25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಬೆಳ್ತಂಗಡಿಯಲ್ಲಿ ಲೋಕಾಯುಕ್ತ ಅಧಿಕಾರಿಗಳಿಂದ ಅಹವಾಲು ಸ್ವೀಕಾರ

ಬೆಳ್ತಂಗಡಿ: ಮಂಗಳೂರು ಲೋಕಾಯುಕ್ತ ವಿಭಾಗದ ಪೊಲೀಸ್ ಅಧೀಕ್ಷಕರು, ಪೊಲೀಸ್ ನಿರೀಕ್ಷಕರು ಹಾಗೂ ಸಿಬ್ಬಂದಿಗಳು ಜೂ.12 ರಂದು ಬೆಳ್ತಂಗಡಿ ತಾಲೂಕು ಕಚೇರಿಯಲ್ಲಿ ಸಾರ್ವಜನಿಕ ಜನಸಂಪರ್ಕ ಸಭೆ ನಡೆಸಿ, ಸಾರ್ವಜನಿಕರಿಂದ ಆಹವಾಲು ಸ್ವೀಕರಿಸಿದರು.


ಮಂಗಳೂರು ಲೋಕಾಯುಕ್ತ ವಿಭಾಗದ ಎಸ್.ಪಿ ನಟರಾಜ್ ಎಂ.ಎ ಅಧ್ಯಕ್ಷತೆ ವಹಿಸಿದ್ದರು. ಲೋಕಾಯುಕ್ತ ಪೊಲೀಸ್ ಇನ್ಸ್‌ಪೆಕ್ಟರ್ ಅಮನುಲ್ಲಾ ಎ. ಹಾಗೂ ಚಂದ್ರಶೇಖರ್ ಕೆ.ಎನ್ ಮತ್ತು ಚಂದ್ರಶೇಖರ್ ಸಿ.ಎಲ್, ಸಿಬ್ಬಂದಿಗಳಾದ ಮಹೇಶ್, ವಿನಾಯಕ್, ಡಿ.ಬಿ, ಪಾಪಣ್ಣ, ಧರ್ಣಪ್ಪ ಮೊದಲಾದವರು ಉಪಸ್ಥಿತರಿದ್ದರು.


ಸಭೆಯಲ್ಲಿ ಸಾರ್ವಜನಿಕರು ಸರಕಾರಿ ಇಲಾಖೆಗಳಲ್ಲಿ ಆಗುತ್ತಿರುವ ಸಮಸ್ಯೆಗಳ ಕುರಿತು ದೂರುಗಳನ್ನು ನೀಡಿದರು. ಮರೋಡಿ ಕೂಕ್ರಬೆಟ್ಟುವಿನ ಸುಬ್ರಹ್ಮಣ್ಯ ಭಟ್, ಹರಿಶ್ಚಂದ್ರ ತಾಮ್ಹಣ್‌ಕರ್ ಪಿಲ್ಯ, ಅರಸಿನಮಕ್ಕಿಯ ರಾಜು ಕೆ.ಕೆ, ಬೆಳ್ತಂಗಡಿಯ ವಿ.ಆರ್ ನಾಯಕ್, ಹೊಸಂಗಡಿಯ ರಾಜೇಶ್, ತಾ.ಪಂ ಮಾಜಿ ಸ್ಥಾಯಿ ಸಮಿತಿ ಅಧ್ಯಕ್ಷ ವಿ.ಟಿ ಸೆಬಾಸ್ಟಿನ್ ನೆರಿಯ ಅವರು ವಿವಿಧ ವಿಷಯಗಳ ಬಗ್ಗೆ ದೂರು ನೀಡಿದರು. ಲೋಕಾಯುಕ್ತ ಅಧಿಕಾರಿಗಳು ದೂರನ್ನು ಸ್ವೀಕರಿಸಿ, ಕೆಲವೊಂದು ದೂರುಗಳ ಬಗ್ಗೆ ಕಂದಾಯ, ಸರ್ವೆ ಇಲಾಖೆಯ ಅಧಿಕಾರಿಗಳನ್ನು ವಿಚಾರಿಸಿ ದೂರುದಾರರಿಗೆ ಮಾಹಿತಿ ನೀಡಿದರು.

Related posts

ಹಜ್ ಯಾತ್ರಿಗೆ ಪೆರಾಲ್ದರಕಟ್ಟೆ ಜುಮಾ ಮಸ್ಜಿದ್ ಕಮಿಟಿಯಿಂದ ಬೀಳ್ಕೊಡುಗೆ

Suddi Udaya

ಜಿಲ್ಲಾ ಮಟ್ಟದ ಟೇಬಲ್ ಟೆನ್ನಿಸ್ ಪಂದ್ಯಾಟ: ಪ್ರಸನ್ನ ಪಿ ಯು ಕಾಲೇಜಿನ ವಿದ್ಯಾರ್ಥಿ ಚಂದನ್ ಬಿ.ಯು. ಬೆಳ್ಳಿ ಪದಕ

Suddi Udaya

ಬೆಳ್ತಂಗಡಿ: ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶ: ಚಪ್ಪರ ಮಹೂರ್ತ

Suddi Udaya

ನಿಯಂತ್ರಣ ತಪ್ಪಿ ಮೋರಿಗೆ ಡಿಕ್ಕಿ ಹೊಡೆದ ಬೈಕ್ : ಇಂದಬೆಟ್ಟು ನಿವಾಸಿ ಜೋಶನ್ ಸ್ಥಳದಲ್ಲೇ ಸಾವು

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳದ ಅನ್ನಪೂರ್ಣ ಛತ್ರದಲ್ಲಿ ಸೆಲ್ಕೋ ಪೌಂಢೇಶನ್ ಪ್ರಾಯೋಜಕತ್ವದಲ್ಲಿ ಅಳವಡಿಸಲಾದ ಸೌರ ವಿದ್ಯುತ್ ಘಟಕಕ್ಕೆ ಧರ್ಮಾಧಿಕಾರಿ ಡಾ.ಡಿ. ವೀರೇಂದ್ರ ಹೆಗ್ಗಡೆಯವರಿಂದ ಚಾಲನೆ

Suddi Udaya

ಅಕ್ಷರ ಕಲಿಸುವ ವಿದ್ಯಾ ದೇಗುಲಕ್ಕೆ ಖದೀಮರ ಕನ್ನ, ಕಣಿಯೂರಿನ ಪಿಲಿಗೂಡು ಶಾಲೆ ಬೀಗ ಒಡೆದು‌ ಕಳ್ಳತನ:

Suddi Udaya
error: Content is protected !!