ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಬೆಳ್ತಂಗಡಿಯಲ್ಲಿ ಲೋಕಾಯುಕ್ತ ಅಧಿಕಾರಿಗಳಿಂದ ಅಹವಾಲು ಸ್ವೀಕಾರ

ಬೆಳ್ತಂಗಡಿ: ಮಂಗಳೂರು ಲೋಕಾಯುಕ್ತ ವಿಭಾಗದ ಪೊಲೀಸ್ ಅಧೀಕ್ಷಕರು, ಪೊಲೀಸ್ ನಿರೀಕ್ಷಕರು ಹಾಗೂ ಸಿಬ್ಬಂದಿಗಳು ಜೂ.12 ರಂದು ಬೆಳ್ತಂಗಡಿ ತಾಲೂಕು ಕಚೇರಿಯಲ್ಲಿ ಸಾರ್ವಜನಿಕ ಜನಸಂಪರ್ಕ ಸಭೆ ನಡೆಸಿ, ಸಾರ್ವಜನಿಕರಿಂದ ಆಹವಾಲು ಸ್ವೀಕರಿಸಿದರು.


ಮಂಗಳೂರು ಲೋಕಾಯುಕ್ತ ವಿಭಾಗದ ಎಸ್.ಪಿ ನಟರಾಜ್ ಎಂ.ಎ ಅಧ್ಯಕ್ಷತೆ ವಹಿಸಿದ್ದರು. ಲೋಕಾಯುಕ್ತ ಪೊಲೀಸ್ ಇನ್ಸ್‌ಪೆಕ್ಟರ್ ಅಮನುಲ್ಲಾ ಎ. ಹಾಗೂ ಚಂದ್ರಶೇಖರ್ ಕೆ.ಎನ್ ಮತ್ತು ಚಂದ್ರಶೇಖರ್ ಸಿ.ಎಲ್, ಸಿಬ್ಬಂದಿಗಳಾದ ಮಹೇಶ್, ವಿನಾಯಕ್, ಡಿ.ಬಿ, ಪಾಪಣ್ಣ, ಧರ್ಣಪ್ಪ ಮೊದಲಾದವರು ಉಪಸ್ಥಿತರಿದ್ದರು.


ಸಭೆಯಲ್ಲಿ ಸಾರ್ವಜನಿಕರು ಸರಕಾರಿ ಇಲಾಖೆಗಳಲ್ಲಿ ಆಗುತ್ತಿರುವ ಸಮಸ್ಯೆಗಳ ಕುರಿತು ದೂರುಗಳನ್ನು ನೀಡಿದರು. ಮರೋಡಿ ಕೂಕ್ರಬೆಟ್ಟುವಿನ ಸುಬ್ರಹ್ಮಣ್ಯ ಭಟ್, ಹರಿಶ್ಚಂದ್ರ ತಾಮ್ಹಣ್‌ಕರ್ ಪಿಲ್ಯ, ಅರಸಿನಮಕ್ಕಿಯ ರಾಜು ಕೆ.ಕೆ, ಬೆಳ್ತಂಗಡಿಯ ವಿ.ಆರ್ ನಾಯಕ್, ಹೊಸಂಗಡಿಯ ರಾಜೇಶ್, ತಾ.ಪಂ ಮಾಜಿ ಸ್ಥಾಯಿ ಸಮಿತಿ ಅಧ್ಯಕ್ಷ ವಿ.ಟಿ ಸೆಬಾಸ್ಟಿನ್ ನೆರಿಯ ಅವರು ವಿವಿಧ ವಿಷಯಗಳ ಬಗ್ಗೆ ದೂರು ನೀಡಿದರು. ಲೋಕಾಯುಕ್ತ ಅಧಿಕಾರಿಗಳು ದೂರನ್ನು ಸ್ವೀಕರಿಸಿ, ಕೆಲವೊಂದು ದೂರುಗಳ ಬಗ್ಗೆ ಕಂದಾಯ, ಸರ್ವೆ ಇಲಾಖೆಯ ಅಧಿಕಾರಿಗಳನ್ನು ವಿಚಾರಿಸಿ ದೂರುದಾರರಿಗೆ ಮಾಹಿತಿ ನೀಡಿದರು.

Related posts

ಪತ್ನಿಯನ್ನು ಕೊಂದು ತಾನೂ ಆತ್ಮಹತ್ಯೆಗೆ ಶರಣಾದ ಪತಿ

Suddi Udaya

ಬೆಳ್ತಂಗಡಿ: ಬಿಜೆಪಿ ಯುವಮೋರ್ಚಾದ ವತಿಯಿಂದ 4ನೇ ವರ್ಷದ ದೀಪಾವಳಿ ‘ದೋಸೆ ಹಬ್ಬ’ ಉದ್ಘಾಟನೆ

Suddi Udaya

ಚಾರ್ಮಾಡಿ ಹೊಸಮಠ ಪ್ರದೇಶದಲ್ಲಿ ಓಣಂ ಆಚರಣೆ

Suddi Udaya

ಧರ್ಮಸ್ಥಳ ಶ್ರೀ ಮಂ.ಸ್ವಾ.ಅ. ಹಿ.ಪ್ರಾ. ಶಾಲೆಯಲ್ಲಿ ಗಣರಾಜ್ಯೋತ್ಸವ ಆಚರಣೆ

Suddi Udaya

ಎನ್.ಇ.ಟಿ. ನರ್ಸಿಂಗ್ ಕಾಲೇಜಿನಲ್ಲಿ ಬಿ.ಎಸ್.ಸಿ. ನರ್ಸಿಂಗ್ ವಿದ್ಯಾರ್ಥಿಗಳ ದೀಪ ಬೆಳಗಿಸುವಿಕೆ ಮತ್ತು ಪ್ರಮಾಣ ವಚನ ಸ್ವೀಕಾರ ಸಮಾರಂಭ

Suddi Udaya

ಮೇ.31ಕ್ಕೆ ನಿವೃತ್ತರಾಗುತ್ತಿರುವ ಟೀಚರ್ಸ್ ಕೋಪರೇಟಿವ್ ಬ್ಯಾಂಕ್ ಮೆನೇಜರ್ ಲ| ರವೀಂದ್ರ ಶೆಟ್ಟಿ ಬಳಂಜ

Suddi Udaya
error: Content is protected !!