July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ: ಶ್ರೀ.ಧ.ಮಂ ವಸತಿ ಪ.ಪೂ. ಕಾಲೇಜಿನಲ್ಲಿ ‘ವ್ಯಕ್ತಿತ್ವ ವಿಕಸನ ಕಾರ್ಯಾಗಾರ’

ಉಜಿರೆ: ಸ್ಪರ್ಧಾತ್ಮಕ ಜಗತ್ತಿನಲ್ಲಿ ನಮ್ಮ ವ್ಯಕ್ತಿತ್ವ ನಿರ್ಮಾಣ ಜೊತೆಗೆ ಸವಾಲುಗಳನ್ನು ಎದುರಿಸುವ ಚಾಕಚಕ್ಯತೆ ಬೆಳೆಸಿಕೊಂಡು ಕ್ರಿಯಾಶೀಲತೆಯಿಂದ ಮುನ್ನಡೆದರೆ ಅವಕಾಶಗಳು ನಮ್ಮನ್ನು ಅರಸಿ ಬರುವುದು, ಹಾಗಾಗಿ ಕಲಿಕೆಯ ಜೊತೆಗೆ ನಮ್ಮ ವ್ಯಕ್ತಿತ್ವ ಬೆಳವಣಿಗೆಗೆ ಪೂರಕ ವಿಷಯಗಳ ಜ್ಞಾನ ಹಾಗೂ ತರಬೇತಿ ಪಡೆದುಕೊಳ್ಳಬೇಕು.


ಪದವಿಪೂರ್ವ ಹಂತದಲ್ಲಿ ನಮ್ಮ ಭವಿಷ್ಯದ ನಿರ್ಧಾರಗಳು ಬಹುತೇಕ ಖಚಿತಗೊಂಡರೆ ಗುರಿಯತ್ತ ಸಾಗಲು ಅದು ಪ್ರೇರೇಪಿಸುವುದು ಎಂದರು.


ಶ್ರೀ. ಧ.ಮಂ ವಸತಿ ಪ.ಪೂ. ಕಾಲೇಜಿನಲ್ಲಿ ಹೊಸದಾಗಿ ಸೇರ್ಪಡೆಗೊಂಡ ಪ್ರಥಮ ಪಿಯುಸಿ ವಿದ್ಯಾರ್ಥಿಗಳಿಗೆ ಆಟ, ಉದಾಹರಣೆಗಳ ಮೂಲಕ ‘ವ್ಯಕ್ತಿತ್ವ ವಿಕಸನ ‘ ಕಾರ್ಯಾಗಾರವನ್ನು ಎಸ್.ಡಿ.ಎಂ ಪದವಿ ಕಾಲೇಜಿನ ಮನಶಾಸ್ತ್ರದ ಪ್ರಾಧ್ಯಾಪಕರಾದ ಸುಧೀರ್ ಕೆ.ವಿ ನಡೆಸಿಕೊಟ್ಟರು.
ಕಾಲೇಜಿನ ಪ್ರಾಂಶುಪಾಲರಾದ ಸುನಿಲ್ ಪಂಡಿತ್ ಹಾಗೂ ರಸಾಯನಶಾಸ್ತ್ರದ ಉಪನ್ಯಾಸಕಿ ಚೈತ್ರ ಕೆ.ಎಸ್. ಉಪಸ್ಥಿತರಿದ್ದರು.
ಗಣಕಶಾಸ್ತ್ರ ಉಪನ್ಯಾಸಕರಾದ ಕೃಷ್ಣಪ್ರಸಾದ್ ವಂದಿಸಿ, ನಿರೂಪಿಸಿದರು.

Related posts

ಶಿರ್ಲಾಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಪುನಃಪ್ರತಿಷ್ಠಾ ಅಷ್ಟಬಂಧ ಬ್ರಹ್ಮಕಲಶೋತ್ಸವ

Suddi Udaya

ಜೆಸಿಐ ಕೊಕ್ಕಡ ಕಪಿಲಾ ಘಟಕದಿಂದ ಲೋ ಅಸ್ಸಿಸ್ಟೆಂನ್ಸ್ ವಿಸಿಟ್( LAV) ಕಾರ್ಯಕ್ರಮ

Suddi Udaya

ಜಿನಮಂದಿರಗಳ ಸ್ಥಳ ಹಾಗೂ ಅಭಿವೃದ್ಧಿಗೆ ಸಚಿವ ಡಿ. ಸುಧಾಕರ್ ರವರಿಗೆ ಮನವಿ

Suddi Udaya

ಬೆಳ್ತಂಗಡಿ ಅಖಿಲ ಕರ್ನಾಟಕ ರಾಜ ಕೇಸರಿ ಟ್ರಸ್ಟ್ ಇದರ ಸಹ ಘಟಕವಾದ ರಾಜಕೇಸರಿ ಬಂಟ್ವಾಳ ತಾಲೂಕು ಇದರ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀಯಿಂದ ರಾಷ್ಟ್ರೀಯ ಯುವ ದಿನಾಚರಣೆ

Suddi Udaya

ಕೊಕ್ಕಡ: ಮೈಪಾಲ ಸೇತುವೆ ಬಳಿ ನೀರಿನ ಟ್ರಾಕ್ಟರ್‌ ಪಲ್ಟಿಯಾಗಿ ಕಾರ್ಮಿಕ ಸಾವು: ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya
error: Content is protected !!