23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಶಿಕ್ಷಣ ಸಂಸ್ಥೆ

ಉಜಿರೆ ಎಸ್.ಡಿ.ಎಂ. ಬಿ.ಎಡ್. ಕಾಲೇಜಿಗೆ 3 ರ್‍ಯಾಂಕ್‌ಗಳು

ಉಜಿರೆ: ಮಂಗಳೂರು ವಿಶ್ವವಿದ್ಯಾನಿಲಯ ಕಳೆದ ಫೆಬ್ರವರಿ 2023 ರಲ್ಲಿ ನಡೆಸಿದ ಬಿ.ಎಡ್. ಪರೀಕ್ಷೆಯಲ್ಲಿ ಉಜಿರೆಯ ಎಸ್.ಡಿ.ಎಂ. ಶಿಕ್ಷಣ ಮಹಾವಿದ್ಯಾಲಯದ ಪ್ರಶಿಕ್ಷಣಾರ್ಥಿ ತೇಜಸ್ವಿ ಕೆ, ಶೇ. 89.38 ಅಂಕಗಳನ್ನು ಪಡೆದು 4ನೇ ರ್‍ಯಾಂಕ್‌ನ್ನು ಪಡೆದಿರುತ್ತಾರೆ.

ಪರೀಕ್ಷೆಗೆ ಹಾಜರಾದ ಎಲ್ಲಾ 49 ವಿದ್ಯಾರ್ಥಿಗಳು ವಿಶಿಷ್ಟ ಶ್ರೇಣಿಯಲ್ಲಿ ತೇರ್ಗಡೆಯಾಗಿ ಶೇ 100 ಫಲಿತಾಂಶವನ್ನು ದಾಖಲಿಸಿರುತ್ತಾರೆ.
ಹಾಗೆಯೇ ಫೆಬ್ರವರಿ 2024 ರಲ್ಲಿ ನಡೆದ ಬಿ.ಎಡ್. ಪರೀಕ್ಷೆಯಲ್ಲಿ ಪ್ರಶಿಕ್ಷಣಾರ್ಥಿ ಭವ್ಯ ಡಿ ನಾಯಕ್, ಶೇ. 88.96 ಅಂಕಗಳನ್ನು ಪಡೆದು 3ನೇ ರ್‍ಯಾಂಕ್‌ನ್ನು, ಮಂಜುಶ್ರೀ ಕೆ ನಾಯ್ಕ, ಶೇ.88.50 ಅಂಕಗಳನ್ನು ಪಡೆದು 7ನೇ ರ್‍ಯಾಂಕ್‌ನ್ನು ಪಡೆದಿರುತ್ತಾರೆ. ಪರೀಕ್ಷೆಗೆ ಹಾಜರಾದ 40 ವಿದ್ಯಾರ್ಥಿಗಳಲ್ಲಿ 35 ವಿದ್ಯಾರ್ಥಿಗಳು ವಿಶಿಷ್ಟ ಶ್ರೇಣಿಯಲ್ಲಿ ಹಾಗೂ ೦5 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ ತೇರ್ಗಡೆಯಾಗಿ ಶೇ 100 ಫಲಿತಾಂಶವನ್ನು ದಾಖಲಿಸಿರುತ್ತಾರೆ.


ವಿದ್ಯಾರ್ಥಿಗಳನ್ನು, ಪ್ರಾಂಶುಪಾಲರು ಹಾಗೂ ಶಿಕ್ಷಕ ವೃಂದದವರನ್ನು ಸಂಸ್ಥೆಯ ಅಧ್ಯಕ್ಷ ಡಾ. ಡಿ. ವೀರೇಂದ್ರ ಹೆಗ್ಗಡೆಯವರು ಹಾಗೂ ಕಾರ್ಯದರ್ಶಿಗಳಾದ ಡಿ. ಹರ್ಷೇಂದ್ರ ಕುಮಾರ್, ಡಾ. ಸತೀಶ್ಚಂದ್ರ ಎಸ್ ರವರು ಅಭಿನಂದಿಸಿರುತ್ತಾರೆ.

Related posts

ಪುಂಜಾಲಕಟ್ಟೆ ಸ್ಪಂದನ ಆಟೋ ಚಾಲಕ ಮಾಲಕರ ಸಂಘದ ವಾರ್ಷಿಕ ಮಹಾಸಭೆ: ಪದಾಧಿಕಾರಿಗಳ ಆಯ್ಕೆ

Suddi Udaya

ಉಜಿರೆಯಲ್ಲಿ ಕಮ್ಯೂನಿಟಿ ಸೆಂಟರ್ ಉದ್ಘಾಟನೆ

Suddi Udaya

ಬೆಳ್ತಂಗಡಿ: ವಾಗ್ವಾದವನ್ನು ನೆಪವಾಗಿಸಿ ಕತ್ತಿಯಿಂದ ಕಡಿದು ಕೊಲೆಗೆ ಯತ್ನ: ಆರೋಪಿಯ ಬಂಧನ

Suddi Udaya

ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆಯವರಿಗೆ ಹುಟ್ಟು ಹಬ್ಬದ ಸಂಭ್ರಮ: ಭಾರತೀಯ ಜೀವ ವಿಮಾ ನಿಗಮ ದಿಂದ ಡಾ.ಹೆಗ್ಗಡೆಯವರಿಗೆ ಗೌರವಾರ್ಪಣೆ; ಡಾ. ಹೆಗ್ಗಡೆಯವರ ಭಾವಚಿತ್ರವಿರುವ ಅಂಚೆ ಚೀಟಿ ಬಿಡುಗಡೆ

Suddi Udaya

ದುಬೈಯಲ್ಲಿ ಶ್ರೀ ಕ್ಷೇತ್ರ ಗೆಜ್ಜೆ ಗಿರಿಯ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಗೋಳಿಯಂಗಡಿ ಬದ್ರಿಯಾ ಜುಮ್ಮಾ ಮಸೀದಿಯಲ್ಲಿ ಸಂಭ್ರಮದ ಈದ್ ಆಚರಣೆ

Suddi Udaya
error: Content is protected !!