July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಬೆಳ್ತಂಗಡಿಯಲ್ಲಿ ಲೋಕಾಯುಕ್ತ ಅಧಿಕಾರಿಗಳಿಂದ ಅಹವಾಲು ಸ್ವೀಕಾರ

ಬೆಳ್ತಂಗಡಿ: ಮಂಗಳೂರು ಲೋಕಾಯುಕ್ತ ವಿಭಾಗದ ಪೊಲೀಸ್ ಅಧೀಕ್ಷಕರು, ಪೊಲೀಸ್ ನಿರೀಕ್ಷಕರು ಹಾಗೂ ಸಿಬ್ಬಂದಿಗಳು ಜೂ.12 ರಂದು ಬೆಳ್ತಂಗಡಿ ತಾಲೂಕು ಕಚೇರಿಯಲ್ಲಿ ಸಾರ್ವಜನಿಕ ಜನಸಂಪರ್ಕ ಸಭೆ ನಡೆಸಿ, ಸಾರ್ವಜನಿಕರಿಂದ ಆಹವಾಲು ಸ್ವೀಕರಿಸಿದರು.


ಮಂಗಳೂರು ಲೋಕಾಯುಕ್ತ ವಿಭಾಗದ ಎಸ್.ಪಿ ನಟರಾಜ್ ಎಂ.ಎ ಅಧ್ಯಕ್ಷತೆ ವಹಿಸಿದ್ದರು. ಲೋಕಾಯುಕ್ತ ಪೊಲೀಸ್ ಇನ್ಸ್‌ಪೆಕ್ಟರ್ ಅಮನುಲ್ಲಾ ಎ. ಹಾಗೂ ಚಂದ್ರಶೇಖರ್ ಕೆ.ಎನ್ ಮತ್ತು ಚಂದ್ರಶೇಖರ್ ಸಿ.ಎಲ್, ಸಿಬ್ಬಂದಿಗಳಾದ ಮಹೇಶ್, ವಿನಾಯಕ್, ಡಿ.ಬಿ, ಪಾಪಣ್ಣ, ಧರ್ಣಪ್ಪ ಮೊದಲಾದವರು ಉಪಸ್ಥಿತರಿದ್ದರು.


ಸಭೆಯಲ್ಲಿ ಸಾರ್ವಜನಿಕರು ಸರಕಾರಿ ಇಲಾಖೆಗಳಲ್ಲಿ ಆಗುತ್ತಿರುವ ಸಮಸ್ಯೆಗಳ ಕುರಿತು ದೂರುಗಳನ್ನು ನೀಡಿದರು. ಮರೋಡಿ ಕೂಕ್ರಬೆಟ್ಟುವಿನ ಸುಬ್ರಹ್ಮಣ್ಯ ಭಟ್, ಹರಿಶ್ಚಂದ್ರ ತಾಮ್ಹಣ್‌ಕರ್ ಪಿಲ್ಯ, ಅರಸಿನಮಕ್ಕಿಯ ರಾಜು ಕೆ.ಕೆ, ಬೆಳ್ತಂಗಡಿಯ ವಿ.ಆರ್ ನಾಯಕ್, ಹೊಸಂಗಡಿಯ ರಾಜೇಶ್, ತಾ.ಪಂ ಮಾಜಿ ಸ್ಥಾಯಿ ಸಮಿತಿ ಅಧ್ಯಕ್ಷ ವಿ.ಟಿ ಸೆಬಾಸ್ಟಿನ್ ನೆರಿಯ ಅವರು ವಿವಿಧ ವಿಷಯಗಳ ಬಗ್ಗೆ ದೂರು ನೀಡಿದರು. ಲೋಕಾಯುಕ್ತ ಅಧಿಕಾರಿಗಳು ದೂರನ್ನು ಸ್ವೀಕರಿಸಿ, ಕೆಲವೊಂದು ದೂರುಗಳ ಬಗ್ಗೆ ಕಂದಾಯ, ಸರ್ವೆ ಇಲಾಖೆಯ ಅಧಿಕಾರಿಗಳನ್ನು ವಿಚಾರಿಸಿ ದೂರುದಾರರಿಗೆ ಮಾಹಿತಿ ನೀಡಿದರು.

Related posts

ಮಚ್ಚಿನ ಸ.ಪ್ರೌ. ಶಾಲೆಯಲ್ಲಿ ವಲಯ ಮಟ್ಟದ ಪ್ರೌಢಶಾಲಾ ವಿಭಾಗದ ಪ್ರತಿಭಾ ಕಾರಂಜಿ ಸ್ಪರ್ಧೆ

Suddi Udaya

ಮೂಡಿಗೆರೆ ರಾಣಿಝರಿ ರಸ್ತೆಯಲ್ಲಿ ವ್ಹೀಲಿಂಗ್ ಮಾಡಿ ಹುಚ್ಚಾಟ: ಬೈಕ್ ಸಹಿತ ಉಜಿರೆಯ ಐವರು ಯುವಕರನ್ನು ಬಂಧಿಸಿದ ಪೊಲೀಸರು

Suddi Udaya

ಇಂದಬೆಟ್ಟುವಿನಲ್ಲಿ ಬಿಜೆಪಿ ಕಾರ್ಯಕರ್ತರಿಂದ ವಿಜಯೋತ್ಸವ ಆಚರಣೆ

Suddi Udaya

ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಅವಶ್ಯವಿರುವ ರಸ್ತೆ ಮತ್ತು ಸೇತುವೆ ರಚನೆ ಕಾಮಗಾರಿ ಅನುದಾನಕ್ಕೆ ಲೋಕೋಪಯೋಗಿ ಸಚಿವರಿಗೆ ಮನವಿ

Suddi Udaya

ಸೌಜನ್ಯಾ ಅತ್ಯಾಚಾರ, ಕೊಲೆ ಪ್ರಕರಣ : ಸಿಬಿಐ ಮೇಲ್ಮನವಿ

Suddi Udaya

ಭಾರತ್ ಅಟೋ ಕಾರ್‍ಸ್ ನಲ್ಲಿ ಮಾನ್ಸೂನ್ ಉಚಿತ ತಪಾಸಣೆ ಶಿಬಿರಕ್ಕೆ ಚಾಲನೆ

Suddi Udaya
error: Content is protected !!