24.6 C
ಪುತ್ತೂರು, ಬೆಳ್ತಂಗಡಿ
May 18, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಉಜಿರೆ : ರತ್ನಮಾನಸ ಪ್ರವೇಶ ದ್ವಾರದ ಉದ್ಘಾಟನೆ ಹಾಗೂ 8 ನೇ ತರಗತಿ ವಿದ್ಯಾರ್ಥಿಗಳ ಸ್ವಾಗತ ಕಾರ್ಯಕ್ರಮ

ಉಜಿರೆ : ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಸಂಸ್ಥೆ ರತ್ನಮಾನಸ ‘ಜೀವನ ಶಿಕ್ಷಣ’ ವಸತಿ ನಿಲಯ ಇದರ ಪ್ರವೇಶ ದ್ವಾರ ಉದ್ಘಾಟನೆ ಹಾಗೂ 2024-25ನೇ ಸಾಲಿನ ಶೈಕ್ಷಣಿಕ ವರ್ಷದ 8ನೇ ತರಗತಿ ವಿದ್ಯಾರ್ಥಿಗಳ ಸ್ವಾಗತ ಕಾರ್ಯಕ್ರಮವು ಜೂ.12ರಂದು ನಡೆಯಿತು.

ಕಾರ್ಯಕ್ರಮವನ್ನು ಶ್ರೀಮತಿ ಸುಪ್ರಿಯಾ ಹರ್ಷೇಂದ್ರ ಕುಮಾರ್ ಉದ್ಘಾಟಿಸಿ ನೂತನವಾಗಿ ಸೇರ್ಪಡೆಗೊಂಡ 8ನೇ ತರಗತಿ ವಿದ್ಯಾರ್ಥಿಗಳಿಗೆ ಶುಭಹಾರೈಸಿದರು.

ವೇದಿಕೆಯಲ್ಲಿ ಉಪಸ್ಥಿತರಿದ್ದ ಶ್ರೀ ಕ್ಷೇತ್ರ ಧರ್ಮಸ್ಥಳದ ಡಿ. ಹರ್ಷೇಂದ್ರ ಕುಮಾರ್ ರವರು ಮಾತನಾಡಿ 52 ವರ್ಷಗಳ ಇತಿಹಾಸ ರತ್ನಮಾಸಕ್ಕಿದ್ದು, ಇಲ್ಲಿಗೆ ಬರುವಂತಹ ಗಣ್ಯರುಗಳು ವಿದ್ಯಾರ್ಥಿಗಳ ಕೆಲಸವನ್ನು ನೋಡಿ ಹೊಗಳಿದ್ದಾರೆ. ಪೋಷಕರು ತಮ್ಮ ಮಕ್ಕಳು ಇಲ್ಲಿ ಶಿಕ್ಷಣವನ್ನು ಪಡೆದು ಉತ್ತಮ ಪ್ರಜೆಗಲಾಗಬೇಕು ಎಂಬ ಉದ್ದೇಶದಿಂದ ಇಲ್ಲಿಗೆ ಸೇರಿಸುತ್ತಾರೆ. ಅವರ ಕನಸನ್ನು ನನಸಾಗಿಸುವ ಕೆಲಸ ವಿದ್ಯಾರ್ಥಿಗಳಾದ ನಿಮ್ಮ ಕರ್ತವ್ಯ. ಎಸ್.ಡಿ.ಎಂ. ಕನ್ನಡ ಮಾಧ್ಯಮ ಶಾಲೆಗೆ ಈ ಬಾರಿ ಉತ್ತಮ ಫಲಿತಾಂಶ ಲಭಿಸಿದೆ ಎಂದು ವಿದ್ಯಾರ್ಥಿಗಳಿಗೆ ಶುಭಹಾರೈಸಿದರು.

