July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬೆಳ್ತಂಗಡಿ ಮೆಟ್ರಿಕ್ ನಂತರದ ಬಾಲಕರ ವಸತಿ ನಿಲಯಕ್ಕೆ ಲೋಕಾಯುಕ್ತ ಅಧಿಕಾರಿಗಳ ಭೇಟಿ: ವಿವಿಧ ವಿಭಾಗಗಳ ಪರಿಶೀಲನೆ

ಬೆಳ್ತಂಗಡಿ : ಬೆಳ್ತಂಗಡಿ ಪದವಿಪೂರ್ವ ಕಾಲೇಜು ಬಳಿ ಇರುವ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವ್ಯಾಪ್ತಿಗೆ ಒಳಪಟ್ಟ ಡಿ. ದೇವರಾಜ ಅರಸು ಹಿಂದುಳಿದ ವರ್ಗಗಳ ಮೆಟ್ರಿಕ್ ನಂತರದ ಬಾಲಕರ ವಸತಿನಿಲಯಕ್ಕೆ ಲೋಕಾಯುಕ್ತ ಅಧಿಕಾರಿಗಳು ಬುಧವಾರ(ಜೂ12) ಭೇಟಿ ನೀಡಿ ವಸತಿ ನಿಲಯದ ವಿವಿಧ ವಿಭಾಗಗಳನ್ನು ಪರಿಶೀಲನೆ ನಡೆಸಿ, ಮಕ್ಕಳಿಗೆ ಮೂಲ ಭೂತ ಸೌಕರ್ಯಗಳನ್ನು ಒದಗಿಸಲಾಗಿದೆಯೇ ಎಂದು ವಿಚಾರಣೆ ನಡೆಸಿ, ಸೂಕ್ತ ಮಾರ್ಗದರ್ಶನ ನೀಡಿದರು.


ಕುಡಿಯುವ ನೀರು, ಅಡುಗೆಕೋಣೆ, ವಿಶ್ರಾಂತಿ ಕೊಠಡಿ, ಶೌಚಾಲಯ ವ್ಯವಸ್ಥೆಗಳ ಪರಿಶಿಲನೆ ಮಾಡಿದ ಅಧಿಕಾರಿಗಳು ವಸತಿನಿಲಯದ ಮೆಲ್ವಿಚಾರಕರಿಂದ ಮಾಹಿತಿ ಪಡೆದರು. ಅಡುಗೆ ಕೋಣೆ ಪರಿಶೀಲಿಸಿದ ಅಧಿಕಾರಿಗಳು ಆಹಾರ ದಾಸ್ತಾನು ಡಬ್ವಗಳ ಪರಿಶೀಲನೆ ಮಾಡಿದರು. ಮಳೆಗಾಲದಲ್ಲಿ ಮಕ್ಕಳಿಗೆ ಬಿಸಿ ನೀರು ಕೊಡಬೇಕು, ಸಣ್ಣ ಪುಟ್ಟ ಅನಾರೋಗ್ಯ ಕಂಡು ಬಂದರೆ ತಕ್ಷಣ ಸ್ಥಳೀಯ ಆರೋಗ್ಯ ಕೇಂದ್ರಕ್ಕೆ ಕರೆದುಕೊಂಡು ಹೊಗುವಂತೆ ಸೂಚಿಸಿದರು. ಈ ಬಗ್ಗೆ ನಿರ್ಲಕ್ಷ್ಯ ಕಂಡುಬಂದರೆ ಲೋಕಾಯುಕ್ತ ಸಂಬಂಧ ಪಟ್ಟ ಅಧಿಕಾರಿಗಳ ಮೇಲೆ ಕ್ರಮಕೈಗೊಳ್ಳುವ ಎಚ್ಚರಿಕೆ ನೀಡಿದರು.


