23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬೆಳ್ತಂಗಡಿ ಮೆಟ್ರಿಕ್ ನಂತರದ ಬಾಲಕರ ವಸತಿ ನಿಲಯಕ್ಕೆ ಲೋಕಾಯುಕ್ತ ಅಧಿಕಾರಿಗಳ ಭೇಟಿ: ವಿವಿಧ ವಿಭಾಗಗಳ ಪರಿಶೀಲನೆ

ಬೆಳ್ತಂಗಡಿ : ಬೆಳ್ತಂಗಡಿ ಪದವಿಪೂರ್ವ ಕಾಲೇಜು ಬಳಿ ಇರುವ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವ್ಯಾಪ್ತಿಗೆ ಒಳಪಟ್ಟ ಡಿ. ದೇವರಾಜ ಅರಸು ಹಿಂದುಳಿದ ವರ್ಗಗಳ ಮೆಟ್ರಿಕ್ ನಂತರದ ಬಾಲಕರ ವಸತಿನಿಲಯಕ್ಕೆ ಲೋಕಾಯುಕ್ತ ಅಧಿಕಾರಿಗಳು ಬುಧವಾರ(ಜೂ12) ಭೇಟಿ ನೀಡಿ ವಸತಿ ನಿಲಯದ ವಿವಿಧ ವಿಭಾಗಗಳನ್ನು ಪರಿಶೀಲನೆ ನಡೆಸಿ, ಮಕ್ಕಳಿಗೆ ಮೂಲ ಭೂತ ಸೌಕರ್ಯಗಳನ್ನು ಒದಗಿಸಲಾಗಿದೆಯೇ ಎಂದು ವಿಚಾರಣೆ ನಡೆಸಿ, ಸೂಕ್ತ ಮಾರ್ಗದರ್ಶನ ನೀಡಿದರು.


ಕುಡಿಯುವ ನೀರು, ಅಡುಗೆಕೋಣೆ, ವಿಶ್ರಾಂತಿ ಕೊಠಡಿ, ಶೌಚಾಲಯ ವ್ಯವಸ್ಥೆಗಳ ಪರಿಶಿಲನೆ ಮಾಡಿದ ಅಧಿಕಾರಿಗಳು ವಸತಿನಿಲಯದ ಮೆಲ್ವಿಚಾರಕರಿಂದ ಮಾಹಿತಿ ಪಡೆದರು. ಅಡುಗೆ ಕೋಣೆ ಪರಿಶೀಲಿಸಿದ ಅಧಿಕಾರಿಗಳು ಆಹಾರ ದಾಸ್ತಾನು ಡಬ್ವಗಳ ಪರಿಶೀಲನೆ ಮಾಡಿದರು. ಮಳೆಗಾಲದಲ್ಲಿ ಮಕ್ಕಳಿಗೆ ಬಿಸಿ ನೀರು ಕೊಡಬೇಕು, ಸಣ್ಣ ಪುಟ್ಟ ಅನಾರೋಗ್ಯ ಕಂಡು ಬಂದರೆ ತಕ್ಷಣ ಸ್ಥಳೀಯ ಆರೋಗ್ಯ ಕೇಂದ್ರಕ್ಕೆ ಕರೆದುಕೊಂಡು ಹೊಗುವಂತೆ ಸೂಚಿಸಿದರು. ಈ ಬಗ್ಗೆ ನಿರ್ಲಕ್ಷ್ಯ ಕಂಡುಬಂದರೆ ಲೋಕಾಯುಕ್ತ ಸಂಬಂಧ ಪಟ್ಟ ಅಧಿಕಾರಿಗಳ ಮೇಲೆ ಕ್ರಮಕೈಗೊಳ್ಳುವ ಎಚ್ಚರಿಕೆ ನೀಡಿದರು.


