July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕರ್ನಾಟಕ ರಾಜ್ಯದ ವೃತ್ತಿಪರ ಸಿವಿಲ್ ಇಂಜಿನಿಯರುಗಳ ಪರಿಷತ್ತಿನ ಚೊಚ್ಚಲ ಸಮಿತಿಗೆ ಜಗದೀಶ ಪ್ರಸಾದ್ ಆಯ್ಕೆ

ಬೆಳ್ತಂಗಡಿ: ಕರ್ನಾಟಕ ರಾಜ್ಯದ ವೃತ್ತಿಪರ ಸಿವಿಲ್ ಎಂಜಿನಿಯರುಗಳ ಪರಿಷತ್ತಿನ ಚೊಚ್ಚಲ ಸಮಿತಿಗೆ ಅಸೋಸಿಯೇಟ್ ಕನ್ಸ್ಲಟಿಂಗ್ ಸಿವಿಲ್ ಇಂಜಿನಿಯರ್ ಬೆಳ್ತಂಗಡಿ ತಾಲೂಕು ಸೆಂಟರ್ ಪ್ರಸ್ತುತ ಅಧ್ಯಕ್ಷ, ಸ್ಥಾಪಕಾದ್ಯಕ್ಷ ಇಂಜಿನಿಯರ್ ಜಗದೀಶ ಪ್ರಸಾದ್ ರವರು ರಾಜ್ಯ ಮಟ್ಟದ ಅತ್ಯುನ್ನತ ಸ್ಥಾನಮಾನವನ್ನು ಪಡೆದಿದ್ದಾರೆ.

ಕರ್ನಾಟಕ ವೃತ್ತಿ ಪರ ಸಿವಿಲ್ ಇಂಜಿನೀಯರುಗಳ ಪರಿಷತ್ತು ಇನ್ನು ಮುಂದೆ ಕಾರ್ಯಾಚರಣೆ ಮಾಡಲಿದ್ದು, ಇದರ ಕೇಂದ್ರ ಕಚೇರಿ ಬೆಂಗಳೂರಿನಲ್ಲಿ ಕಾರ್ಯನಿರ್ವಹಿಸುತ್ತಿದೆ. ಈ ಪರಿಷತ್ತು 18 ಸದಸ್ಯರ ಸಮಿತಿ ಹೊಂದಿದ್ದು, ಇದರಲ್ಲಿ 8 ಜನ ಸರಕಾರದಿಂದ ಆಯ್ದ ಸಿವಿಲ್ ಎಂಜಿನಿಯರ್ ಕ್ಷೇತ್ರದಿಂದ ನಾಮನಿರ್ದೇಶನ ಆಗಲಿದ್ದಾರೆ. ಉಳಿದ 10 ಜನ ಸದಸ್ಯರು ವೃತ್ತಿ ನಿರತ ಸಿವಿಲ್ ಎಂಜಿನಿಯರ್ ಗಳು ಆಯ್ಕೆ ಆಗಲಿದ್ದಾರೆ. ಇದರಲ್ಲಿ 4 ಜನ ಬೆಂಗಳೂರು ಕೇಂದ್ರದಿಂದ, ಉಳಿದ 6 ಜನ ಕಲಬುರ್ಗಿ, ಬೆಳಗಾವಿ ಮತ್ತು ಮಂಗಳೂರು ಕೇಂದ್ರದಿಂದ ತಲಾ 2 ಜನ ಆಯ್ಕೆ ಆಗಲಿದ್ದಾರೆ. ಅಧಿಕಾರದ ಅವಧಿ ಮೂರು ವರ್ಷ ಇರಲಿದೆ.

ಚೊಚ್ಚಲ ಕರ್ನಾಟಕ ವೃತ್ತಿ ಪರ ಸಿವಿಲ್ ಇಂಜಿನಿಯರುಗಳ ಪರಿಷತ್ತು ನಲ್ಲಿ ಮಂಗಳೂರು ವಿಭಾಗದಿಂದ ಇಂಜಿನಿಯರ್ ಜಗದೀಶ್ ಪ್ರಸಾದ್ ಇವರು ಸರ್ವಾನುಮತದಿಂದ ಆಯ್ಕೆ ಆಗಿದ್ದಾರೆ.

ಇವರು ವೃತ್ತಿಯಲ್ಲಿ ಸಿವಿಲ್ ಇಂಜಿನಿಯರ್, ನ್ಯಾಷನಲ್ ಬ್ಯಾಂಕ್ ಗಳ ವ್ಯಾಲ್ಯೂವರ್ ಆದರೂ ಕೃಷಿ ಕ್ಷೇತ್ರದಲ್ಲಿ ತನ್ನ ಛಾಪನ್ನು ಮೂಡಿಸಿರುವ, ಹಲವು ಸಮಾಜ ಮುಖಿ ಕಾರ್ಯಗಳಲ್ಲಿ ತನ್ನನ್ನು ತಾನು ತೊಡಗಿಸಿಕೊಂಡಿದ್ದಾರೆ .

Related posts

ಶ್ರೀರಾಮ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಯಲ್ಲಿ ವಂಚನೆ ಪ್ರಕರಣ:ಸೊಸೈಟಿಯಲ್ಲಿ ಎರಡು ದಿನದ ಸಿಐಡಿ ಶೋಧ ಅಂತ್ಯ

Suddi Udaya

ಮಡಂತ್ಯಾರು ಸೇಕ್ರೆಡ್ ಹಾರ್ಟ್ ಪ.ಪೂ. ಕಾಲೇಜಿಗೆ ಶೇ. 98.8 ಫಲಿತಾಂಶ

Suddi Udaya

ಮೇ .17, 18, 19: ಬೆಳ್ತಂಗಡಿ ಸ್ಪಂದನ ಪಾಲಿಕ್ಲಿನಿಕ್ & ಲ್ಯಾಬೋರೇಟರಿ ಹಾಗೂ ಸ್ಪಂದನ ಕ್ಲಿನಿಕ್ ನಲ್ಲಿ ಉಚಿತ ಹಾಗೂ ವಿಶೇಷ ರಿಯಾಯಿತಿ

Suddi Udaya

ಸ್ಟಾರ್ ಲೈನ್ ಶಾಲೆಯಲ್ಲಿ ” ನ್ಯಾಷನಲ್ ಮಾಥ್ಸ್ ಡೇ “ಮತ್ತು ವಿಜ್ಞಾನ ವಸ್ತು ಪ್ರದರ್ಶನ

Suddi Udaya

ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು ಆದೇಶ ಪ್ರಕರಣ ಹಿಂಪಡೆಯುವಂತೆ ರಾಜ್ಯ ಸರ್ಕಾರವನ್ನು ಒತ್ತಾಯಿಸಿ ಮನವಿ ನೀಡಲು ಬಂದ ತಿಮರೋಡಿ ಬೆಂಬಲಿಗರನ್ನು ಬಂಧಿಸಿದ ಬೆಳ್ತಂಗಡಿ ಪೊಲೀಸರು

Suddi Udaya

ಗೇರುಕಟ್ಟೆ: ಶಾಲಾ ಮಕ್ಕಳೊಂದಿಗೆ ಕರ್ನಾಟಕ ರಾಜ್ಯ ಸಾರಿಗೆ ಇಲಾಖೆ ಬಸ್ ಚಾಲಕರ, ನಿರ್ವಾಹಕರಿಂದ ಚೆಲ್ಲಾಟ

Suddi Udaya
error: Content is protected !!