27.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ರಿಂದ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ವೀಕ್ಷಣೆ: ಅಸಮಪ೯ಕ ಕಾಮಗಾರಿ ನಿರ್ವಹಣೆ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ಜಿಲ್ಲಾಧಿಕಾರಿ

ಬೆಳ್ತಂಗಡಿ : ರಾಷ್ಟ್ರೀಯ ಹೆದ್ದಾರಿ ಮಡಂತ್ಯಾರು, ಮದ್ದಡ್ಕ ಪಿಲಿಚಾಮುಂಡಿಕಲ್ಲು , ವಾಣಿ ಕಾಲೇಜು ಪ್ರದೇಶಗಳಿಗೆ ದ.ಕ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಜೂ.12ಂದು ಭೇಟಿ ನೀಡಿ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ವೀಕ್ಷಿಸಿದರು.


ವಾಣಿ ಕಾಲೇಜು ಬಳಿ ಮಕ್ಕಳಿಗೆ ಹೋಗಲು ಸರ್ವಿಸ್ ರಸ್ತೆ, ಮೋರಿ ಅಗಲೀಕರಣ. ಮಕ್ಕಳಿಗೆ ನಿಲ್ಲಲು (ಜಿಎಸ್‌ಪಿ ) ಜಲ್ಲಿ ಹಾಕಿಕೊಡಬೇಕು. ಮೂಲಭೂತ ಸೌಲಭ್ಯ ಪಟ್ಟಣ ಪಂಚಾಯತ್ ನೀರು ಸರಬರಾಜು ಸರಿ ಮಾಡಿಕೊಡಬೇಕು.
ಈಗಾಗಲೇ ಬಹಳಷ್ಟು ಸಮಸ್ಯೆಯಾಗಿದೆ ಎಂದು ಪಟ್ಟಣ ಪಂಚಾಯತ್ ನಿಕಟಪೂರ್ವ ಉಪಾಧ್ಯಕ್ಷ ಜಯಾನಂದ ಗೌಡ ಜಿಲ್ಲಾಧಿಕಾರಿಗಳ ಗಮನಕ್ಕೆ ತಂದರು.

ಈ ಸಂದರ್ಭದಲ್ಲಿ ಇಲಾಖೆಯ ಅಸಮ೯ಪಕ ಕಾಮಗಾರಿಗೆ ಜಿಲ್ಲಾಧಿಕಾರಿಗಳು ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡು ನೀರು ಸರಿಯಾಗಿ ಹೋಗುವಂತೆ, ಕಬ್ಬಿನ ರಾಡ್ ಕಾಣದಂತೆ ತಗಡು ಸೀಟು ಹಾಕಬೇಕು, ಏನಾದರೂ ಜನರಿಗೆ ಅನಾಹುತವಾದಲ್ಲಿ ಕ್ರಿಮಿನಲ್ ಕೇಸ್ ಹಾಕಲಾಗುವುದೆಂದು ಎಚ್ಚರಿಸಿದರು. ಬರುವ ಆದಿತ್ಯವಾರದ ಒಳಗೆ ಕೆಲಸವನ್ನು ಮುಗಿಸಿಕೊಡಬೇಕು ಇಲ್ಲವಾದಲ್ಲಿ ಬರುವ ಸೋಮವಾರ ಭೇಟಿ ನೀಡುತ್ತೇನೆ ಎಂದರು.


