಯುತಿ ಬಂದು ಭಜನೆಯಲ್ಲಿ ವಿಭಜನೆಯಾಗಬಾರದು ಭಕ್ತಿಯ ಭಜನೆಯಲ್ಲಿಯೂ ಕೆಲವೊಂದು ನಿಯಮಗಳನ್ನು ಮೈಗೂಡಿಸಿಕೊಳ್ಳಬೇಕು ಹಾಗೂ ಭಜಕರಲ್ಲಿ ಮತ್ತು ತರಬೇತಿದಾರರುಗಳಲ್ಲಿ ಸಮನ್ವಯತೆ ವೃದ್ಧಿಯಾಗಬೇಕು ಎನ್ನುವ ದೂರದೃಷ್ಟಿಯೊಂದಿಗೆ ಗ್ರಾಮಾಭಿವೃದ್ಧಿ ಯೋಜನೆಯ ಸಹಕಾರದೊಂದಿಗೆ ತಾಲೂಕು ಭಜನಾ ಪರಿಷತ್ತಿನ ನೇತೃತ್ವದಲ್ಲಿ ಬೆಳ್ತಂಗಡಿ ತಾಲೂಕಿನ ಒಳಗಡೆ ಕುಣಿತ ಭಜನಾ ತರಬೇತಿ ನೀಡುತ್ತಿರುವ ತರಬೇತಿದಾರರುಗಳ ಪ್ರಥಮ ಸಭೆ ನಡೆಯಿತು.

ಈ ಸಭೆಯಲ್ಲಿ ಹಲವಾರು ವಿಚಾರಗಳನ್ನು ಚರ್ಚಿಸಿ ಮುಂದಿನ ದಿನಗಳಲ್ಲಿ ಭಕ್ತಿಯ ಭಜನೆಯಲ್ಲಿ ನಿರ್ದಿಷ್ಟವಾದ ಕೆಲವೊಂದು ನಿಯಮಗಳನ್ನು ಪಾಲಿಸುವುದಕ್ಕಾಗಿ ತಾಲೂಕಿನ ಒಳಗಡೆ ಕುಣಿತ ಭಜನಾ ತರಬೇತಿಯನ್ನು ನೀಡುತ್ತಿರುವ ತರಬೇತಿದಾರರುಗಳ ಸಂಘವನ್ನು ರಚಿಸಲಾಯಿತು.

ಅಧ್ಯಕ್ಷರಾಗಿ ಸಂದೇಶ್ ಮದ್ದಡ್ಕ , ಉಪಾಧ್ಯಕ್ಷರಾಗಿ ಕೃಷ್ಣಪ್ಪಗೌಡ ಅರಸಿನಮಕ್ಕಿ , ಕಾರ್ಯದರ್ಶಿಯಾಗಿ ಹರೀಶ್ ವಿ ನೆರಿಯ, ಸಂಘಟನಾ ಕಾರ್ಯದರ್ಶಿಯಾಗಿ ನಾಗೇಶ್ ನೆರಿಯ, ಸಂಚಾಲಕರಾಗಿ ಪಿ ಚಂದ್ರಶೇಖರ ಸಾಲ್ಯಾನ್ ಕೊಯ್ಯೂರು ಮೊದಲಾದವರು ಆಯ್ಕೆಯಾಗಿ ಉಳಿದ ತರಬೇತಿದಾರರುಗಳನ್ನು ಸದಸ್ಯರನ್ನಾಗಿ ಸೇರಿಸಿಕೊಳ್ಳಲಾಯಿತು ಹಾಗೂ ಸಂಘಟನೆಯನ್ನು ಬಲಪಡಿಸುವುದಕ್ಕಾಗಿ ಹೆಚ್ಚಿನ ಪದಾಧಿಕಾರಿಗಳನ್ನು ಮುಂದಿನ ಸಭೆಯಲ್ಲಿ ಆಯ್ಕೆ ಮಾಡುವ ಜವಾಬ್ದಾರಿಯನ್ನು ನೂತನ ಸಮಿತಿಗೆ ನೀಡಲಾಯಿತು.

