July 23, 2026
ಆರೋಗ್ಯಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಜೂ. 16: ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಕಿವಿ, ಮೂಗು, ಗಂಟಲು ತಪಾಸಣಾ ಶಿಬಿರ

ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಪೂಜ್ಯ ಹೆಗ್ಗಡೆಯವರ ಹಾಗೂ ಮಾತೃಶ್ರೀ ಅಮ್ಮನವರ ನಿರ್ದೇಶನದಂತೆ ಜೂ.16 ಬೆಳಿಗ್ಗೆ 9.30ರಿಂದ ಮಧ್ಯಾಹ್ನ 1.00 ರವರೆಗೆ ಕಿವಿ-ಮೂಗು-ಗಂಟಲು ಉಚಿತ ತಪಾಸಣಾ ಶಿಬಿರ ನಡೆಯಲಿದೆ.


ಉಚಿತ ಹಿಯರಿಂಗ್ ಟೆಸ್ಟ್ (ಉಚಿತ ಶ್ರವಣ ಪರೀಕ್ಷೆ), ಮಕ್ಕಳು ಮತ್ತು ವಯಸ್ಕರಲ್ಲಿ ಮೂಗಿನ ದ್ರವದ ತಪಾಸಣೆ, ಅಲರ್ಜಿಗೆ ಚಿಕಿತ್ಸೆ, ಮೈಗ್ರೇನ್ ತಲೆನೋವಿಗೆ ಚಿಕಿತ್ಸೆ, ವೆರ್‍ಟಿಗೋ ಪರೀಕ್ಷೆ ಮತ್ತು ಚಿಕಿತ್ಸೆ, ಧ್ವನಿ ಬದಲಾವಣೆಗಳ ಪರೀಕ್ಷೆ ಮತ್ತು ಚಿಕಿತ್ಸೆ, ಕಿವುಡುತನದ ಪರೀಕ್ಷೆ ಮತ್ತು ಚಿಕಿತ್ಸೆ, ಥೈರಾಯಿಡ್ ಪರೀಕ್ಷೆ ಮತ್ತು ಚಿಕಿತ್ಸೆ, ಕಿವಿ-ಮೂಗು- ಗಂಟಲು ಕ್ಯಾನ್ಸರ್ ತಪಾಸಣೆ, ಗೊರಕೆಗೆ ಚಿಕಿತ್ಸೆ ಇತ್ಯಾದಿ ಸೌಲಭ್ಯಗಳು ಈ ಶಿಬಿರದಲ್ಲಿ ದೊರೆಯಲಿದೆ.

ಉಜಿರೆ ಎಸ್.ಡಿ.ಎಂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯ ಕಿವಿ, ಮೂಗು, ಗಂಟಲು ತಜ್ಞರಾದ ಡಾ| ರೋಹನ್ ಎಂ. ದೀಕ್ಷಿತ್ MBBS, MS (ENT & HNS) Fellowship in Head & Neck Oncologist ಇವರು ರೋಗ ತಪಾಸಣೆ ನಡೆಸಲಿದ್ದಾರೆ. ಡಾ| ರೋಹನ್ ಎಂ. ದೀಕ್ಷಿತ್ ತಲೆ ಮತ್ತು ಕುತ್ತಿಗೆಯ ಕ್ಯಾನ್ಸರ್ ತಜ್ಞರಾಗಿದ್ದಾರೆ. ಇವರು ಪ್ರತಿದಿನ ಉಜಿರೆ ಎಸ್.ಡಿ.ಎಂ ಆಸ್ಪತ್ರೆಯಲ್ಲಿ ಲಭ್ಯವಿರುತ್ತಾರೆ.

ಈ ಶಿಬಿರದಲ್ಲಿ ವೈದ್ಯರ ಸಮಾಲೋಚನೆ ಉಚಿತವಾಗಿರುತ್ತದೆ. ಒಳರೋಗಿ ವಿಭಾಗದಲ್ಲಿ 10%, ಔಷಧದಲ್ಲಿ 10%, ಲ್ಯಾಬ್ ಟೆಸ್ಟ್ ಮತ್ತು ರೇಡಿಯಾಲಜಿಯಲ್ಲಿ 20% ರಿಯಾಯಿತಿ ದೊರೆಯಲಿದೆ ಎಂದು ಆಸ್ಪತ್ರೆಯ ವ್ಯವಸ್ಥಾಪಕ ನಿರ್ದೇಶಕ ಎಂ. ಜನಾರ್ದನ್ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Related posts

ಕೊಕ್ಕಡ: ಮುಂಡೂರುಪಳಿಕೆ ಸ.ಕಿ.ಪ್ರಾ. ಶಾಲೆಯಲ್ಲಿ 78ನೇ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya

ಶಿಬಾಜೆ ಸ.ಕಿ. ಪ್ರಾ. ಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ

Suddi Udaya

ಉಜಿರೆ ಎಸ್ ಡಿಎಂ ಪಾಲಿಟೆಕ್ನಿಕ್ ಮೊದಲನೇ ವರ್ಷದ ವಿದ್ಯಾರ್ಥಿಗಳ ಶೈಕ್ಷಣಿಕ ವರ್ಷಾರಂಭ

Suddi Udaya

ಬ್ರಹ್ಮ ಕ್ಷೇತ್ರ ದೇವರ ಸನ್ನಿದಾನ ಮುಗುಳಿ ಬಸದಿಯಲ್ಲಿ ಸ್ವಚ್ಛತಾ ಶ್ರಮದಾನ

Suddi Udaya

ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸ್ಥಳೀಯ ಸಂಸ್ಥೆ ಬೆಳ್ತಂಗಡಿ ಹಾಗೂ ಜೆಸಿಐ ಮಂಜುಶ್ರೀ ಬೆಳ್ತಂಗಡಿ ಇವರ ಸಹಭಾಗಿತ್ವದಲ್ಲಿ ದೇಶಭಕ್ತಿ ಗೀತ ಗಾಯನ ಸ್ಪರ್ಧೆ

Suddi Udaya

ಯುವವಾಹಿನಿ ಬೆಳ್ತಂಗಡಿ ಘಟಕದಿಂದ ಕನ್ಯಾಡಿ ಸ್ವಾಮೀಜಿಗಳಿಗೆ ಗೌರವಾಭಿನಂದನೆ

Suddi Udaya
error: Content is protected !!