ವಿದ್ಯಾರ್ಥಿಗಳಲ್ಲಿ ಮಾಹಿತಿ ಸಂಗ್ರಹಿಸಿದ ಅಧಿಕಾರಿಗಳು ಆಹಾರ ವ್ಯವಸ್ಥೆ, ಇನ್ನಿತರ ಸೌಲಭ್ಯಗಳ ಬಗ್ಗೆ ಮಾಹಿತಿ ಪಡೆದರು. ಉತ್ತಮ ಶಿಕ್ಷಣ ಪಡೆದು ಸಮಾಜದಲ್ಲಿ ಉತ್ತಮ ವ್ಯಕ್ತಿಗಳಾಗಬೇಕು, ವಸತಿ ನಿಲಯದಲ್ಲಿ ಸಮಸ್ಯೆ ಬಂದರೆ ಲೋಕಾಯುಕ್ತಕ್ಕೆ ದೂರು ನೀಡಲು ತಿಳಿಸಿದರು. ವಸತಿನಿಲಯದ ವಿದ್ಯಾರ್ಥಿಗಳು 100% ಫಲಿತಾಂಶ ಪಡೆದ ಬಗ್ಗೆ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಜೋಸೆಫ್ ಮಾಹಿತಿ ನೀಡಿದರು. ಇದಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ ಅಧಿಕಾರಿಗಳು ಸ್ಥಳೀಯ ಸಂಘ ಸಂಸ್ಥೆಗಳ ಸಂಪರ್ಕ ಪಡೆದು ಇಂತಹ ವಿದ್ಯಾರ್ಥಿಗಳಿಗೆ, ವಸತಿನಿಲಯದ ಸಿಬ್ಬಂದಿಗಳನ್ನು ಗುರುತಿಸಬೇಕು ಎಂದು ಸೂಚಿಸಿದರು.


ಲೋಕಾಯುಕ್ತ ಎಸ್ ಪಿ ನಟರಾಜ್ ಮಾರ್ಗದರ್ಶನದಲ್ಲಿ ಇನ್ಪೆಕ್ಟರುಗಳಾದ ಚಂದ್ರಶೇಖರ ಸಿ ಎಲ್, ಚಂದ್ರಶೇಖರ ಕೆ ಎನ್, ಅಮಾನುಲ್ಲಾ, ಸಿಬ್ಬಂದಿಗಳಾದ ವಿನಾಯಕ್, ಮಹೇಶ್, ಪಾಪಣ್ಣ ಭೇಟಿ ನೀಡಿ ಪರಿಶೀಲನೆ ನಡೆಸಿದರು.

Related posts

ಮದ್ದಡ್ಕ ಸಮೀಪ ನೇರಳಕಟ್ಟೆಯಲ್ಲಿ ಚಿನ್ನಾಭರಣ ಕಳವು ಪ್ರಕರಣ: ಅಂದಾಜು 56 ಗ್ರಾಂ ಚಿನ್ನಾಭರಣ ಕಳವುಗೈದು ಪರಾರಿಯಾದ ಕಳ್ಳರು

Suddi Udaya

ಒಕ್ಕಲಿಗ ಮುಖಂಡರಿಂದ ಆದಿಚುಂಚನಗಿರಿ ಶ್ರೀಗಳ ಭೇಟಿ

Suddi Udaya

ಇಂದಬೆಟ್ಟು: ಅತಿಕ್ರಮಣ ತೆರವುಗೊಳಿಸಲು ತಹಶೀಲ್ದಾರ್ ಮಾಡಿದ ಪ್ರಕ್ರಿಯೆಯನ್ನು ರದ್ದುಗೊಳಿಸಿದ ಹೈಕೋರ್ಟು

Suddi Udaya

ಅಕ್ರಮವಾಗಿ ಮನೆಯಲ್ಲಿ ಜೂಜಾಟ ಆಡುತ್ತಿದ್ದ ಸ್ಥಳಕ್ಕೆ ಬೆಳ್ತಂಗಡಿ ಪೊಲೀಸರ ದಾಳಿ: ಆರೋಪಿಗಳ ಸಹಿತ ನಗದು ಹಾಗೂ ಇತರ ಸೊತ್ತುಗಳು ವಶ

Suddi Udaya

ಮಚ್ಚಿನ ಮಾರಿಗುಡಿ ಶ್ರೀ ಮಾರಿಕಾಂಬ ದೇವಿ ಸನ್ನಿಧಿಯಲ್ಲಿ ವರ್ಧಂತ್ಯುತ್ಸವ ಹಾಗೂ ವಾರ್ಷಿಕ ದೊಂಪದ ಬಲಿ ನೇಮೋತ್ಸವ

Suddi Udaya

ಧರ್ಮಸ್ಥಳ: ಆಸರೆ ಆನಿಮಲ್ ಟ್ರಸ್ಟ್ ಗೆ ಮೊದಲ ಸೇವಾ ಯೋಜನೆ ಹಸ್ತಾಂತರ

Suddi Udaya
error: Content is protected !!