September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬಂದಾರು ಸರಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲೆಯಲ್ಲಿ ಸ್ವಚ್ಛತಾ ಕಾರ್ಯ

ಬoದಾರು : ರಾಷ್ಟಮಟ್ಟದ ವಾಲಿಬಾಲ್ ಪಂದ್ಯಾಟದಲ್ಲಿ ವಿದ್ಯಾರ್ಥಿನಿಯರ ತಂಡ 9 ವರ್ಷಗಳಿಂದ ಸಾಧನೆ ಮಾಡಿರುವ ಬಂದಾರು ಸರಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲೆಯಲ್ಲಿ ಶಾಲಾ ವಿದ್ಯಾರ್ಥಿಗಳ ಪೋಷಕರು, ಶ್ರೀ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಪ್ರಗತಿ ಬಂಧು ಒಕ್ಕೂಟದ ಸದಸ್ಯರು, ಹಳೆ ವಿದ್ಯಾರ್ಥಿ ಸಂಘದ ಸದಸ್ಯರು ಹಾಗೂ ಬಂದಾರು ಗ್ರಾಮದ ವಿವಿಧ ಸಂಘ-ಸಂಸ್ಥೆಗಳ ಸದಸ್ಯರುಗಳಿಂದ ಶ್ರಮದಾನ ಕೈಗೊಳ್ಳಲಾಯಿತು.

ಶಾಲಾ ಮೈದಾನವನ್ನು ಸ್ವಚ್ಛಗೊಳಿಸಿ ಮತ್ತು ನೀರು ಸರಾಗವಾಗಿ ಹರಿದು ಹೋಗುವಂತೆ ಮಾಡಲಾಯಿತು. ಶಾಲೆಯ ಸುತ್ತಮುತ್ತಲಿನ ಹುಲ್ಲು, ಗಿಡ ಗಂಟಿಗಳನ್ನು ತೆಗೆದುಹಾಕಿ ಮಕ್ಕಳಿಗೆ ಆಟವಾಡಲು ವಾಲಿಬಾಲ್ ಅಂಕಣ ಮತ್ತು ಖೋಖೋ ಅಂಕಣವನ್ನು ಸಜ್ಜುಗೊಳಿಸಲಾಯಿತು. ಸೋರುತ್ತಿರುವ ಛಾವಣಿಯ ಹಂಚುಗಳನ್ನು ಸರಿಪಡಿಸಿ, ಮಧ್ಯಾಹ್ನ ಬಿಸಿ ಊಟಕ್ಕಾಗಿ ತರಕಾರಿ ತೋಟವನ್ನು ನಿರ್ಮಿಸಲಾಯಿತು. ಅಡಿಕೆ ತೋಟವನ್ನು ಸ್ವಚ್ಛಗೊಳಿಸಿ, ಸತ್ತುಹೋಗಿರುವ ಅಡಿಕೆ ಗಿಡಗಳ ಬದಲಿಗೆ ಹೊಸ ಸಸಿಗಳನ್ನು ನೆಡಲಾಯಿತು.

Related posts

ಬೆಳ್ತಂಗಡಿ: ಎಸ್.ಬಿ.ಐ ಲೈಫ್ ಬೆಳ್ತಂಗಡಿ ಬ್ರಾಂಚ್ ಉದ್ಘಾಟನೆ

Suddi Udaya

ಭಾರತೀಯ ರಿಸರ್ವ್ ಬ್ಯಾಂಕಿನಿಂದ ಸೇವಾಭಾರತಿಗೆ ಅಂಬ್ಯುಲೆನ್ಸ್ ಕೊಡುಗೆ

Suddi Udaya

ಬೆಳ್ತಂಗಡಿ ಸ.ಪ್ರ.ದ.ಕಾಲೇಜಿನಲ್ಲಿ 2005-08 ನೇ ಸಾಲಿನ ಬಿಎ ವಿದ್ಯಾರ್ಥಿಗಳ ಸ್ನೇಹ ಸಮ್ಮಿಲನ, ಗುರುವಂದನೆ, ರಕ್ತದಾನ ಶಿಬಿರ

Suddi Udaya

ಅ. 6 -7: ಮೂಡಬಿದ್ರೆ ಆಳ್ವಾಸ್ ವಿದ್ಯಾಗಿರಿ ಕ್ಯಾಂಪಸ್ ನಲ್ಲಿ “ಆಳ್ವಾಸ್ ಪ್ರಗತಿ” ಬೃಹತ್ ಉದ್ಯೋಗ ಮೇಳ: ಉದ್ಯೋಗಾಕಾಂಕ್ಷಿ ಯುವಕ- ಯುವತಿಯರು ಭಾಗವಹಿಸಿ ಪ್ರಯೋಜನ ಪಡೆದುಕೊಳ್ಳಬಹುದು: ಶಾಸಕ ಹರೀಶ್ ಪೂಂಜ

Suddi Udaya

ಸರ್ವರನ್ನೂ ಹಾಗೂ ಸರ್ವ ಕ್ಷೇತ್ರಗಳನ್ನೂ ಒಳಗೊಂಡ ಸಮಗ್ರ ಅಭಿವೃದ್ಧಿಗೆ ಒತ್ತು ನೀಡಿದ ಬಜೆಟ್ : ರಕ್ಷಿತ್ ಶಿವರಾಂ

Suddi Udaya

ವಾಲಿಬಾಲ್ ಪಂದ್ಯಾಟ: ಪುಂಜಾಲಕಟ್ಟೆ ಕರ್ನಾಟಕ ಪಬ್ಲಿಕ್ ಸ್ಕೂಲ್ ನ ವಿದ್ಯಾರ್ಥಿಗಳು ಹಾಗೂ ಪದ್ಮುಂಜ ಪ್ರೌಢಶಾಲಾ ವಿದ್ಯಾರ್ಥಿಗಳು ಅತ್ಯುತ್ತಮ ಪ್ರದರ್ಶನ ನೀಡಿ ಎರಡು ತಂಡಗಳು ತಾಲೂಕು ಮಟ್ಟಕ್ಕೆ ಆಯ್ಕೆ

Suddi Udaya
error: Content is protected !!