23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬಂದಾರು ಸರಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲೆಯಲ್ಲಿ ಸ್ವಚ್ಛತಾ ಕಾರ್ಯ

ಬoದಾರು : ರಾಷ್ಟಮಟ್ಟದ ವಾಲಿಬಾಲ್ ಪಂದ್ಯಾಟದಲ್ಲಿ ವಿದ್ಯಾರ್ಥಿನಿಯರ ತಂಡ 9 ವರ್ಷಗಳಿಂದ ಸಾಧನೆ ಮಾಡಿರುವ ಬಂದಾರು ಸರಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲೆಯಲ್ಲಿ ಶಾಲಾ ವಿದ್ಯಾರ್ಥಿಗಳ ಪೋಷಕರು, ಶ್ರೀ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಪ್ರಗತಿ ಬಂಧು ಒಕ್ಕೂಟದ ಸದಸ್ಯರು, ಹಳೆ ವಿದ್ಯಾರ್ಥಿ ಸಂಘದ ಸದಸ್ಯರು ಹಾಗೂ ಬಂದಾರು ಗ್ರಾಮದ ವಿವಿಧ ಸಂಘ-ಸಂಸ್ಥೆಗಳ ಸದಸ್ಯರುಗಳಿಂದ ಶ್ರಮದಾನ ಕೈಗೊಳ್ಳಲಾಯಿತು.

ಶಾಲಾ ಮೈದಾನವನ್ನು ಸ್ವಚ್ಛಗೊಳಿಸಿ ಮತ್ತು ನೀರು ಸರಾಗವಾಗಿ ಹರಿದು ಹೋಗುವಂತೆ ಮಾಡಲಾಯಿತು. ಶಾಲೆಯ ಸುತ್ತಮುತ್ತಲಿನ ಹುಲ್ಲು, ಗಿಡ ಗಂಟಿಗಳನ್ನು ತೆಗೆದುಹಾಕಿ ಮಕ್ಕಳಿಗೆ ಆಟವಾಡಲು ವಾಲಿಬಾಲ್ ಅಂಕಣ ಮತ್ತು ಖೋಖೋ ಅಂಕಣವನ್ನು ಸಜ್ಜುಗೊಳಿಸಲಾಯಿತು. ಸೋರುತ್ತಿರುವ ಛಾವಣಿಯ ಹಂಚುಗಳನ್ನು ಸರಿಪಡಿಸಿ, ಮಧ್ಯಾಹ್ನ ಬಿಸಿ ಊಟಕ್ಕಾಗಿ ತರಕಾರಿ ತೋಟವನ್ನು ನಿರ್ಮಿಸಲಾಯಿತು. ಅಡಿಕೆ ತೋಟವನ್ನು ಸ್ವಚ್ಛಗೊಳಿಸಿ, ಸತ್ತುಹೋಗಿರುವ ಅಡಿಕೆ ಗಿಡಗಳ ಬದಲಿಗೆ ಹೊಸ ಸಸಿಗಳನ್ನು ನೆಡಲಾಯಿತು.

Related posts

ನಡ: ಸ್ಟಾರ್ ಲೈನ್ ಶಾಲೆಯಲ್ಲಿ ಸಂಭ್ರಮದ ಕನ್ನಡ ರಾಜ್ಯೋತ್ಸವ ಆಚರಣೆ

Suddi Udaya

ಮದ್ದಡ್ಕದಿಂದ ಪಲ್ಕೆ ಬಲ್ಕತ್ಯಾರು ಸಮೀಪ ಟ್ರಾನ್ಸ್‌ಫಾರ್ಮರಿಗೆ ಸುತ್ತುವರಿದ ಬಳ್ಳಿ, ಗಿಡ ಗಂಟಿಗಳು: ತೆರವಿಗೆ ಮೆಸ್ಕಾಂ ಇಲಾಖೆಗೆ ಗ್ರಾಮಸ್ಥರ ಒತ್ತಾಯ

Suddi Udaya

ಶಿಕ್ಷಕರು ಮತ್ತು ಸರ್ಕಾರಿ ಶಾಲೆಗಳ ಸಮಸ್ಯೆಗಳ ಬಗ್ಗೆ ಅಧಿವೇಶನದಲ್ಲಿ ಗಮನ ಸೆಳೆದ ಶಾಸಕ ಹರೀಶ್ ಪೂಂಜ

Suddi Udaya

ಹೊಸಂಗಡಿ ವಲಯದ ಒಕ್ಕೂಟದ ವತಿಯಿಂದ ಆರ್ಥಿಕ ಸಹಾಯಧನ

Suddi Udaya

ನಿಯಂತ್ರಣ ತಪ್ಪಿ ಆಪೆ ರಿಕ್ಷಾ ಪಲ್ಟಿ: ಪ್ರಯಾಣಿಕರಿಗೆ ಗಾಯ

Suddi Udaya

ತೋಟತ್ತಾಡಿ ನಾರಾಯಣ ಧರ್ಮ ಪರಿಪಾಲನ ಯೋಗಂ ವತಿಯಿಂದ ನಡೆಯುವ ಶ್ರೀ ಅಯ್ಯಪ್ಪ ಸ್ವಾಮಿ ದೀಪೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya
error: Content is protected !!