September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ಲಯನ್ಸ್ ಕ್ಲಬ್‌ನಿಂದ ಡಾ.ಡಿ. ವೀರೇಂದ್ರ ಹೆಗ್ಗಡೆಯವರ ಭೇಟಿ

ಬೆಳ್ತಂಗಡಿ : ಧರ್ಮಸ್ಥಳದಲ್ಲಿ ಲಯನ್ಸ್ ಕ್ಲಬ್ ನಿಂದ ಧರ್ಮಾಧಿಕಾರಿ ಡಾ. ಡಿ ವೀರೇಂದ್ರ ಹೆಗ್ಗಡೆಯವರನ್ನು ಜೂ.9 ರಂದು ಭೇಟಿ ಮಾಡಿ 50 ಸಂವತ್ಸರಗಳನ್ನು ಪೂರೈಸಿದ ಲಯನ್ಸ್ ಕ್ಲಬ್ ಬೆಳ್ತಂಗಡಿಯ ಸಾರ್ಥಕ ಸೇವೆಯ ಸವಿನೆನಪಿಗಾಗಿ ಜೂ.23ರಂದು ನಡೆಯಲಿರುವ ” ಸುವರ್ಣ ಸಂಭ್ರಮ” ದಿನಾಚರಣೆಗೆ ಆಹ್ವಾನ ನೀಡಿ ನಂತರ ರೂ.1 ಕೋಟಿ ವೆಚ್ಚದಲ್ಲಿ ನಿರ್ಮಾಣಗೊಳ್ಳಲಿರುವ ನೂತನ ಸಭಾಂಗಣಕ್ಕೆ ದೇಣಿಗೆಗಾಗಿ ಮನವಿ ಪತ್ರ ಸಲ್ಲಿಸಲಾಯಿತು.

ಈ ವೇಳೆ ಜು.13ರಂದು ನಡೆಯಲಿರುವ 2024-25ನೇ ಸಾಲಿನ ನೂತನ ಸಾರಥಿ ಲಯನ್ ದೇವದಾಸ್ ಶೆಟ್ಟಿ ಮತ್ತು ತಂಡದ ಪದಗ್ರಹಣ ಸಮಾರಂಭದ ಆಮಂತ್ರಣ ಪತ್ರಿಕೆಯನ್ನು ಬಿಡುಗಡೆಗೊಳಿಸಿ ಶುಭ ಹಾರೈಸಿದರು. ನಂತರ ಹೆಗ್ಗಡೆಯವರು ಲಯನ್ಸ್ ಭವನದ ಉದ್ಘಾಟನೆಗೆ ಬರುವ ಭರವಸೆ ಮತ್ತು ಅನುದಾನ ನೀಡುವುದಾಗಿ ಭರವಸೆ ನೀಡಿದರು.

ಈ ಸಂದರ್ಭದಲ್ಲಿ ಲಯನ್ಸ್ ಕ್ಲಬ್ ಅಧ್ಯಕ್ಷ ಉಮೇಶ್ ಶೆಟ್ಟಿ, ಕಾರ್ಯದರ್ಶಿ ಅನಂತ ಕೃಷ್ಣ, ಕೋಶಾಧಿಕಾರಿ ದತ್ತಾತ್ರೇಯ ಗೊಲ್ಲ, ಸ್ಥಾಪಕ ಅಧ್ಯಕ್ಷ ಎಂ.ಜಿ ಶೆಟ್ಟಿ, ವಿ.ಆರ್ ನಾಯಕ್, ಮಾಜಿ ಅಧ್ಯಕ್ಷ ವಸಂತ್ ಶೆಟ್ಟಿ, ಧರಣೇಂದ್ರ ಜೈನ್, ರವೀಂದ್ರ ಶೆಟ್ಟಿ, ಪ್ರಕಾಶ್ ಶೆಟ್ಟಿ ನೊಚ್ಚ, ನಿತ್ಯಾನಂದ ನಾವರ, ಜಯರಾಮ್ ಭಂಡಾರಿ, ಹೇಮಂತ್ ರಾವ್, ಜಯಂತ ಶೆಟ್ಟಿ, ರಾಜು ಶೆಟ್ಟಿ, ದೇವಿಪ್ರಸಾದ್ ಬೋಲ್ಮ, ನಿಯೋಜಿತ ಅಧ್ಯಕ್ಷ ದೇವದಾಸ್ ಶೆಟ್ಟಿ, ಕಾರ್ಯದರ್ಶಿ ಕಿರಣ್ ಕುಮಾರ್ ಶೆಟ್ಟಿ, ಸದಸ್ಯರಾದ ಕೃಷ್ಣಾಚಾರ್, ನ್ಯಾಣಪ್ಪ, ಲಿವೋ ಕಾರ್ಯದರ್ಶಿ ನಿರೀಕ್ಷಾ ಉಪಸ್ಥಿತರಿದ್ದರು.

Related posts

ನಡ ಗ್ರಾ.ಪಂ. ದ್ವಿತೀಯ ಸುತ್ತಿನ ಗ್ರಾಮಸಭೆ

Suddi Udaya

ತಾಲೂಕಿನಲ್ಲಿ ಅತೀ ಹೆಚ್ಚು ಕೃಷಿ ಉಪಕರಣ ಖರೀದಿಸಿದ ಕಳಿಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ಪ್ರೋತ್ಸಾಹಕ ಪ್ರಶಸ್ತಿ

Suddi Udaya

ಜೂ.15-29: ಶಿಶಿಲ ಗ್ರಾ.ಪಂ. ನಲ್ಲಿ ಉಚಿತ ಫೂಟ್ ಫಲ್ಸ್ ಥೆರಪಿ ಶಿಬಿರ

Suddi Udaya

ಗೇರುಕಟ್ಟೆ ಸ್ನೇಹ ಸಂಗಮ ಆಟೋ ರಿಕ್ಷಾ ಚಾಲಕ ಮಾಲಕರ ಸಂಘದ ವತಿಯಿಂದ ಸಂಭ್ರಮ ಸ್ವಾತಂತ್ರ್ಯ ಆಚರಣೆ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ತೆಲಂಗಾಣ ರಾಜ್ಯದ ಸಾರಿಗೆ ಸಚಿವ ಪೊಣ್ಣಂ ಪ್ರಭಾಕರ್ ಭೇಟಿ

Suddi Udaya

ಮಣಿಪುರದಲ್ಲಿ ಮಹಿಳೆಯರ ಮೇಲಾದ ದೌಜ೯ನ್ಯಕ್ಕೆ ಖಂಡನೆ – ಬೆಳ್ತಂಗಡಿ ಕ್ರೈಸ್ತ ಸಂಘಟನೆಗಳ ಒಕ್ಕೂಟಗಳಿಂದ ಬೃಹತ್ ಪ್ರತಿಭಟನೆ- ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ಸರ್ಕಾರದ ವಿರುದ್ಧ ಧಿಕ್ಕಾರದ ಘೋಷಣೆ – ಮಣಿಪುರದಲ್ಲಿ ಶಾಂತಿ, ಸುವ್ಯವಸ್ಥೆ ಕಾಪಾಡಲು ಕೇಂದ್ರ ಸರ್ಕಾರ ಕ್ರಮಕೈಗೊಳ್ಳಬೇಕು ಎಂದು ಆಗ್ರಹ- ಜಡಿಮಳೆಯನ್ನು ಲೆಕ್ಕಿಸದೆ ಸಾವಿರಾರು ಮಂದಿ ಭಾಗಿ

Suddi Udaya
error: Content is protected !!