ಹೆದ್ದಾರಿಗೆ ಸಂಬಂಧಪಟ್ಟ ಪಟ್ಟಣ ಪಂಚಾಯತ್ , ಗ್ರಾಮ ಪಂಚಾಯತ್ ಜನಪ್ರತಿನಿಧಿಗಳು, ಆಡಳಿತ ಅಧಿಕಾರಿ ಮುಂತಾದವರು ಸೇರಿ ಒಂದು ಮೀಟಿಂಗ್ ಮಾಡಿ ಸಲಹೆ ನೀಡಿದರು.
ಈ ಸಂದರ್ಭದಲ್ಲಿ ರಾಷ್ಟ್ರೀಯ ಹೆದ್ದಾರಿಯ ಎಕ್ಸಿಕ್ಯೂಟಿವ್ ಇಂಜಿನಿಯರ್ ಶಿವಪ್ರಸಾದ್ ಅಜಿಲ, ಪಟ್ಟಣ ಪಂಚಾಯತ್ ಮುಖ್ಯ ಅಧಿಕಾರಿ ರಾಜೇಶ್, ಎಪಿಎಂಸಿ ಕಾರ್ಯದರ್ಶಿ ರವೀಂದ್ರ, ಸರ್ಕಲ್ ಇನ್ಸ್ಪೆಕ್ಟರ್ ಸುಬ್ಬಪುರ್ ಮಠ್, ವಾಣಿ ಕಾಲೇಜು ಪ್ರಾಂಶುಪಾಲರು ಯದುಪತಿ ಗೌಡ, ವರ್ತಕರ ಸಂಘದ ಕಾರ್ಯದರ್ಶಿ ರೊನಾಲ್ಡ್ ಲೋಬೊ, ಸದಸ್ಯರಾದ ಲ್ಯಾನ್ಸಿಪಿಂಟೋ, ವಿನ್ಸೆಂಟ್ ಜೂಡೋ, ಪವರ್ ಆನ್ ಮಾಲಕರಾದ ಶೀತಲ್ ಜೈನ್, ಉದ್ಯಮಿ ಶಶಿಧರ ಪೈ ಮುಂತಾದವರೂ ಉಪಸ್ಥಿತರಿದ್ದರು.

Related posts

ಬೆಳಾಲು ಶ್ರೀ ಧ.ಮಂ. ಅನುದಾನಿತ ಪ್ರೌಢ ಶಾಲೆಯಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ

Suddi Udaya

ಬಂದಾರುವಿನಲ್ಲಿ ಸರಿಯಾಗಿ ಬಸ್ಸು ವ್ಯವಸ್ಥೆಯಿಲ್ಲದೆ ಪ್ರಯಾಣಿಕರ ಪರದಾಟ: ಸಂಬಂಧಪಟ್ಟ ಅಧಿಕಾರಿಗಳು ಸಮಸ್ಯೆ ಬಗೆಹರಿಸುವಂತೆ ಸ್ಥಳೀಯರ ಮನವಿ

Suddi Udaya

ನಾರಾವಿ ಭಾರತ್ ಪ್ರೆಂಡ್ಸ್ ವತಿಯಿಂದ ಕಬಡ್ಡಿ ಪಂದ್ಯಾಟ: ಸುಲ್ಕೇರಿ ಜೆಕೆ ಅಟ್ಯಾಕರ್ಸ್ ತಂಡ ಪ್ರಥಮ ಸ್ಥಾನ

Suddi Udaya

ತೋಡಿನಂತಿರುವ ಕುಪ್ಪೆಟ್ಟಿ-ಉಪ್ಪಿನಂಗಡಿ ರಾಜ್ಯ ಹೆದ್ದಾರಿ : ಭಯಾನಕ ಗುಂಡಿಗಳಿಗೆ ತೇಪೆ ಕಾರ್ಯ

Suddi Udaya

ಉಜಿರೆ- ಉಪ್ಪಿನಂಗಡಿ ಶ್ರೀದುರ್ಗಾ ಟೆಕ್ಸ್ ಟೈಲ್ಸ್ ನಲ್ಲಿ ಆಷಾಢ ಡಿಸ್ಕೌಂಟ್ 50-50 ಸೇಲ್

Suddi Udaya

ಬಳಂಜ ಬ್ರಹ್ಮಶ್ರೀ ಕುಣಿತ ಭಜನಾ ಮಂಡಳಿ ಸದಸ್ಯರಿಗೆ ಪೆನ್ನು ವಿತರಣೆ

Suddi Udaya
error: Content is protected !!