23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಬೆಳ್ತಂಗಡಿಯಲ್ಲಿ ಲೋಕಾಯುಕ್ತ ಅಧಿಕಾರಿಗಳಿಂದ ಅಹವಾಲು ಸ್ವೀಕಾರ

ಬೆಳ್ತಂಗಡಿ: ಮಂಗಳೂರು ಲೋಕಾಯುಕ್ತ ವಿಭಾಗದ ಪೊಲೀಸ್ ಅಧೀಕ್ಷಕರು, ಪೊಲೀಸ್ ನಿರೀಕ್ಷಕರು ಹಾಗೂ ಸಿಬ್ಬಂದಿಗಳು ಜೂ.12 ರಂದು ಬೆಳ್ತಂಗಡಿ ತಾಲೂಕು ಕಚೇರಿಯಲ್ಲಿ ಸಾರ್ವಜನಿಕ ಜನಸಂಪರ್ಕ ಸಭೆ ನಡೆಸಿ, ಸಾರ್ವಜನಿಕರಿಂದ ಆಹವಾಲು ಸ್ವೀಕರಿಸಿದರು.


ಮಂಗಳೂರು ಲೋಕಾಯುಕ್ತ ವಿಭಾಗದ ಎಸ್.ಪಿ ನಟರಾಜ್ ಎಂ.ಎ ಅಧ್ಯಕ್ಷತೆ ವಹಿಸಿದ್ದರು. ಲೋಕಾಯುಕ್ತ ಪೊಲೀಸ್ ಇನ್ಸ್‌ಪೆಕ್ಟರ್ ಅಮನುಲ್ಲಾ ಎ. ಹಾಗೂ ಚಂದ್ರಶೇಖರ್ ಕೆ.ಎನ್ ಮತ್ತು ಚಂದ್ರಶೇಖರ್ ಸಿ.ಎಲ್, ಸಿಬ್ಬಂದಿಗಳಾದ ಮಹೇಶ್, ವಿನಾಯಕ್, ಡಿ.ಬಿ, ಪಾಪಣ್ಣ, ಧರ್ಣಪ್ಪ ಮೊದಲಾದವರು ಉಪಸ್ಥಿತರಿದ್ದರು.


ಸಭೆಯಲ್ಲಿ ಸಾರ್ವಜನಿಕರು ಸರಕಾರಿ ಇಲಾಖೆಗಳಲ್ಲಿ ಆಗುತ್ತಿರುವ ಸಮಸ್ಯೆಗಳ ಕುರಿತು ದೂರುಗಳನ್ನು ನೀಡಿದರು. ಮರೋಡಿ ಕೂಕ್ರಬೆಟ್ಟುವಿನ ಸುಬ್ರಹ್ಮಣ್ಯ ಭಟ್, ಹರಿಶ್ಚಂದ್ರ ತಾಮ್ಹಣ್‌ಕರ್ ಪಿಲ್ಯ, ಅರಸಿನಮಕ್ಕಿಯ ರಾಜು ಕೆ.ಕೆ, ಬೆಳ್ತಂಗಡಿಯ ವಿ.ಆರ್ ನಾಯಕ್, ಹೊಸಂಗಡಿಯ ರಾಜೇಶ್, ತಾ.ಪಂ ಮಾಜಿ ಸ್ಥಾಯಿ ಸಮಿತಿ ಅಧ್ಯಕ್ಷ ವಿ.ಟಿ ಸೆಬಾಸ್ಟಿನ್ ನೆರಿಯ ಅವರು ವಿವಿಧ ವಿಷಯಗಳ ಬಗ್ಗೆ ದೂರು ನೀಡಿದರು. ಲೋಕಾಯುಕ್ತ ಅಧಿಕಾರಿಗಳು ದೂರನ್ನು ಸ್ವೀಕರಿಸಿ, ಕೆಲವೊಂದು ದೂರುಗಳ ಬಗ್ಗೆ ಕಂದಾಯ, ಸರ್ವೆ ಇಲಾಖೆಯ ಅಧಿಕಾರಿಗಳನ್ನು ವಿಚಾರಿಸಿ ದೂರುದಾರರಿಗೆ ಮಾಹಿತಿ ನೀಡಿದರು.

Related posts

ನಾರಾವಿ: ಹಿರ್ತೋಟ್ಟು ಮೀನಗುಂಡಿಗೆ ವಿಷ: ಅಪಾರ ಪ್ರಮಾಣದ ಮೀನುಗಳ ಸಾವು

Suddi Udaya

ನಡ: ಅರಣ್ಯ ಇಲಾಖೆಯ ಬೋನಿಗೆ ಬಿದ್ದ ಚಿರತೆ: ಸಿಸಿ ಕ್ಯಾಮರದಲ್ಲಿ ದೃಶ್ಯ ಸೆರೆ

Suddi Udaya

ಭಜನಾ ಕಮ್ಮಟ; ಭಜನೆಗಳು ಜೀವನ ಶಿಕ್ಷಣ ಕಲಿಸುತ್ತವೆ: ಬಿ.ಕೆ. ಧನಂಜಯ ರಾವ್

Suddi Udaya

ಮಡಂತ್ಯಾರು ಮುಖ್ಯರಸ್ತೆಯಲ್ಲಿ ಗುಡ್ಡ ಕುಸಿತ: ಟಾಟಾ ಎಸಿ ವಾಹನ ಜಖಂ; ಅಂಗಡಿಗೆ ಸಂಪೂರ್ಣ ಹಾನಿ

Suddi Udaya

ಬೆಳ್ತಂಗಡಿ ಮುಳಿಯ ಜುವೆಲ್ಸ್‌ನಲ್ಲಿ “ಚಿನ್ನದಂತ ನನ್ನ ಅಪ್ಪ” ವಿಶೇಷ ಅನುಬಂಧದ ಕಾರ್ಯಕ್ರಮ

Suddi Udaya

ವಲಯ ಮಟ್ಟದ ಪ್ರೌಢ ಶಾಲಾ ವಿಭಾಗದ ಪ್ರತಿಭಾ ಕಾರಂಜಿ ಸ್ಪರ್ಧೆ- ಸೇಕ್ರೆಡ್ ಹಾರ್ಟ್ ಆಂ.ಮಾ. ಶಾಲೆಯ ವಿದ್ಯಾರ್ಥಿಗಳು ತಾಲೂಕು ಮಟ್ಟಕ್ಕೆ ಆಯ್ಕೆ

Suddi Udaya
error: Content is protected !!