ಸ್ಪೀಕ್ ಫಾರ್ ಇಂಡಿಯಾದಲ್ಲಿ ಪ್ರಥಮ ಸ್ಥಾನ ಪಡೆದಂತಹ ರತ್ನಮಾಸದ ಹಿರಿಯ ವಿದ್ಯಾರ್ಥಿ ಶಾಮಪ್ರಸಾದ್ ರವರನ್ನು ಗಣ್ಯರ ಉಪಸ್ಥಿತಿಯಲ್ಲಿ ಗೌರವಿಸಲಾಯಿತು.

ವೇದಿಕೆಯಲ್ಲಿ ಎಸ್ ಡಿ ಎಂ ಶಿಕ್ಷಣ ಸಂಸ್ಥೆ ಕಾರ್ಯದರ್ಶಿ ಸತೀಶ್ಚಂದ್ರ, ಐ ಟಿ ಹಾಗೂ ಆಸ್ಟೆಲ್ ವಿಭಾಗದ ಸಿ ಇ ಒ ಪೂರಣ್ ವರ್ಮ ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ಪ್ರಾಂಶುಪಾಲರು, ಶಿಕ್ಷಕರು, ಪೋಷಕರು, ಪಾಲಕರು ಹಾಗೂ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

ಹಿರಿಯ ವಿದ್ಯಾರ್ಥಿ ಶಾಮಪ್ರಸಾದ್ ನಿರೂಪಿಸಿದರು. 10ನೇ ತರಗತಿ ವಿದ್ಯಾರ್ಥಿ ಪ್ರೀತಮ್ ಸ್ವಾಗತಿಸಿ, 9ನೇ ತರಗತಿ ವಿದ್ಯಾರ್ಥಿ ನಿಶಿತ್ ಧನ್ಯವಾದವಿತ್ತರು.

Related posts

ಸವಣಾಲು ಶ್ರೀ ದುರ್ಗಾ ಕಾಳಿಕಾಂಬ ದೇವಸ್ಥಾನದ ಅರ್ಚಕ ವಿಜಯ ಭಟ್ ನೇಣು ಬಿಗಿದು ಆತ್ಮಹತ್ಯೆ

Suddi Udaya

ಮುಂಡಾಜೆ ವಲಯದ ಚಾರ್ಮಾಡಿ-ಬಿ ಕಾರ್ಯಕ್ಷೇತ್ರದಲ್ಲಿ ನೂತನ ಸರಸ್ವತಿ ಸ್ವಸಹಾಯ ಸಂಘ ಉದ್ಘಾಟನೆ

Suddi Udaya

ಕನ್ಯಾಡಿ 1: ಪ್ರಗತಿಪರ ಕೃಷಿಕ ನಾರಾಯಣ ಗೌಡ ನಿಧನ

Suddi Udaya

ಜೆಸಿಐ ಕೊಕ್ಕಡ ಕಪಿಲ ಘಟಕದ ವತಿಯಿಂದ ದಿವ್ಯಜ್ಯೋತಿ ಶಾಲಾ ವಿದ್ಯಾರ್ಥಿಗಳಿಗೆ ಪರೀಕ್ಷೆ ಎದುರಿಸುವ ಬಗ್ಗೆ ತರಬೇತಿ ಕಾರ್ಯಕ್ರಮ

Suddi Udaya

ಬಳಂಜ ದೇವಸ್ಥಾನದ ಜಾತ್ರಾ ಮಹೋತ್ಸವ, ದೇವರ ದರ್ಶನ ಬಲಿ ಉತ್ಸವ, ನೂರಾರು ಭಕ್ತರು ಭಾಗಿ

Suddi Udaya

ಸರತಿ ಸಾಲಿನಲ್ಲಿ ನಿಂತು ಮತ ಚಲಾಯಿಸಿದ ಚಲನಚಿತ್ರ ನಿರ್ದೇಶಕ ವಿನು ಬಳಂಜ

Suddi Udaya
error: Content is protected !!