24.6 C
ಪುತ್ತೂರು, ಬೆಳ್ತಂಗಡಿ
May 18, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ರೋಟರಿ ಕ್ಲಬ್ ಮಡಂತ್ಯಾರ್ ಗೆ ಪ್ರತಿಷ್ಠಿತ ಪ್ಲಾಟಿನಂ ಕ್ಲಬ್ ಪ್ರಶಸ್ತಿ

ಮಡಂತ್ಯಾರು :- ದ. ಕ ಜಿಲ್ಲೆಯ ಪ್ರತಿಷ್ಠಿತ ರೋಟರಿ ಕ್ಲಬ್ ಗಳಲ್ಲಿ ಒಂದಾದ ರೋಟರಿ ಕ್ಲಬ್ ಮಡಂತ್ಯಾರ್ ಗೆ ಇತ್ತೀಚಿಗೆ ಮೈಸೂರು ನಲ್ಲಿ ನಡೆದ ಸಮ್ಮೇಳನದಲ್ಲಿ ಅಂತರಾಷ್ಟ್ರೀಯ ಪ್ಲಾಟಿನಂ ಕ್ಲಬ್ ಪ್ರಶಸ್ತಿ ನೀಡಿ ಗೌರವಿಸಲಾಯಿತು.

ಪ್ರಸಕ್ತ ಸಾಲಿನಲ್ಲಿ ಮಡಂತ್ಯಾರ್ ಕ್ಲಬ್ ಜಿಲ್ಲೆಯಲ್ಲೇ ಮಾದರಿ ಕಾರ್ಯಕ್ರಮಗಳಾದ ನಮ್ಮ ನಡೆ ಆರ್ಥಿಕ ಸಾಕ್ಷಾರತೆಯ ಕಡೆಗೆ ಹಾಗೂ ಇತರ 180 ಕ್ಕೂ ಅಧಿಕ ಸಾರ್ವಜನಿಕರಿಗೆ ಬಹುಉಪಯೋಗವಾಗುವಂತಹ ಅನೇಕ ಕಾರ್ಯಕ್ರಮಗಳನ್ನು ಆಯೋಜಿಸಿತ್ತು. ಇದರಿಂದಾಗಿ ಕ್ಲಬ್ ನ ಇತಿಹಾಸದಲ್ಲಿ ಪ್ರಥಮ ಬಾರಿಗೆ ಪ್ಲಾಟಿನಂ ಪ್ರಶಸ್ತಿ ಬಂದಿರುತ್ತದೆ.

ಪ್ರಸಕ್ತ ಸಾಲಿನ ಕ್ಲಬ್ ನ ಸೇವಾಚಟುವಟಿಕೆಗಳನ್ನು ಆಧಾರಿಸಿ ಕೊಡಮಾಡುವ ಅತ್ಯುನ್ನತ ಗೌರವಕ್ಕೆ ಪಾತ್ರರಾದ ಕ್ಲಬ್ ನ ಪರವಾಗಿ ಕ್ಲಬ್ ನ ಅಧ್ಯಕ್ಷ ಪೇಜಾವರ ಶ್ರೀಧರ ರಾವ್ ಇವರು ಜಿಲ್ಲಾ ಗೌವರ್ನರ್ ಹೆಚ್. ಆರ್.ಕೇಶವ ರವರಿಂದ ಗೌರವವನ್ನು ಸ್ವೀಕರಿಸಿದರು.

ಕ್ಲಬ್ ನ ಸಹಕಾರ್ಯದರ್ಶಿಯವರಾದ ಆದಿತ್ಯ ಎಸ್ ರಾವ್ ಮತ್ತು ಇತರ ಸದಸ್ಯರು ಹಾಜರಿದ್ದರು.

Related posts

ಗುರುವಾಯನಕೆರೆ ಶಕ್ತಿನಗರ ನಿವಾಸಿ ಧನಂಜಯ ಇಂದ್ರ ನಿಧನ

Suddi Udaya

ಶಿರ್ಲಾಲು ರಿಕ್ಷಾ ಚಾಲಕ-ಮಾಲಕ ಸಂಘದ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ದೆಹಲಿಯಲ್ಲಿ ನಿರ್ಮಾಣಗೊಳ್ಳಲಿರುವ ಯೋಧರ ಉದ್ಯಾನವನಕ್ಕೆ ಬೆಳ್ತಂಗಡಿಯಿಂದ ಮಣ್ಣು ಸಮರ್ಪಣೆ

Suddi Udaya

ಮೊಗ್ರು: ಶ್ರೀರಾಮ ಶಿಶು ಮಂದಿರದಲ್ಲಿ ವನಮಹೋತ್ಸವ

Suddi Udaya

ಕೊಯ್ಯೂರು: ಹರ್ಪಳದಲ್ಲಿ ಅಡ್ಡಲಾಗಿರುವ ಮರವನ್ನು ಸರಿಸಿ ದಾರಿಯನ್ನು ಸರಿಪಡಿಸುವಂತೆ ಸ್ಥಳೀಯರ ಒತ್ತಾಯ

Suddi Udaya

ಬೆಳ್ತಂಗಡಿ ವಕೀಲರ ಭವನದಲ್ಲಿ ಸಂವಿಧಾನ ದಿನ ಆಚರಣೆ

Suddi Udaya
error: Content is protected !!