ಸಭೆಯ ಅಧ್ಯಕ್ಷತೆಯನ್ನು ತಾಲೂಕು ಭಜನಾ ಪರಿಷತ್ತಿನ ಅಧ್ಯಕ್ಷ ವೆಂಕಟೇಶ್ವರ ಭಟ್ ಕಜೆ ವಹಿಸಿದ್ದರು. ವೇದಿಕೆಯಲ್ಲಿ ಭಜನಾ ಪರಿಷತ್ತಿನ ಉಪಾಧ್ಯಕ್ಷ ಜಯಪ್ರಸಾದ್ ಕಡಮ್ಮಾಜಿ, ಕಾರ್ಯದರ್ಶಿ ಚಂದ್ರಶೇಖರ ಸಾಲ್ಯಾನ್ ಕೊಯ್ಯೂರು. , ಸುರೇಂದ್ರ ಯೋಜನಾಧಿಕಾರಿ ಬೆಳ್ತಂಗಡಿ ವಲಯ. ಕೃಷಿ ಅಧಿಕಾರಿ ರಾಮ್ ಕುಮಾರ್ ಮೊದಲಾದವರು ಉಪಸ್ಥಿತರಿದ್ದರು.

ಸಭೆಯಲ್ಲಿ ಭಜನಾ ಪರಿಷತ್ತಿನ ಸಂಯೋಜಕರುಗಳು ಹಾಗೂ ತಾಲೂಕಿನ ಕುಣಿತ ಭಜನಾ ತರಬೇತಿ ನೀಡುತ್ತಿರುವ ಸಮಾನ ಮನಸ್ಕ ತರಬೇತಿದಾರರುಗಳು ಉಪಸ್ಥಿತರಿದ್ದರು.

Related posts

ಮಾಲಾಡಿ ಸೋಣಂದೂರಿನಲ್ಲಿ ಗಾಳಿ ಮಳೆಗೆ ಮನೆ, ಕೃಷಿಗೆ ತೀವ್ರ ತರಹದ ಹಾನಿ: ಕೋಟ್ಯಾಂತರ ರೂ. ನಷ್ಟಮಾಲಾಡಿ ಗ್ರಾ.ಪಂ. ಅಧ್ಯಕ್ಷ ಪುನೀತ್ ಕುಮಾರ್‌ರವರ ನೇತೃತ್ವದಲ್ಲಿ ಕಾರ್ಯಾಚರಣೆ

Suddi Udaya

ಅರಸಿನಮಕ್ಕಿಯಲ್ಲಿ ಉಚಿತ ಟೈಲರಿಂಗ್ ತರಬೇತಿ ಶಿಬಿರದ ಉದ್ಘಾಟನೆ

Suddi Udaya

ಸುಲ್ಕೇರಿ ಶ್ರೀ ಗುರುನಾರಾಯಣ ಸೇವಾ ಸಂಘದಲ್ಲಿ ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ನಡೆಯುವ ವಾರ್ಷಿಕ ಜಾತ್ರಾ ಮಹೋತ್ಸವದ ಬಗ್ಗೆ ಸಮಾಲೋಚನ ಸಭೆ ಹಾಗೂ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಎಸ್.ಎಸ್.ಎಲ್.ಸಿ ಯಲ್ಲಿ ರಾಜ್ಯಕ್ಕೆ ಐದನೇ ಸ್ಥಾನ ಪಡೆದ ಗರ್ಡಾಡಿಯ ಅತುಲ್ ಕೃಷ್ಣ ರಿಗೆ ಸನ್ಮಾನ

Suddi Udaya

ಬೆಳೆ ವಿಮಾ ಪರಿಹಾರ ಯೋಜನೆಯಲ್ಲಿ ತಾರತಮ್ಯ ಕಳಿಯ ಸಹಕಾರಿ ಸಂಘದ ಅಧ್ಯಕ್ಷ ವಸಂತ ಮಜಲು ಖಂಡನೆ

Suddi Udaya

ಬೆಳ್ತಂಗಡಿ: ಗ್ರಾಮ ಆಡಳಿತ ಅಧಿಕಾರಿಗಳ ಅನಿರ್ದಿಷ್ಟಾವಧಿ ರಾಜ್ಯವ್ಯಾಪಿ 2ನೇ ಹಂತದ ಮುಷ್ಕರ

Suddi Udaya
error: Content is protected !!