22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ಲಯನ್ಸ್ ಕ್ಲಬ್‌ನಿಂದ ಡಾ.ಡಿ. ವೀರೇಂದ್ರ ಹೆಗ್ಗಡೆಯವರ ಭೇಟಿ

ಬೆಳ್ತಂಗಡಿ : ಧರ್ಮಸ್ಥಳದಲ್ಲಿ ಲಯನ್ಸ್ ಕ್ಲಬ್ ನಿಂದ ಧರ್ಮಾಧಿಕಾರಿ ಡಾ. ಡಿ ವೀರೇಂದ್ರ ಹೆಗ್ಗಡೆಯವರನ್ನು ಜೂ.9 ರಂದು ಭೇಟಿ ಮಾಡಿ 50 ಸಂವತ್ಸರಗಳನ್ನು ಪೂರೈಸಿದ ಲಯನ್ಸ್ ಕ್ಲಬ್ ಬೆಳ್ತಂಗಡಿಯ ಸಾರ್ಥಕ ಸೇವೆಯ ಸವಿನೆನಪಿಗಾಗಿ ಜೂ.23ರಂದು ನಡೆಯಲಿರುವ ” ಸುವರ್ಣ ಸಂಭ್ರಮ” ದಿನಾಚರಣೆಗೆ ಆಹ್ವಾನ ನೀಡಿ ನಂತರ ರೂ.1 ಕೋಟಿ ವೆಚ್ಚದಲ್ಲಿ ನಿರ್ಮಾಣಗೊಳ್ಳಲಿರುವ ನೂತನ ಸಭಾಂಗಣಕ್ಕೆ ದೇಣಿಗೆಗಾಗಿ ಮನವಿ ಪತ್ರ ಸಲ್ಲಿಸಲಾಯಿತು.

ಈ ವೇಳೆ ಜು.13ರಂದು ನಡೆಯಲಿರುವ 2024-25ನೇ ಸಾಲಿನ ನೂತನ ಸಾರಥಿ ಲಯನ್ ದೇವದಾಸ್ ಶೆಟ್ಟಿ ಮತ್ತು ತಂಡದ ಪದಗ್ರಹಣ ಸಮಾರಂಭದ ಆಮಂತ್ರಣ ಪತ್ರಿಕೆಯನ್ನು ಬಿಡುಗಡೆಗೊಳಿಸಿ ಶುಭ ಹಾರೈಸಿದರು. ನಂತರ ಹೆಗ್ಗಡೆಯವರು ಲಯನ್ಸ್ ಭವನದ ಉದ್ಘಾಟನೆಗೆ ಬರುವ ಭರವಸೆ ಮತ್ತು ಅನುದಾನ ನೀಡುವುದಾಗಿ ಭರವಸೆ ನೀಡಿದರು.

ಈ ಸಂದರ್ಭದಲ್ಲಿ ಲಯನ್ಸ್ ಕ್ಲಬ್ ಅಧ್ಯಕ್ಷ ಉಮೇಶ್ ಶೆಟ್ಟಿ, ಕಾರ್ಯದರ್ಶಿ ಅನಂತ ಕೃಷ್ಣ, ಕೋಶಾಧಿಕಾರಿ ದತ್ತಾತ್ರೇಯ ಗೊಲ್ಲ, ಸ್ಥಾಪಕ ಅಧ್ಯಕ್ಷ ಎಂ.ಜಿ ಶೆಟ್ಟಿ, ವಿ.ಆರ್ ನಾಯಕ್, ಮಾಜಿ ಅಧ್ಯಕ್ಷ ವಸಂತ್ ಶೆಟ್ಟಿ, ಧರಣೇಂದ್ರ ಜೈನ್, ರವೀಂದ್ರ ಶೆಟ್ಟಿ, ಪ್ರಕಾಶ್ ಶೆಟ್ಟಿ ನೊಚ್ಚ, ನಿತ್ಯಾನಂದ ನಾವರ, ಜಯರಾಮ್ ಭಂಡಾರಿ, ಹೇಮಂತ್ ರಾವ್, ಜಯಂತ ಶೆಟ್ಟಿ, ರಾಜು ಶೆಟ್ಟಿ, ದೇವಿಪ್ರಸಾದ್ ಬೋಲ್ಮ, ನಿಯೋಜಿತ ಅಧ್ಯಕ್ಷ ದೇವದಾಸ್ ಶೆಟ್ಟಿ, ಕಾರ್ಯದರ್ಶಿ ಕಿರಣ್ ಕುಮಾರ್ ಶೆಟ್ಟಿ, ಸದಸ್ಯರಾದ ಕೃಷ್ಣಾಚಾರ್, ನ್ಯಾಣಪ್ಪ, ಲಿವೋ ಕಾರ್ಯದರ್ಶಿ ನಿರೀಕ್ಷಾ ಉಪಸ್ಥಿತರಿದ್ದರು.

Related posts

ಚಿಕ್ಕಮಗಳೂರಿನ ವಕೀಲ ಪ್ರೀತಮ್ ರವರ ಮೇಲೆ ಹಲ್ಲೆ ಮಾಡಿರುವ ಪೊಲೀಸರನ್ನು ಬಂಧಿಸುವಂತೆ ಒತ್ತಾಯಿಸಿ ಬೆಳ್ತಂಗಡಿ ನ್ಯಾಯಾಲಯದ ಸಂಕೀರ್ಣದಲ್ಲಿ ಪ್ರತಿಭಟನೆ

Suddi Udaya

ವೇಣೂರು ಶ್ರೀ ಬಾಹುಬಲಿ ಸ್ವಾಮಿಯ ಮಹಾಮಸ್ತಕಾಭಿಷೇಕಕ್ಕೆ ಮೂಲಸೌಕರ್ಯ ಒದಗಿಸಲು ಅನುದಾನ ಮಂಜೂರು ಮಾಡುವಂತೆ ಸಚಿವ ದಿನೇಶ್ ಗುಂಡೂರಾವ್ ರಿಗೆ ಶಾಸಕ ಹರೀಶ್ ಪೂಂಜರಿಂದ ಮನವಿ

Suddi Udaya

ಎಸ್ ಡಿ ಎಂ ಎನ್ ಎಸ್ ಎಸ್ ಘಟಕಕ್ಕೆ ಗೋಲ್ಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ ಗೌರವ

Suddi Udaya

ಬೆಳ್ತಂಗಡಿ ವಿಶ್ವ ಹಿಂದೂ ಪರಿಷದ್ ಬಜರಂಗದಳ ಪ್ರಖಂಡ ಮತ್ತು ಘಟಕ ಸಮಿತಿಗಳ ಸಮಾಲೋಚನಾ ಬೈಠಕ್

Suddi Udaya

ಮಾಡ ಪ್ರೀಮಿಯರ್ ಲೀಗ್ – ಶಾರದಾಂಭ ಕ್ರಿಕೆಟರ್ಸ್ ಪ್ರಥಮ

Suddi Udaya

ಉಜಿರೆ ನಂದ ಸ್ಟುಡಿಯೋ ಮಾಲಕ, ಹವ್ಯಾಸಿ ಯಕ್ಷಗಾನ ಕಲಾವಿದ ನಂದಕುಮಾರ್ ನಿಧನ

Suddi Udaya
error: Content is protected !!