September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬೆಳ್ತಂಗಡಿ ಮೆಟ್ರಿಕ್ ನಂತರದ ಬಾಲಕರ ವಸತಿ ನಿಲಯಕ್ಕೆ ಲೋಕಾಯುಕ್ತ ಅಧಿಕಾರಿಗಳ ಭೇಟಿ: ವಿವಿಧ ವಿಭಾಗಗಳ ಪರಿಶೀಲನೆ

ಬೆಳ್ತಂಗಡಿ : ಬೆಳ್ತಂಗಡಿ ಪದವಿಪೂರ್ವ ಕಾಲೇಜು ಬಳಿ ಇರುವ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವ್ಯಾಪ್ತಿಗೆ ಒಳಪಟ್ಟ ಡಿ. ದೇವರಾಜ ಅರಸು ಹಿಂದುಳಿದ ವರ್ಗಗಳ ಮೆಟ್ರಿಕ್ ನಂತರದ ಬಾಲಕರ ವಸತಿನಿಲಯಕ್ಕೆ ಲೋಕಾಯುಕ್ತ ಅಧಿಕಾರಿಗಳು ಬುಧವಾರ(ಜೂ12) ಭೇಟಿ ನೀಡಿ ವಸತಿ ನಿಲಯದ ವಿವಿಧ ವಿಭಾಗಗಳನ್ನು ಪರಿಶೀಲನೆ ನಡೆಸಿ, ಮಕ್ಕಳಿಗೆ ಮೂಲ ಭೂತ ಸೌಕರ್ಯಗಳನ್ನು ಒದಗಿಸಲಾಗಿದೆಯೇ ಎಂದು ವಿಚಾರಣೆ ನಡೆಸಿ, ಸೂಕ್ತ ಮಾರ್ಗದರ್ಶನ ನೀಡಿದರು.


ಕುಡಿಯುವ ನೀರು, ಅಡುಗೆಕೋಣೆ, ವಿಶ್ರಾಂತಿ ಕೊಠಡಿ, ಶೌಚಾಲಯ ವ್ಯವಸ್ಥೆಗಳ ಪರಿಶಿಲನೆ ಮಾಡಿದ ಅಧಿಕಾರಿಗಳು ವಸತಿನಿಲಯದ ಮೆಲ್ವಿಚಾರಕರಿಂದ ಮಾಹಿತಿ ಪಡೆದರು. ಅಡುಗೆ ಕೋಣೆ ಪರಿಶೀಲಿಸಿದ ಅಧಿಕಾರಿಗಳು ಆಹಾರ ದಾಸ್ತಾನು ಡಬ್ವಗಳ ಪರಿಶೀಲನೆ ಮಾಡಿದರು. ಮಳೆಗಾಲದಲ್ಲಿ ಮಕ್ಕಳಿಗೆ ಬಿಸಿ ನೀರು ಕೊಡಬೇಕು, ಸಣ್ಣ ಪುಟ್ಟ ಅನಾರೋಗ್ಯ ಕಂಡು ಬಂದರೆ ತಕ್ಷಣ ಸ್ಥಳೀಯ ಆರೋಗ್ಯ ಕೇಂದ್ರಕ್ಕೆ ಕರೆದುಕೊಂಡು ಹೊಗುವಂತೆ ಸೂಚಿಸಿದರು. ಈ ಬಗ್ಗೆ ನಿರ್ಲಕ್ಷ್ಯ ಕಂಡುಬಂದರೆ ಲೋಕಾಯುಕ್ತ ಸಂಬಂಧ ಪಟ್ಟ ಅಧಿಕಾರಿಗಳ ಮೇಲೆ ಕ್ರಮಕೈಗೊಳ್ಳುವ ಎಚ್ಚರಿಕೆ ನೀಡಿದರು.


