25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬೆಳ್ತಂಗಡಿ ಮೆಟ್ರಿಕ್ ನಂತರದ ಬಾಲಕರ ವಸತಿ ನಿಲಯಕ್ಕೆ ಲೋಕಾಯುಕ್ತ ಅಧಿಕಾರಿಗಳ ಭೇಟಿ: ವಿವಿಧ ವಿಭಾಗಗಳ ಪರಿಶೀಲನೆ

ಬೆಳ್ತಂಗಡಿ : ಬೆಳ್ತಂಗಡಿ ಪದವಿಪೂರ್ವ ಕಾಲೇಜು ಬಳಿ ಇರುವ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವ್ಯಾಪ್ತಿಗೆ ಒಳಪಟ್ಟ ಡಿ. ದೇವರಾಜ ಅರಸು ಹಿಂದುಳಿದ ವರ್ಗಗಳ ಮೆಟ್ರಿಕ್ ನಂತರದ ಬಾಲಕರ ವಸತಿನಿಲಯಕ್ಕೆ ಲೋಕಾಯುಕ್ತ ಅಧಿಕಾರಿಗಳು ಬುಧವಾರ(ಜೂ12) ಭೇಟಿ ನೀಡಿ ವಸತಿ ನಿಲಯದ ವಿವಿಧ ವಿಭಾಗಗಳನ್ನು ಪರಿಶೀಲನೆ ನಡೆಸಿ, ಮಕ್ಕಳಿಗೆ ಮೂಲ ಭೂತ ಸೌಕರ್ಯಗಳನ್ನು ಒದಗಿಸಲಾಗಿದೆಯೇ ಎಂದು ವಿಚಾರಣೆ ನಡೆಸಿ, ಸೂಕ್ತ ಮಾರ್ಗದರ್ಶನ ನೀಡಿದರು.


ಕುಡಿಯುವ ನೀರು, ಅಡುಗೆಕೋಣೆ, ವಿಶ್ರಾಂತಿ ಕೊಠಡಿ, ಶೌಚಾಲಯ ವ್ಯವಸ್ಥೆಗಳ ಪರಿಶಿಲನೆ ಮಾಡಿದ ಅಧಿಕಾರಿಗಳು ವಸತಿನಿಲಯದ ಮೆಲ್ವಿಚಾರಕರಿಂದ ಮಾಹಿತಿ ಪಡೆದರು. ಅಡುಗೆ ಕೋಣೆ ಪರಿಶೀಲಿಸಿದ ಅಧಿಕಾರಿಗಳು ಆಹಾರ ದಾಸ್ತಾನು ಡಬ್ವಗಳ ಪರಿಶೀಲನೆ ಮಾಡಿದರು. ಮಳೆಗಾಲದಲ್ಲಿ ಮಕ್ಕಳಿಗೆ ಬಿಸಿ ನೀರು ಕೊಡಬೇಕು, ಸಣ್ಣ ಪುಟ್ಟ ಅನಾರೋಗ್ಯ ಕಂಡು ಬಂದರೆ ತಕ್ಷಣ ಸ್ಥಳೀಯ ಆರೋಗ್ಯ ಕೇಂದ್ರಕ್ಕೆ ಕರೆದುಕೊಂಡು ಹೊಗುವಂತೆ ಸೂಚಿಸಿದರು. ಈ ಬಗ್ಗೆ ನಿರ್ಲಕ್ಷ್ಯ ಕಂಡುಬಂದರೆ ಲೋಕಾಯುಕ್ತ ಸಂಬಂಧ ಪಟ್ಟ ಅಧಿಕಾರಿಗಳ ಮೇಲೆ ಕ್ರಮಕೈಗೊಳ್ಳುವ ಎಚ್ಚರಿಕೆ ನೀಡಿದರು.


