24.6 C
ಪುತ್ತೂರು, ಬೆಳ್ತಂಗಡಿ
May 18, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬಂದಾರು ಸರಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲೆಯಲ್ಲಿ ಸ್ವಚ್ಛತಾ ಕಾರ್ಯ

ಬoದಾರು : ರಾಷ್ಟಮಟ್ಟದ ವಾಲಿಬಾಲ್ ಪಂದ್ಯಾಟದಲ್ಲಿ ವಿದ್ಯಾರ್ಥಿನಿಯರ ತಂಡ 9 ವರ್ಷಗಳಿಂದ ಸಾಧನೆ ಮಾಡಿರುವ ಬಂದಾರು ಸರಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲೆಯಲ್ಲಿ ಶಾಲಾ ವಿದ್ಯಾರ್ಥಿಗಳ ಪೋಷಕರು, ಶ್ರೀ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಪ್ರಗತಿ ಬಂಧು ಒಕ್ಕೂಟದ ಸದಸ್ಯರು, ಹಳೆ ವಿದ್ಯಾರ್ಥಿ ಸಂಘದ ಸದಸ್ಯರು ಹಾಗೂ ಬಂದಾರು ಗ್ರಾಮದ ವಿವಿಧ ಸಂಘ-ಸಂಸ್ಥೆಗಳ ಸದಸ್ಯರುಗಳಿಂದ ಶ್ರಮದಾನ ಕೈಗೊಳ್ಳಲಾಯಿತು.

ಶಾಲಾ ಮೈದಾನವನ್ನು ಸ್ವಚ್ಛಗೊಳಿಸಿ ಮತ್ತು ನೀರು ಸರಾಗವಾಗಿ ಹರಿದು ಹೋಗುವಂತೆ ಮಾಡಲಾಯಿತು. ಶಾಲೆಯ ಸುತ್ತಮುತ್ತಲಿನ ಹುಲ್ಲು, ಗಿಡ ಗಂಟಿಗಳನ್ನು ತೆಗೆದುಹಾಕಿ ಮಕ್ಕಳಿಗೆ ಆಟವಾಡಲು ವಾಲಿಬಾಲ್ ಅಂಕಣ ಮತ್ತು ಖೋಖೋ ಅಂಕಣವನ್ನು ಸಜ್ಜುಗೊಳಿಸಲಾಯಿತು. ಸೋರುತ್ತಿರುವ ಛಾವಣಿಯ ಹಂಚುಗಳನ್ನು ಸರಿಪಡಿಸಿ, ಮಧ್ಯಾಹ್ನ ಬಿಸಿ ಊಟಕ್ಕಾಗಿ ತರಕಾರಿ ತೋಟವನ್ನು ನಿರ್ಮಿಸಲಾಯಿತು. ಅಡಿಕೆ ತೋಟವನ್ನು ಸ್ವಚ್ಛಗೊಳಿಸಿ, ಸತ್ತುಹೋಗಿರುವ ಅಡಿಕೆ ಗಿಡಗಳ ಬದಲಿಗೆ ಹೊಸ ಸಸಿಗಳನ್ನು ನೆಡಲಾಯಿತು.

Related posts

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಯು ಶೇಪ್ ವಾಕರ್ ವಿತರಣೆ

Suddi Udaya

ಕೊಕ್ಕಡ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಚುನಾವಣೆ: ಸಹಕಾರ ಭಾರತಿ ಅಭ್ಯರ್ಥಿಗಳ ಆಯ್ಕೆ

Suddi Udaya

ನ್ಯಾಯತರ್ಪು: ಬೃಹತ್‌ ಗಾತ್ರದ ಹೆಬ್ಬಾವು ಕೋಳಿ ಗೂಡಿನಲ್ಲಿ ಪತ್ತೆ

Suddi Udaya

ಅರಸಿನಮಕ್ಕಿ: ಉಚಿತ ನೇತ್ರ ತಪಾಸಣಾ ಶಿಬಿರ

Suddi Udaya

ಬಳಂಜ: ಬ್ರಹ್ಮ ಶ್ರೀ ನಾರಾಯಣ ಗುರು ಸೇವಾ ಸಮಿತಿಯಿಂದ ಶ್ರೀ ಗುರು ಪೂಜಾ

Suddi Udaya

ಧರ್ಮಸ್ಥಳ ದೊಂಡೋಲೆ ನಿವಾಸಿ ಸಂತೋಷ್ ಶೆಟ್ಟಿ ನಿಧನ

Suddi Udaya
error: Content is protected !!