ವಿದ್ಯಾರ್ಥಿಗಳಲ್ಲಿ ಮಾಹಿತಿ ಸಂಗ್ರಹಿಸಿದ ಅಧಿಕಾರಿಗಳು ಆಹಾರ ವ್ಯವಸ್ಥೆ, ಇನ್ನಿತರ ಸೌಲಭ್ಯಗಳ ಬಗ್ಗೆ ಮಾಹಿತಿ ಪಡೆದರು. ಉತ್ತಮ ಶಿಕ್ಷಣ ಪಡೆದು ಸಮಾಜದಲ್ಲಿ ಉತ್ತಮ ವ್ಯಕ್ತಿಗಳಾಗಬೇಕು, ವಸತಿ ನಿಲಯದಲ್ಲಿ ಸಮಸ್ಯೆ ಬಂದರೆ ಲೋಕಾಯುಕ್ತಕ್ಕೆ ದೂರು ನೀಡಲು ತಿಳಿಸಿದರು. ವಸತಿನಿಲಯದ ವಿದ್ಯಾರ್ಥಿಗಳು 100% ಫಲಿತಾಂಶ ಪಡೆದ ಬಗ್ಗೆ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಜೋಸೆಫ್ ಮಾಹಿತಿ ನೀಡಿದರು. ಇದಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ ಅಧಿಕಾರಿಗಳು ಸ್ಥಳೀಯ ಸಂಘ ಸಂಸ್ಥೆಗಳ ಸಂಪರ್ಕ ಪಡೆದು ಇಂತಹ ವಿದ್ಯಾರ್ಥಿಗಳಿಗೆ, ವಸತಿನಿಲಯದ ಸಿಬ್ಬಂದಿಗಳನ್ನು ಗುರುತಿಸಬೇಕು ಎಂದು ಸೂಚಿಸಿದರು.


ಲೋಕಾಯುಕ್ತ ಎಸ್ ಪಿ ನಟರಾಜ್ ಮಾರ್ಗದರ್ಶನದಲ್ಲಿ ಇನ್ಪೆಕ್ಟರುಗಳಾದ ಚಂದ್ರಶೇಖರ ಸಿ ಎಲ್, ಚಂದ್ರಶೇಖರ ಕೆ ಎನ್, ಅಮಾನುಲ್ಲಾ, ಸಿಬ್ಬಂದಿಗಳಾದ ವಿನಾಯಕ್, ಮಹೇಶ್, ಪಾಪಣ್ಣ ಭೇಟಿ ನೀಡಿ ಪರಿಶೀಲನೆ ನಡೆಸಿದರು.

Related posts

ಬಂದಾರು: ಒಟೆಚ್ಚಾರ್ ನಲ್ಲಿ ತೋಟಕ್ಕೆ ನುಗ್ಗಿದ ಕಾಡಾನೆ : ಅಪಾರ ಕೃಷಿ ನಾಶ

Suddi Udaya

ಲಯನ್ಸ್ ವತಿಯಿಂದ ಆಹಾರ ಕಿಟ್ ಮತ್ತು ಬೆಡ್ ಶೀಟ್ ವಿತರಣೆ

Suddi Udaya

ಕುವೆಟ್ಟು ಮಹಾಶಕ್ತಿ ಕೇಂದ್ರದ ಕೊಯ್ಯೂರು ಶಕ್ತಿಕೇಂದ್ರದಲ್ಲಿ ನಮೋ ಯುವ ಚೌಪಲ್ 400 ಯೋಜನೆಗಳ ಮಾಹಿತಿ ಕಾರ್ಯಕ್ರಮ

Suddi Udaya

ದೊಡ್ಡ ಕರಳು ಹಾಗೂ ಮೇದೋಜಿರಕ ಗ್ರಂಥಿ ಸಂಬಂಧಿಸಿದ ಕಾಯಿಲೆಯಿಂದ ಬಳಲುತ್ತಿರುವ ಖಾಸಗಿ ಕಾಲೇಜಿನ ಉಪನ್ಯಾಸಕ ನಂದಕುಮಾರ್ ರವರ ಚಿಕಿತ್ಸೆಗೆ ನೆರವಾಗಿ

Suddi Udaya

ಬೆಳ್ತಂಗಡಿ ತಾಲೂಕು ಆದಿದ್ರಾವಿಡ ಸಮಾಜ ಸೇವಾ ಸಂಘದ ಧರ್ಮಸ್ಥಳ ಗ್ರಾಮ ಸಮಿತಿ ರಚನೆ

Suddi Udaya

ವೇಣೂರು: ಅಕ್ರಮವಾಗಿ ಗಾಂಜಾ ಸಾಗಾಟ,ಆರೋಪಿ ಬಂಧನಮೋಟಾರ್ ಸೈಕಲ್ ಹಾಗೂ ರೂ. 37 ಸಾವಿರದ 500 ಗ್ರಾಂ ಗಾಂಜಾ ವಶ ಪೋಲಿಸ್ ವೃತ್ತ ನಿರೀಕ್ಷಕ ಶಿವಕುಮಾರ ಬಿ ರವರ ನೇತೃತ್ವದಲ್ಲಿ ಕಾರ್ಯಾಚರಣೆ

Suddi Udaya
error: Content is protected !!