September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬೆಳ್ತಂಗಡಿ ಎಸ್ ಡಿ ಎಂ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಶಾಲಾ ಸಂಸತ್ ಚುನಾವಣೆ

ಬೆಳ್ತಂಗಡಿ: ಇಲ್ಲಿನ ಎಸ್.ಡಿ.ಎಂ. ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳಲ್ಲಿ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಚುನಾವಣೆ ಪ್ರಕ್ರಿಯೆಯ ಬಗ್ಗೆ ಅರಿವು ಮೂಡಿಸುವ ಸಲುವಾಗಿ ಮತ್ತು ನಾಯಕತ್ವ ಗುಣಗಳನ್ನು ಬೆಳೆಸಲು ವಿದ್ಯಾರ್ಥಿ ಸಂಸತ್ ಚುನಾವಣೆಯು ಜೂ.12 ರಂದು ನಡೆಯಿತು.

ಚುನಾವಣೆ ಅಧಿಸೂಚನೆಯ ಮೂಲಕ ಪ್ರಕ್ರಿಯೆ ಆರಂಭವಾಗಿ, ನಾಮಪತ್ರ ಸಲ್ಲಿಕೆ, ನಾಮಪತ್ರ ಪರಿಶೀಲನೆ, ನಾಮಪತ್ರ ಹಿಂತೆಗೆತ ಹಾಗೂ ಚುನಾವಣಾ ಪ್ರಚಾರ ನಡೆದು, ಚುನಾವಣೆಯ ದಿನ ವಿದ್ಯಾರ್ಥಿಗಳು ಶಿಸ್ತುಬದ್ಧರಾಗಿ, ಸರತಿ ಸಾಲಿನಲ್ಲಿ ಬಂದು, ತಮ್ಮ ಗುರುತು ತಿಳಿಸಿ ಮತ ಚಲಾಯಿಸಿದರು.

ಸಾರ್ವತ್ರಿಕ ಚುನಾವಣೆಯ ಮಾದರಿಯಲ್ಲಿ ನಡೆದ ಈ ಚುನಾವಣೆಯಲ್ಲಿ ಇವಿಎಂ ಮಾದರಿಯ ಆ್ಯಪ್ ಮೂಲಕ ವಿದ್ಯಾರ್ಥಿಗಳು ಮತ ಚಲಾಯಿಸಿದರು. 
 
ವಿದ್ಯಾರ್ಥಿ ನಾಯಕನಾಗಿ 10ನೇ ತರಗತಿಯ ಆಯುಷ್ ಕೆ, ಉಪನಾಯಕನಾಗಿ 9ನೇ ತರಗತಿಯ ಜಯದೀಪ್, ಶಿಕ್ಷಣ ಮಂತ್ರಿಯಾಗಿ 8ನೇ ತರಗತಿಯ ಸುಪ್ರೀತ್, ಕ್ರೀಡಾ ಮಂತ್ರಿಯಾಗಿ 8ನೇ ತರಗತಿಯ ಸಮ್ಯಕ್, ಆರೋಗ್ಯ ಮತ್ತು ಶಿಸ್ತು ಮಂತ್ರಿಯಾಗಿ 10ನೇ ತರಗತಿಯ ಸ್ವಿತಾ ಜೈನ್, ಸಾಂಸ್ಕೃತಿಕ ಮಂತ್ರಿಯಾಗಿ 8ನೇ ತರಗತಿಯ ಭೂಮಿಕಾ, ಮಾನವ ಸಂಪನ್ಮೂಲ ಮಂತ್ರಿಯಾಗಿ 9ನೇ ತರಗತಿಯ ಸುವೀನ್ ಆಯ್ಕೆಯಾದರು.

ಚುನಾಯಿತ ವಿದ್ಯಾರ್ಥಿ ಸಂಸತ್ ಸದಸ್ಯರನ್ನು ಎಸ್ ಡಿ ಎಂ ಎಜುಕೇಷನಲ್ ಸೊಸೈಟಿಯ ನಿವೃತ್ತ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಜೀವಂದರ್ ಕುಮಾರ್ ಜೈನ್ ಇವರು ಅಭಿನಂದಿಸಿದರು ಮತ್ತು ಶಾಲೆಯ ಕಾರ್ಯಚಟುವಟಿಕೆ, ಎಸ್ ಎಸ್ ಎಲ್ ಸಿ ಫಲಿತಾಂಶದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು.