ವಿದ್ಯಾರ್ಥಿಗಳಲ್ಲಿ ಮಾಹಿತಿ ಸಂಗ್ರಹಿಸಿದ ಅಧಿಕಾರಿಗಳು ಆಹಾರ ವ್ಯವಸ್ಥೆ, ಇನ್ನಿತರ ಸೌಲಭ್ಯಗಳ ಬಗ್ಗೆ ಮಾಹಿತಿ ಪಡೆದರು. ಉತ್ತಮ ಶಿಕ್ಷಣ ಪಡೆದು ಸಮಾಜದಲ್ಲಿ ಉತ್ತಮ ವ್ಯಕ್ತಿಗಳಾಗಬೇಕು, ವಸತಿ ನಿಲಯದಲ್ಲಿ ಸಮಸ್ಯೆ ಬಂದರೆ ಲೋಕಾಯುಕ್ತಕ್ಕೆ ದೂರು ನೀಡಲು ತಿಳಿಸಿದರು. ವಸತಿನಿಲಯದ ವಿದ್ಯಾರ್ಥಿಗಳು 100% ಫಲಿತಾಂಶ ಪಡೆದ ಬಗ್ಗೆ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಜೋಸೆಫ್ ಮಾಹಿತಿ ನೀಡಿದರು. ಇದಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ ಅಧಿಕಾರಿಗಳು ಸ್ಥಳೀಯ ಸಂಘ ಸಂಸ್ಥೆಗಳ ಸಂಪರ್ಕ ಪಡೆದು ಇಂತಹ ವಿದ್ಯಾರ್ಥಿಗಳಿಗೆ, ವಸತಿನಿಲಯದ ಸಿಬ್ಬಂದಿಗಳನ್ನು ಗುರುತಿಸಬೇಕು ಎಂದು ಸೂಚಿಸಿದರು.


ಲೋಕಾಯುಕ್ತ ಎಸ್ ಪಿ ನಟರಾಜ್ ಮಾರ್ಗದರ್ಶನದಲ್ಲಿ ಇನ್ಪೆಕ್ಟರುಗಳಾದ ಚಂದ್ರಶೇಖರ ಸಿ ಎಲ್, ಚಂದ್ರಶೇಖರ ಕೆ ಎನ್, ಅಮಾನುಲ್ಲಾ, ಸಿಬ್ಬಂದಿಗಳಾದ ವಿನಾಯಕ್, ಮಹೇಶ್, ಪಾಪಣ್ಣ ಭೇಟಿ ನೀಡಿ ಪರಿಶೀಲನೆ ನಡೆಸಿದರು.

Related posts

ವಿಶ್ವ ಹಿಂದೂ ಪರಿಷತ್ ಭಜರಂಗದಳ ಮಚ್ಚಿನ ಘಟಕ ಹಾಗೂ ವಿವಿಧ ಸಂಘಗಳಿಂದ ರಾಮ ದೀಪೋತ್ಸವ

Suddi Udaya

ಧರ್ಮಸ್ಥಳ: ಶ್ರೀ ಮಂಜುನಾಥ ಸ್ವಾಮಿ ಅನುದಾನಿತ ಹಿರಿಯ ಪ್ರಾಥಮಿಕ ಶಾಲಾ ಪ್ರಾರಂಭೋತ್ಸವ

Suddi Udaya

ಸುಲ್ಕೇರಿ ಭಗವಾನ್ ಶ್ರೀ ನೇಮಿನಾಥ ಸ್ವಾಮೀ ಬಸದಿಗೆ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆಯವರು ಭೇಟಿ

Suddi Udaya

ಬಂಗಾಡಿ ಬಿಎಸ್ ಎನ್ ಎಲ್ ನೆಟ್ವರ್ಕ್ ಸಮಸ್ಯೆ: ನೆಟ್ವರ್ಕ್ ಇಲ್ಲದೆ ಬ್ಯಾಂಕ್ , ಗ್ರಾಮ ಪಂಚಾಯತ್ ಗಳಲ್ಲಿ ಗ್ರಾಹಕರ ಪರದಾಟ

Suddi Udaya

ಸಜೀಪಮುನ್ನೂರು ಮೂರ್ತೆದಾರರ ಸೇವಾ ಸಹಕಾರಿ ಸಂಘಕ್ಕೆ ದ.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿಂದ ಸಾಧನಾ ಪ್ರಶಸ್ತಿ

Suddi Udaya

ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಬಹುಮಾನ ವಿತರಣಾ ಕಾರ್ಯಕ್ರಮ

Suddi Udaya
error: Content is protected !!