23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ರೋಟರಿ ಕ್ಲಬ್ ಮಡಂತ್ಯಾರ್ ಗೆ ಪ್ರತಿಷ್ಠಿತ ಪ್ಲಾಟಿನಂ ಕ್ಲಬ್ ಪ್ರಶಸ್ತಿ

ಮಡಂತ್ಯಾರು :- ದ. ಕ ಜಿಲ್ಲೆಯ ಪ್ರತಿಷ್ಠಿತ ರೋಟರಿ ಕ್ಲಬ್ ಗಳಲ್ಲಿ ಒಂದಾದ ರೋಟರಿ ಕ್ಲಬ್ ಮಡಂತ್ಯಾರ್ ಗೆ ಇತ್ತೀಚಿಗೆ ಮೈಸೂರು ನಲ್ಲಿ ನಡೆದ ಸಮ್ಮೇಳನದಲ್ಲಿ ಅಂತರಾಷ್ಟ್ರೀಯ ಪ್ಲಾಟಿನಂ ಕ್ಲಬ್ ಪ್ರಶಸ್ತಿ ನೀಡಿ ಗೌರವಿಸಲಾಯಿತು.

ಪ್ರಸಕ್ತ ಸಾಲಿನಲ್ಲಿ ಮಡಂತ್ಯಾರ್ ಕ್ಲಬ್ ಜಿಲ್ಲೆಯಲ್ಲೇ ಮಾದರಿ ಕಾರ್ಯಕ್ರಮಗಳಾದ ನಮ್ಮ ನಡೆ ಆರ್ಥಿಕ ಸಾಕ್ಷಾರತೆಯ ಕಡೆಗೆ ಹಾಗೂ ಇತರ 180 ಕ್ಕೂ ಅಧಿಕ ಸಾರ್ವಜನಿಕರಿಗೆ ಬಹುಉಪಯೋಗವಾಗುವಂತಹ ಅನೇಕ ಕಾರ್ಯಕ್ರಮಗಳನ್ನು ಆಯೋಜಿಸಿತ್ತು. ಇದರಿಂದಾಗಿ ಕ್ಲಬ್ ನ ಇತಿಹಾಸದಲ್ಲಿ ಪ್ರಥಮ ಬಾರಿಗೆ ಪ್ಲಾಟಿನಂ ಪ್ರಶಸ್ತಿ ಬಂದಿರುತ್ತದೆ.

ಪ್ರಸಕ್ತ ಸಾಲಿನ ಕ್ಲಬ್ ನ ಸೇವಾಚಟುವಟಿಕೆಗಳನ್ನು ಆಧಾರಿಸಿ ಕೊಡಮಾಡುವ ಅತ್ಯುನ್ನತ ಗೌರವಕ್ಕೆ ಪಾತ್ರರಾದ ಕ್ಲಬ್ ನ ಪರವಾಗಿ ಕ್ಲಬ್ ನ ಅಧ್ಯಕ್ಷ ಪೇಜಾವರ ಶ್ರೀಧರ ರಾವ್ ಇವರು ಜಿಲ್ಲಾ ಗೌವರ್ನರ್ ಹೆಚ್. ಆರ್.ಕೇಶವ ರವರಿಂದ ಗೌರವವನ್ನು ಸ್ವೀಕರಿಸಿದರು.

ಕ್ಲಬ್ ನ ಸಹಕಾರ್ಯದರ್ಶಿಯವರಾದ ಆದಿತ್ಯ ಎಸ್ ರಾವ್ ಮತ್ತು ಇತರ ಸದಸ್ಯರು ಹಾಜರಿದ್ದರು.

Related posts

ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ: ವಾರೀಸುದಾರರ ಪತ್ತೆಗೆ ಮನವಿ

Suddi Udaya

ಉಜಿರೆ ಶ್ರೀ ಧ.ಮಂ.ಕಾಲೇಜಿನಲ್ಲಿ “MS Excel with Power BI” ಕುರಿತು ಮೂರು ದಿನಗಳ ತರಬೇತಿ ಕಾರ್ಯಕ್ರಮ

Suddi Udaya

ಹೊಂಬೆಳಕು ಕಾರ್ಯಕ್ರಮದಲ್ಲಿ ಉಜಿರೆ ಪಂ.ಅ.ಅಧಿಕಾರಿ ಪ್ರಕಾಶ್ ಶೆಟ್ಟಿ ನೊಚ್ಚ ರವರಿಗೆ ಸನ್ಮಾನ

Suddi Udaya

ಬೆಳ್ತಂಗಡಿ: ಯುವ ನಿಧಿ ನೋಂದಣಿ ಪ್ರಚಾರಕ್ಕೆ ಚಾಲನೆ

Suddi Udaya

ಕೆರೆಗೆ ಜಾರಿ ಬಿದ್ದು ಗರ್ಡಾಡಿ ನಿವಾಸಿ ನವ ವಿವಾಹಿತ ಸಾವು

Suddi Udaya

ಬ್ರಹ್ಮಶ್ರೀ ನಾರಾಯಣ ಗುರು ಬಿಲ್ಲವ ಸಮಾಜ ಸೇವಾ ಸಂಘದ ಆರಂಬೋಡಿ ಗ್ರಾಮ ಸಮಿತಿಯ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya
error: Content is protected !!