September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಸರಳಿಕಟ್ಟೆ ಪ್ರೌಢಶಾಲೆಯಲ್ಲಿ ಯುವ ಸಂಸತ್ತು ಚುನಾವಣೆ


ಬಾರ್ಯ: ಸರಳಿಕಟ್ಟೆಯ ಸರಕಾರಿ ಪ್ರೌಢಶಾಲೆಯಲ್ಲಿ 2024-25ನೇ ಸಾಲಿಗೆ ಪ್ರಜಾಪ್ರಭುತ್ವ ಮಾದರಿಯಲ್ಲಿ ಯುವ ಸಂಸತ್ತಿಗೆ ಶಾಲಾ ನಾಯಕ ಹಾಗೂ ಶಾಲಾ ಉಪನಾಯಕನ ಆಯ್ಕೆ ನಡೆಸಲಾಯಿತು. ಮೊಬೈಲ್ ಇ.ವಿ.ಎಂ. ಆಪ್ ಬಳಸಿ ಮತ ಚಲಾಯಿಸುವ ವಿಧಾನದ ಬಗ್ಗೆ ವಿವರಿಸಿ ನಂತರ ವಿದ್ಯಾರ್ಥಿಗಳಿಗೆ ಮತದಾನದ ಅವಕಾಶ ನೀಡಲಾಯಿತು.


ಶಾಲಾ ನಾಯಕನಾಗಿ 10ನೇ ತರಗತಿಯ ಇಸ್ಮಾಯಿಲ್ ರಂಶಿದ್, ಉಪನಾಯಕನಾಗಿ 9ನೇ ತರಗತಿಯ ಮುಹಮ್ಮದ್ ಅಶ್ವರ್ ಆಯ್ಕೆಯಾದರು. ವಿರೋಧ ಪಕ್ಷದ ನಾಯಕನಾಗಿ 10ನೇ ತರಗತಿಯ ಮಹಮ್ಮದ್ ಅಜ್ಮಲ್ ವಿರೋಧ ಪಕ್ಷದ ಉಪನಾಯಕಿಯಾಗಿ 9ನೇ ತರಗತಿಯ ಫಾತಿಮತ್ ಅಫ್ರ ಆಯ್ಕೆಯಾದರು.

ಚುನಾವಣಾ ಸಾಕ್ಷರತಾ ಕ್ಲಬ್ ನ ಸಂಚಾಲಕರಾದ ವಿಜಯಶ್ರೀ ಯವರು ಚುನಾವಣಾ ಪ್ರಕ್ರಿಯೆಯನ್ನು ನಡೆಸಿಕೊಟ್ಟರು. ಮುಖ್ಯೋಪಾಧ್ಯಾಯರಾದ ಹರಿಕಿರಣ್ ಕೆ ಇವರ ಮಾರ್ಗದರ್ಶನದಲ್ಲಿ ಸಹಶಿಕ್ಷಕರಾದ ಮಹಮ್ಮದ್ ಹನೀಫ್, ನಳಿನಾಕ್ಷಿ, ವಿಜಯಶ್ರೀ, ಸಪ್ನಾರಾವ್, ಶಾಂತಾ, ಗಂಗವ್ವ, ರಾಜೇಸಾಬ್ ಹೊಸಕೇರಿ ಹಾಗೂ ತಾರಾ ಚುನಾವಣಾ ಪ್ರಕ್ರಿಯೆ ನಡೆಸಲು ಸಹಕರಿಸಿದರು.

Related posts

ಕಣಿಯೂರು: ಮಲ್ಲಿಗೆ ಕೃಷಿ ಮಾಹಿತಿ ಹಾಗೂ ಗಿಡ ವಿತರಣಾ ಕಾರ್ಯಕ್ರಮ

Suddi Udaya

ಸೌಜನ್ಯ ಕೊಲೆ ಪ್ರಕರಣವನ್ನು ಹಾಲಿ ನ್ಯಾಯಾಧೀಶರ ಮುಖಾಂತರ ನ್ಯಾಯಾಂಗ ತನಿಖೆಗೆ ವಹಿಸಲು ರಾಜ್ಯ ಮತ್ತು ಕೇಂದ್ರ ಸರಕಾರಕ್ಕೆ ವಿ.ಹಿಂ.ಪಂ ಆಗ್ರಹ

Suddi Udaya

ಹೊಸಂಗಡಿ ಗ್ರಾ.ಪಂ. ನಲ್ಲಿ ಆರೋಗ್ಯ ತಪಾಸಣಾ ಶಿಬಿರ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಪೆರ್ಲ ಬೈಪಾಡಿ ಶ್ರೀ ಸಿದ್ದಿವಿನಾಯಕ ದೇವಸ್ಥಾನದ ಅಭಿವೃದ್ಧಿಗೆ ದೇಣಿಗೆ ಹಸ್ತಾಂತರ

Suddi Udaya

ಸಿರಿ ಕೇಂದ್ರ ಕಛೇರಿಯಲ್ಲಿ ಮಹಿಳಾ ದಿನಾಚರಣೆ ಪ್ರಯುಕ್ತ ಉಚಿತ ಆರೋಗ್ಯ ತಪಾಸಣಾ ಶಿಬಿರ

Suddi Udaya

ಬರೆಂಗಾಯ ಹಾಲು ಉತ್ಪಾದಕರ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ: ಸದಸ್ಯರಿಗೆ ಶೇ. 7 ಡಿವಿಡೆಂಟ್

Suddi Udaya
error: Content is protected !!