July 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಬೆಳ್ತಂಗಡಿಯಲ್ಲಿ ಲೋಕಾಯುಕ್ತ ಅಧಿಕಾರಿಗಳಿಂದ ಅಹವಾಲು ಸ್ವೀಕಾರ

ಬೆಳ್ತಂಗಡಿ: ಮಂಗಳೂರು ಲೋಕಾಯುಕ್ತ ವಿಭಾಗದ ಪೊಲೀಸ್ ಅಧೀಕ್ಷಕರು, ಪೊಲೀಸ್ ನಿರೀಕ್ಷಕರು ಹಾಗೂ ಸಿಬ್ಬಂದಿಗಳು ಜೂ.12 ರಂದು ಬೆಳ್ತಂಗಡಿ ತಾಲೂಕು ಕಚೇರಿಯಲ್ಲಿ ಸಾರ್ವಜನಿಕ ಜನಸಂಪರ್ಕ ಸಭೆ ನಡೆಸಿ, ಸಾರ್ವಜನಿಕರಿಂದ ಆಹವಾಲು ಸ್ವೀಕರಿಸಿದರು.


ಮಂಗಳೂರು ಲೋಕಾಯುಕ್ತ ವಿಭಾಗದ ಎಸ್.ಪಿ ನಟರಾಜ್ ಎಂ.ಎ ಅಧ್ಯಕ್ಷತೆ ವಹಿಸಿದ್ದರು. ಲೋಕಾಯುಕ್ತ ಪೊಲೀಸ್ ಇನ್ಸ್‌ಪೆಕ್ಟರ್ ಅಮನುಲ್ಲಾ ಎ. ಹಾಗೂ ಚಂದ್ರಶೇಖರ್ ಕೆ.ಎನ್ ಮತ್ತು ಚಂದ್ರಶೇಖರ್ ಸಿ.ಎಲ್, ಸಿಬ್ಬಂದಿಗಳಾದ ಮಹೇಶ್, ವಿನಾಯಕ್, ಡಿ.ಬಿ, ಪಾಪಣ್ಣ, ಧರ್ಣಪ್ಪ ಮೊದಲಾದವರು ಉಪಸ್ಥಿತರಿದ್ದರು.


ಸಭೆಯಲ್ಲಿ ಸಾರ್ವಜನಿಕರು ಸರಕಾರಿ ಇಲಾಖೆಗಳಲ್ಲಿ ಆಗುತ್ತಿರುವ ಸಮಸ್ಯೆಗಳ ಕುರಿತು ದೂರುಗಳನ್ನು ನೀಡಿದರು. ಮರೋಡಿ ಕೂಕ್ರಬೆಟ್ಟುವಿನ ಸುಬ್ರಹ್ಮಣ್ಯ ಭಟ್, ಹರಿಶ್ಚಂದ್ರ ತಾಮ್ಹಣ್‌ಕರ್ ಪಿಲ್ಯ, ಅರಸಿನಮಕ್ಕಿಯ ರಾಜು ಕೆ.ಕೆ, ಬೆಳ್ತಂಗಡಿಯ ವಿ.ಆರ್ ನಾಯಕ್, ಹೊಸಂಗಡಿಯ ರಾಜೇಶ್, ತಾ.ಪಂ ಮಾಜಿ ಸ್ಥಾಯಿ ಸಮಿತಿ ಅಧ್ಯಕ್ಷ ವಿ.ಟಿ ಸೆಬಾಸ್ಟಿನ್ ನೆರಿಯ ಅವರು ವಿವಿಧ ವಿಷಯಗಳ ಬಗ್ಗೆ ದೂರು ನೀಡಿದರು. ಲೋಕಾಯುಕ್ತ ಅಧಿಕಾರಿಗಳು ದೂರನ್ನು ಸ್ವೀಕರಿಸಿ, ಕೆಲವೊಂದು ದೂರುಗಳ ಬಗ್ಗೆ ಕಂದಾಯ, ಸರ್ವೆ ಇಲಾಖೆಯ ಅಧಿಕಾರಿಗಳನ್ನು ವಿಚಾರಿಸಿ ದೂರುದಾರರಿಗೆ ಮಾಹಿತಿ ನೀಡಿದರು.

Related posts

ಕ್ಯಾಂಪ್ಕೊ ನಿಯಮಿತ ಮಂಗಳೂರು “ಸಾಂತ್ವನ” ಯೋಜನೆಯಡಿ ಕನ್ನಾಜೆಯ ಬೆನೆಡಿಕ್ಟ್ ವೇಗಸ್ ರಿಗೆ ವೈದ್ಯಕೀಯ ನೆರವು

Suddi Udaya

ಡಿ.14: ಮುಂಡೂರು ನಾಗಾಂಬಿಕಾ ಕ್ಷೇತ್ರದಲ್ಲಿ 40ಕ್ಕೂ ಮಿಕ್ಕಿ ಭಜನಾ ಮಂಡಳಿಗಳಿಂದ ಏಕಕಾಲದಲ್ಲಿ ಕಣಿತ ಭಜನೋತ್ಸವ

Suddi Udaya

ಮಡಂತ್ಯಾರು ರೋಟರಿ ಕ್ಲಬ್ ವತಿಯಿಂದ ಉದ್ಯಮಿ ವಾಸುದೇವ ಗೌಡ ರಿಗೆ ಸನ್ಮಾನ

Suddi Udaya

ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಎಂಡೋಸ್ಕೋಪಿಕ್ ಸ್ಪೈನಲ್ ಸರ್ಜರಿ

Suddi Udaya

ಆಯುಷ್ಮಾನ್ ಭಾರತ್ ಯೋಜನೆಯಲ್ಲಿ ಕ್ಯಾನ್ಸರ್ ರೋಗಿಗಳಿಗೆ ಚಿಕಿತ್ಸೆ ಪಡೆಯಲು ಮಂಗಳೂರಿನಲ್ಲಿರುವ ಎಂಐಯು ಆಸ್ಪತ್ರೆಯಲ್ಲಿ ಕರ್ನಾಟಕ ರಾಜ್ಯದ ಎಲ್ಲಾ ರೋಗಿಗಳಿಗೆ ನೇರವಾಗಿ ದಾಖಲಾತಿಗೆ ಅವಕಾಶ ಮಾಡಿಕೊಡಬೇಕು ಸದನದಲ್ಲಿ :ಶಾಸಕಹರೀಶ್ ಪೂಂಜಾ

Suddi Udaya

ಧರ್ಮಸ್ಥಳ ಗ್ರಾ.ಪಂ. ನಿಂದ ಅನಧಿಕೃತ ಬ್ಯಾನರ್, ಬಂಟಿಂಗ್ಸ್, ಜಾಹೀರಾತು ಫಲಕ ತೆರವು

Suddi Udaya
error: Content is protected !!