25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ಲಯನ್ಸ್ ಕ್ಲಬ್‌ನಿಂದ ಡಾ.ಡಿ. ವೀರೇಂದ್ರ ಹೆಗ್ಗಡೆಯವರ ಭೇಟಿ

ಬೆಳ್ತಂಗಡಿ : ಧರ್ಮಸ್ಥಳದಲ್ಲಿ ಲಯನ್ಸ್ ಕ್ಲಬ್ ನಿಂದ ಧರ್ಮಾಧಿಕಾರಿ ಡಾ. ಡಿ ವೀರೇಂದ್ರ ಹೆಗ್ಗಡೆಯವರನ್ನು ಜೂ.9 ರಂದು ಭೇಟಿ ಮಾಡಿ 50 ಸಂವತ್ಸರಗಳನ್ನು ಪೂರೈಸಿದ ಲಯನ್ಸ್ ಕ್ಲಬ್ ಬೆಳ್ತಂಗಡಿಯ ಸಾರ್ಥಕ ಸೇವೆಯ ಸವಿನೆನಪಿಗಾಗಿ ಜೂ.23ರಂದು ನಡೆಯಲಿರುವ ” ಸುವರ್ಣ ಸಂಭ್ರಮ” ದಿನಾಚರಣೆಗೆ ಆಹ್ವಾನ ನೀಡಿ ನಂತರ ರೂ.1 ಕೋಟಿ ವೆಚ್ಚದಲ್ಲಿ ನಿರ್ಮಾಣಗೊಳ್ಳಲಿರುವ ನೂತನ ಸಭಾಂಗಣಕ್ಕೆ ದೇಣಿಗೆಗಾಗಿ ಮನವಿ ಪತ್ರ ಸಲ್ಲಿಸಲಾಯಿತು.

ಈ ವೇಳೆ ಜು.13ರಂದು ನಡೆಯಲಿರುವ 2024-25ನೇ ಸಾಲಿನ ನೂತನ ಸಾರಥಿ ಲಯನ್ ದೇವದಾಸ್ ಶೆಟ್ಟಿ ಮತ್ತು ತಂಡದ ಪದಗ್ರಹಣ ಸಮಾರಂಭದ ಆಮಂತ್ರಣ ಪತ್ರಿಕೆಯನ್ನು ಬಿಡುಗಡೆಗೊಳಿಸಿ ಶುಭ ಹಾರೈಸಿದರು. ನಂತರ ಹೆಗ್ಗಡೆಯವರು ಲಯನ್ಸ್ ಭವನದ ಉದ್ಘಾಟನೆಗೆ ಬರುವ ಭರವಸೆ ಮತ್ತು ಅನುದಾನ ನೀಡುವುದಾಗಿ ಭರವಸೆ ನೀಡಿದರು.

ಈ ಸಂದರ್ಭದಲ್ಲಿ ಲಯನ್ಸ್ ಕ್ಲಬ್ ಅಧ್ಯಕ್ಷ ಉಮೇಶ್ ಶೆಟ್ಟಿ, ಕಾರ್ಯದರ್ಶಿ ಅನಂತ ಕೃಷ್ಣ, ಕೋಶಾಧಿಕಾರಿ ದತ್ತಾತ್ರೇಯ ಗೊಲ್ಲ, ಸ್ಥಾಪಕ ಅಧ್ಯಕ್ಷ ಎಂ.ಜಿ ಶೆಟ್ಟಿ, ವಿ.ಆರ್ ನಾಯಕ್, ಮಾಜಿ ಅಧ್ಯಕ್ಷ ವಸಂತ್ ಶೆಟ್ಟಿ, ಧರಣೇಂದ್ರ ಜೈನ್, ರವೀಂದ್ರ ಶೆಟ್ಟಿ, ಪ್ರಕಾಶ್ ಶೆಟ್ಟಿ ನೊಚ್ಚ, ನಿತ್ಯಾನಂದ ನಾವರ, ಜಯರಾಮ್ ಭಂಡಾರಿ, ಹೇಮಂತ್ ರಾವ್, ಜಯಂತ ಶೆಟ್ಟಿ, ರಾಜು ಶೆಟ್ಟಿ, ದೇವಿಪ್ರಸಾದ್ ಬೋಲ್ಮ, ನಿಯೋಜಿತ ಅಧ್ಯಕ್ಷ ದೇವದಾಸ್ ಶೆಟ್ಟಿ, ಕಾರ್ಯದರ್ಶಿ ಕಿರಣ್ ಕುಮಾರ್ ಶೆಟ್ಟಿ, ಸದಸ್ಯರಾದ ಕೃಷ್ಣಾಚಾರ್, ನ್ಯಾಣಪ್ಪ, ಲಿವೋ ಕಾರ್ಯದರ್ಶಿ ನಿರೀಕ್ಷಾ ಉಪಸ್ಥಿತರಿದ್ದರು.

Related posts

ವಿದ್ವತ್ ಜೆಇಇ ಸಾಧಕರಿಗೆ ಕಾಲೇಜು ವತಿಯಿಂದ ಅಭಿನಂದನೆ: 35 ವಿದ್ಯಾರ್ಥಿಗಳ ಪೈಕಿ 21 ಮಂದಿ ಶೇ.90 ಅಧಿಕ ಪರ್ಸೆಂಟೈಲ್ ಪಡೆದ ದಾಖಲೆ

Suddi Udaya

ಯಂತ್ರ 2.0″ ಸ್ಪರ್ಧೆ: ಉಜಿರೆ ಎಸ್.ಡಿ.ಎಂ ಆಂ.ಮಾ. ಶಾಲೆಯ ವಿದ್ಯಾರ್ಥಿಗಳಿಗೆ ಪ್ರಶಸ್ತಿ

Suddi Udaya

ಡಿ.28-ಜ.1: ಓಡಿಲ್ನಾಳ ಕಿರಾತಮೂರ್ತಿಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವರ್ಷಾವಧಿ ಜಾತ್ರೋತ್ಸವ

Suddi Udaya

ಬೆಳ್ತಂಗಡಿಯ ಮಾಚಾರ್ ನ ಶಿವರಾಮ ಗೌಡ ಪಿ. ರವರಿಗೆ ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ

Suddi Udaya

ಬೆಳ್ತಂಗಡಿ: ಪಾರಸ್ ಪೃಥ್ವಿ ಜ್ಯುವೆಲ್ಸ್ ನಲ್ಲಿ ಸರಕಾರಿ ಶಾಲಾ ವಿದ್ಯಾರ್ಥಿಗಳಿಗೆ ತಾಲೂಕು ಮಟ್ಟದ ಚಿತ್ರಕಲಾ ಸ್ಪರ್ಧೆ; ವಿಜೇತರಿಗೆ ಬಹುಮಾನ ವಿತರಣೆ

Suddi Udaya

ಜ.9: ವಿದ್ಯುತ್ ನಿಲುಗಡೆ

Suddi Udaya
error: Content is protected !!