ಶಾಲಾ ಮುಖ್ಯ ಶಿಕ್ಷಕಿ ಹೇಮಲತಾ ಎಂ. ಆರ್. ಅವರ ಮಾರ್ಗದರ್ಶನದಲ್ಲಿ, ಶಿಕ್ಷಕಿಯರಾದ ಕಸ್ತೂರಿ,  ಕವನ ಚುನಾವಣಾ ಮುಖ್ಯಸ್ಥರಾಗಿ, ಶಿಕ್ಷಕಿಯರಾದ ಚೇತನಾ, ಮೆನಿತಾ, ಪ್ರೀತಿ, ನಯನ, ಶಿಕ್ಷಕ ಶ್ರೇಯಾಂಸ್ ಜೈನ್ ಚುನಾವಣಾ ಅಧಿಕಾರಿಗಳಾಗಿ, ಶಿಕ್ಷಕರಾದ ಸದಾನಂದ, ಮಂಜುನಾಥ್, ಪ್ರವೀಣ್ ಹಾಗೂ ಮುರಳಿ ಭದ್ರತಾ ಸಿಬ್ಬಂದಿಗಳಾಗಿ ಕಾರ್ಯ ನಿರ್ವಹಿಸಿದರು.

ಎಲ್ಲಾ ಶಿಕ್ಷಕ ಶಿಕ್ಷಕಿಯರು ಉಪಸ್ಥಿತರಿದ್ದು ಚುನಾವಣಾ ಕಾರ್ಯದಲ್ಲಿ ಸಹಕರಿಸಿದರು.

Related posts

ಕನ್ಯಾಡಿ ಸೇವಾಭಾರತಿಯ ನೂತನ ಕಾರ್ಯಾಲಯದ ವಾಸ್ತುಪೂಜೆ ಹಾಗೂ ಪ್ರವೇಶ:

Suddi Udaya

ವೇಣೂರು ಜಿನಪ್ರಸಾದ ಕಾಂಪ್ಲೆಕ್ಸ್‌ನಲ್ಲಿ ಟಿ.ಸಿ.ಎಲ್ ಲಾಂಡ್ರಿ ಸರ್ವಿಸ್ ಉದ್ಘಾಟನೆ

Suddi Udaya

ತೆಕ್ಕಾರು ಸರಳಿಕಟ್ಟೆ ಎಸ್.ವೈ.ಎಸ್. ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಆ. 12: ಪ್ರಾಥಮಿಕ ಶಾಲಾ ಶಿಕ್ಷಕರಿಂದ ಬೆಂಗಳೂರು ಚಲೋ: ಕ್ಷೇತ್ರ ಶಿಕ್ಷಣಾಧಿಕಾರಿಗಳು, ತಹಸೀಲ್ದಾರ್ ಮತ್ತು ಶಾಸಕರು, ವಿಧಾನಪರಿಷತ್ ಸದಸ್ಯರ ಮೂಲಕ ಸರಕಾರಕ್ಕೆ ಮನವಿ

Suddi Udaya

ಬೆಳ್ತಂಗಡಿ : ಶ್ರೀ ಗುರುದೇವ ಕಾಲೇಜಿನ ಕ್ರೀಡಾಕೂಟ ಉದ್ಘಾಟನೆ

Suddi Udaya

ಅಭಿವೃದ್ದಿ ಹೊಂದುತ್ತಿರುವ ಉಜಿರೆ ಹಳೆಪೇಟೆ ಸರಕಾರಿ ಶಾಲೆಯ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ ಶ್ರೀ ಕ್ಷೇತ್ರ ಧರ್ಮಸ್ಥಳದ ಮಾತೃಶ್ರೀ ಹೇಮಾವತಿ ಹೆಗ್ಗಡೆಯವರು ಬದುಕು ಕಟ್ಟೋಣ ಬನ್ನಿ ತಂಡದ ಸಂಚಾಲಕ ಮೋಹನ್ ಕುಮಾರ್ ನೇತೃತ್ವದಲ್ಲಿ ಶ್ರಮದಾನ

Suddi Udaya
error: Content is protected !!