37.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಶಿಕ್ಷಣ ಸಂಸ್ಥೆ

ಉಜಿರೆ ಎಸ್.ಡಿ.ಎಂ. ಬಿ.ಎಡ್. ಕಾಲೇಜಿಗೆ 3 ರ್‍ಯಾಂಕ್‌ಗಳು

ಉಜಿರೆ: ಮಂಗಳೂರು ವಿಶ್ವವಿದ್ಯಾನಿಲಯ ಕಳೆದ ಫೆಬ್ರವರಿ 2023 ರಲ್ಲಿ ನಡೆಸಿದ ಬಿ.ಎಡ್. ಪರೀಕ್ಷೆಯಲ್ಲಿ ಉಜಿರೆಯ ಎಸ್.ಡಿ.ಎಂ. ಶಿಕ್ಷಣ ಮಹಾವಿದ್ಯಾಲಯದ ಪ್ರಶಿಕ್ಷಣಾರ್ಥಿ ತೇಜಸ್ವಿ ಕೆ, ಶೇ. 89.38 ಅಂಕಗಳನ್ನು ಪಡೆದು 4ನೇ ರ್‍ಯಾಂಕ್‌ನ್ನು ಪಡೆದಿರುತ್ತಾರೆ.

ಪರೀಕ್ಷೆಗೆ ಹಾಜರಾದ ಎಲ್ಲಾ 49 ವಿದ್ಯಾರ್ಥಿಗಳು ವಿಶಿಷ್ಟ ಶ್ರೇಣಿಯಲ್ಲಿ ತೇರ್ಗಡೆಯಾಗಿ ಶೇ 100 ಫಲಿತಾಂಶವನ್ನು ದಾಖಲಿಸಿರುತ್ತಾರೆ.
ಹಾಗೆಯೇ ಫೆಬ್ರವರಿ 2024 ರಲ್ಲಿ ನಡೆದ ಬಿ.ಎಡ್. ಪರೀಕ್ಷೆಯಲ್ಲಿ ಪ್ರಶಿಕ್ಷಣಾರ್ಥಿ ಭವ್ಯ ಡಿ ನಾಯಕ್, ಶೇ. 88.96 ಅಂಕಗಳನ್ನು ಪಡೆದು 3ನೇ ರ್‍ಯಾಂಕ್‌ನ್ನು, ಮಂಜುಶ್ರೀ ಕೆ ನಾಯ್ಕ, ಶೇ.88.50 ಅಂಕಗಳನ್ನು ಪಡೆದು 7ನೇ ರ್‍ಯಾಂಕ್‌ನ್ನು ಪಡೆದಿರುತ್ತಾರೆ. ಪರೀಕ್ಷೆಗೆ ಹಾಜರಾದ 40 ವಿದ್ಯಾರ್ಥಿಗಳಲ್ಲಿ 35 ವಿದ್ಯಾರ್ಥಿಗಳು ವಿಶಿಷ್ಟ ಶ್ರೇಣಿಯಲ್ಲಿ ಹಾಗೂ ೦5 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ ತೇರ್ಗಡೆಯಾಗಿ ಶೇ 100 ಫಲಿತಾಂಶವನ್ನು ದಾಖಲಿಸಿರುತ್ತಾರೆ.


ವಿದ್ಯಾರ್ಥಿಗಳನ್ನು, ಪ್ರಾಂಶುಪಾಲರು ಹಾಗೂ ಶಿಕ್ಷಕ ವೃಂದದವರನ್ನು ಸಂಸ್ಥೆಯ ಅಧ್ಯಕ್ಷ ಡಾ. ಡಿ. ವೀರೇಂದ್ರ ಹೆಗ್ಗಡೆಯವರು ಹಾಗೂ ಕಾರ್ಯದರ್ಶಿಗಳಾದ ಡಿ. ಹರ್ಷೇಂದ್ರ ಕುಮಾರ್, ಡಾ. ಸತೀಶ್ಚಂದ್ರ ಎಸ್ ರವರು ಅಭಿನಂದಿಸಿರುತ್ತಾರೆ.

Related posts

ಧರ್ಮಸ್ಥಳ ಪ್ರಕರಣ : ಸ್ವಾಮೀಜಿಗಳ ನಿಯೋಗದಿಂದ ಕೇಂದ್ರ ಗೃಹ ಸಚಿವ ಅಮಿತ್ ಶಾ ರವರ ಭೇಟಿ, ಎನ್ಐಎ ತನಿಖೆಗೆ ವಹಿಸುವಂತೆ ಮನವಿ

Suddi Udaya

ಕೊಕ್ಕಡ ಬದ್ರಿಯಾ ಜುಮಾ ಮಸೀದಿಯಲ್ಲಿ ಈದ್ ಮಿಲಾದ್ ಕಾರ್ಯಕ್ರಮ

Suddi Udaya

ನಿಡ್ಲೆ ಗ್ರಾ.ಪಂ. ಅಧ್ಯಕ್ಷರಾಗಿ ಶ್ಯಾಮಲ, ಉಪಾಧ್ಯಕ್ಷರಾಗಿ ರುಕ್ಮಯ್ಯ ಪೂಜಾರಿ ಆಯ್ಕೆ

Suddi Udaya

ನಾಳೆ (ಜು.14) ಉಜಿರೆಯಲ್ಲಿ ಶುಭಾರಂಭಗೊಳ್ಳಲಿದೆ “ಡೈನಮಿಕ್ ಡ್ಯಾನ್ಸ್ ಫ್ಯಾಕ್ಟರಿ&ಕಾಸ್ಟೋಮ್ ಕಾರ್ನರ್”

Suddi Udaya

ಸುರ್ಯ ಶ್ರೀ ಸದಾಶಿವರುದ್ರ ದೇವಸ್ಥಾನದಲ್ಲಿ ಜಾತ್ರೋತ್ಸವ: ವಿಜೃಂಭಣೆಯಿಂದ ನಡೆದ ದೇವರ ದರ್ಶನ ಬಲಿ

Suddi Udaya

ಧರ್ಮಸ್ಥಳ: ಬಂಟರ ಸಂಘದ ಮಾಜಿ ಅಧ್ಯಕ್ಷ ಬಾಲಕೃಷ್ಣ ಶೆಟ್ಟಿ ನಿಧನ

Suddi Udaya
error: Content is protected !!