July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿಯ ಸಿಮ್ರಾ ಪರ್ವಿನ್ ಗೆ ಬ್ಯಾರೀಸ್ ವೆಲ್‌ಫೇರ್ ಅಸೋಸಿಯೇಷನ್ ಮೂಲಕ ಶಿಕ್ಷಣ ಸಚಿವರಿಂದ ಸನ್ಮಾನ

ಬೆಳ್ತಂಗಡಿ: ಬ್ಯಾರೀಸ್‌ ವೆಲ್‌ಫೇ‌ರ್ ಅಸೋಸಿಯೇಷನ್ ಬೆಂಗಳೂರುನಲ್ಲಿ ಹಮ್ಮಿಕೊಂಡಿದ್ದ ‘ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪುರಸ್ಕಾರ’ ಕಾರ್ಯಕ್ರಮದಲ್ಲಿ 2024 ನೇ ಸಾಲಿನ ಎಸ್.ಎಸ್.ಎಲ್.ಸಿ ಫಲಿತಾಂಶದಲ್ಲಿ 617 ಅಂಕಗಳನ್ನು ಪಡೆದ ಬೆಳ್ತಂಗಡಿ ಸಂಜಯನಗರ
ಸಿಮ್ರಾ ಪರ್ವಿನ್ ಅವರನ್ನು ಕರ್ನಾಟಕ ರಾಜ್ಯ ಶಿಕ್ಷಣ ಸಚಿವ ಮಧು ಬಂಗಾರಪ್ಪ ಸನ್ಮಾನಿಸಿದರು.

ನ್ಯಾಯಾಲಯದಲ್ಲಿ ಸರಕಾರಿ ಅಭಿಯೋಜಕ ( ಪಬ್ಲಿಕ್ ಪ್ರಾಸಿಕೂಟರ್) ಆಗಿರುವ ಮಹಮ್ಮದ್ ಶೌಕತ್ ಅಲಿ ಹಾಗೂ ಶಿಕ್ಷಕಿ ಸಫಿಯಾ ದಂಪತಿಯ ಪುತ್ರಿ ಯಾಗಿರುವ ಸಿಮ್ರಾ ಫರ್ವಿನ್ ಕಲಿಕೆ ಮತ್ತು ಕಲಿಕೇತರ ವಿಷಯದಲ್ಲೂ ಪ್ರತಿಭಾನ್ವಿತೆಯಾಗಿದ್ದಾರೆ.

ಬೆಂಗಳೂರಿನಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ಶಾಸಕರುಗಳಾದ ಎನ್.ಎ ಹಾರೀಸ್, ಬ್ಯಾರೀಸ್ ವೆಲ್ಫೇರ್ ಅಸೋಸಿಯೇಷನ್ ಅಧ್ಯಕ್ಷ ಬಿ.ಎಂ.ಫಾರೂಕ್, ಅತ್ತೂರು ಚಾಯಬ್ಬ, ಹಿರಿಯ ಪತ್ರಕರ್ತ ಬಿ.ಎಂ. ಹನೀಫ್ ಮೊದಲಾದ ಗಣ್ಯರು ಉಪಸ್ಥಿತರಿದ್ದರು.

Related posts

ಶ್ರೀರಾಮ ಕ್ಷೇತ್ರದ ಪೀಠಾಧೀಶ ಬ್ರಹ್ಮಾನಂದ ಶ್ರೀಗಳ ಚಾತುರ್ಮಾಸ್ಯ ವೃತ ಸಮಾರೋಪ ಸಮಾರಂಭ-ಸೀಮೋಲ್ಲಂಘನ

Suddi Udaya

ಸವಣಾಲು ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya

ಅಂತರಾಷ್ಟ್ರೀಯ ಸಮ್ಮೇಳನದಲ್ಲಿ ಎಸ್.ಡಿ.ಎಂ. ರಾಷ್ಟ್ರೀಯ ಸೇವಾ ಯೋಜನಾ ಸ್ವಯಂಸೇವಕರು

Suddi Udaya

ಬೆಳ್ತಂಗಡಿ ಬಿಎಂಎಸ್ ರಿಕ್ಷಾ ಚಾಲಕರ ಸಂಘದ ಸಂಯೋಜಿತ ಸಂಘವಾಗಿ ಕನ್ಯಾಡಿ ರಿಕ್ಷಾ ಪಾರ್ಕ್ ಸೇರ್ಪಡೆ

Suddi Udaya

ಮರದಿಂದ ಬಿದ್ದು ಬೆನ್ನುಮೂಳೆಗೆ ಗಂಭೀರ ಗಾಯ, ನೆರವಿನ ನಿರೀಕ್ಷೆಯಲ್ಲಿ ಶಿರ್ಲಾಲುವಿನ ಬಡ ಕುಟುಂಬ

Suddi Udaya

ಗೂಡಿನಿಂದ ಕೋಳಿಗಳನ್ನು ಹೊತ್ತೊಯ್ದಿ ಕಾಡುಪ್ರಾಣಿ

Suddi Udaya
error: Content is protected !!