ವಿದ್ಯಾರ್ಥಿಗಳಲ್ಲಿ ಮಾಹಿತಿ ಸಂಗ್ರಹಿಸಿದ ಅಧಿಕಾರಿಗಳು ಆಹಾರ ವ್ಯವಸ್ಥೆ, ಇನ್ನಿತರ ಸೌಲಭ್ಯಗಳ ಬಗ್ಗೆ ಮಾಹಿತಿ ಪಡೆದರು. ಉತ್ತಮ ಶಿಕ್ಷಣ ಪಡೆದು ಸಮಾಜದಲ್ಲಿ ಉತ್ತಮ ವ್ಯಕ್ತಿಗಳಾಗಬೇಕು, ವಸತಿ ನಿಲಯದಲ್ಲಿ ಸಮಸ್ಯೆ ಬಂದರೆ ಲೋಕಾಯುಕ್ತಕ್ಕೆ ದೂರು ನೀಡಲು ತಿಳಿಸಿದರು. ವಸತಿನಿಲಯದ ವಿದ್ಯಾರ್ಥಿಗಳು 100% ಫಲಿತಾಂಶ ಪಡೆದ ಬಗ್ಗೆ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಜೋಸೆಫ್ ಮಾಹಿತಿ ನೀಡಿದರು. ಇದಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ ಅಧಿಕಾರಿಗಳು ಸ್ಥಳೀಯ ಸಂಘ ಸಂಸ್ಥೆಗಳ ಸಂಪರ್ಕ ಪಡೆದು ಇಂತಹ ವಿದ್ಯಾರ್ಥಿಗಳಿಗೆ, ವಸತಿನಿಲಯದ ಸಿಬ್ಬಂದಿಗಳನ್ನು ಗುರುತಿಸಬೇಕು ಎಂದು ಸೂಚಿಸಿದರು.


ಲೋಕಾಯುಕ್ತ ಎಸ್ ಪಿ ನಟರಾಜ್ ಮಾರ್ಗದರ್ಶನದಲ್ಲಿ ಇನ್ಪೆಕ್ಟರುಗಳಾದ ಚಂದ್ರಶೇಖರ ಸಿ ಎಲ್, ಚಂದ್ರಶೇಖರ ಕೆ ಎನ್, ಅಮಾನುಲ್ಲಾ, ಸಿಬ್ಬಂದಿಗಳಾದ ವಿನಾಯಕ್, ಮಹೇಶ್, ಪಾಪಣ್ಣ ಭೇಟಿ ನೀಡಿ ಪರಿಶೀಲನೆ ನಡೆಸಿದರು.

Related posts

ತ್ರೋಬಾಲ್ ಪಂದ್ಯಾಟ: ಕುವೆಟ್ಟು ಸ.ಉ.ಹಿ.ಪ್ರಾ.ಶಾಲೆಯ ವಿದ್ಯಾರ್ಥಿನಿಯರು ಪ್ರಥಮ ಸ್ಥಾನ

Suddi Udaya

ಜೆಸಿಐ ಬೆಳ್ತಂಗಡಿಯಿಂದ ಪ್ರವರ್ತಿತಗೊಂಡು ಜೆಸಿಐ ಉಜಿರೆ ಸಿಟಿ ಘಟಕದ ಮರು ಸ್ಥಾಪನೆ: ಯುವ ಉದ್ಯಮಿ ಮಹಮ್ಮದ್ ಮಿರ್ಷಾದ್ ಅಧ್ಯಕ್ಷರಾಗಿ ಪದ ಸ್ವೀಕಾರ.

Suddi Udaya

ಮೇ 12 : ರೂ.2.50 ಕೋಟಿ ವೆಚ್ಚದಲ್ಲಿ ನಿರ್ಮಾಣಗೊಂಡ ಕೊಕ್ರಾಡಿ ಪ್ರೌಢಶಾಲೆ-ಕಾಲೇಜಿನ ನೂತನ ಕೊಠಡಿಗಳ ಉದ್ಘಾಟನೆ

Suddi Udaya

ಕೊಕ್ಕಡ: ಮಜ್ದೂರ್ ಸಂಘದ ಕೊಕ್ಕಡ ವಲಯದ ನೂತನ ಕಛೇರಿಯ ಉದ್ಘಾಟನೆ

Suddi Udaya

ನಿಡ್ಲೆ: ಬರೆಂಗಾಯದಲ್ಲಿ ವನದುರ್ಗಾರಾಧನೆ, ವರ್ಷಾವಧಿ ನೇಮೋತ್ಸವ

Suddi Udaya

ನಾಲ್ಕೂರು ಬೋವಾಡಿ ದೈವಸ್ಥಾನದಲ್ಲಿ ದೊಂಪದ ಬಲಿ ಉತ್ಸವ: ಶ್ರೀ ಕೊಡಮಣಿತ್ತಾಯ ಹಾಗೂ ಕಲ್ಲುರ್ಟಿ, ಕಲ್ಕುಡ ದೈವಗಳ ನೇಮೋತ್ಸವ

Suddi Udaya
error: Content is protected !!