32.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಸರಳಿಕಟ್ಟೆ ಪ್ರೌಢಶಾಲೆಯಲ್ಲಿ ಯುವ ಸಂಸತ್ತು ಚುನಾವಣೆ


ಬಾರ್ಯ: ಸರಳಿಕಟ್ಟೆಯ ಸರಕಾರಿ ಪ್ರೌಢಶಾಲೆಯಲ್ಲಿ 2024-25ನೇ ಸಾಲಿಗೆ ಪ್ರಜಾಪ್ರಭುತ್ವ ಮಾದರಿಯಲ್ಲಿ ಯುವ ಸಂಸತ್ತಿಗೆ ಶಾಲಾ ನಾಯಕ ಹಾಗೂ ಶಾಲಾ ಉಪನಾಯಕನ ಆಯ್ಕೆ ನಡೆಸಲಾಯಿತು. ಮೊಬೈಲ್ ಇ.ವಿ.ಎಂ. ಆಪ್ ಬಳಸಿ ಮತ ಚಲಾಯಿಸುವ ವಿಧಾನದ ಬಗ್ಗೆ ವಿವರಿಸಿ ನಂತರ ವಿದ್ಯಾರ್ಥಿಗಳಿಗೆ ಮತದಾನದ ಅವಕಾಶ ನೀಡಲಾಯಿತು.


ಶಾಲಾ ನಾಯಕನಾಗಿ 10ನೇ ತರಗತಿಯ ಇಸ್ಮಾಯಿಲ್ ರಂಶಿದ್, ಉಪನಾಯಕನಾಗಿ 9ನೇ ತರಗತಿಯ ಮುಹಮ್ಮದ್ ಅಶ್ವರ್ ಆಯ್ಕೆಯಾದರು. ವಿರೋಧ ಪಕ್ಷದ ನಾಯಕನಾಗಿ 10ನೇ ತರಗತಿಯ ಮಹಮ್ಮದ್ ಅಜ್ಮಲ್ ವಿರೋಧ ಪಕ್ಷದ ಉಪನಾಯಕಿಯಾಗಿ 9ನೇ ತರಗತಿಯ ಫಾತಿಮತ್ ಅಫ್ರ ಆಯ್ಕೆಯಾದರು.

ಚುನಾವಣಾ ಸಾಕ್ಷರತಾ ಕ್ಲಬ್ ನ ಸಂಚಾಲಕರಾದ ವಿಜಯಶ್ರೀ ಯವರು ಚುನಾವಣಾ ಪ್ರಕ್ರಿಯೆಯನ್ನು ನಡೆಸಿಕೊಟ್ಟರು. ಮುಖ್ಯೋಪಾಧ್ಯಾಯರಾದ ಹರಿಕಿರಣ್ ಕೆ ಇವರ ಮಾರ್ಗದರ್ಶನದಲ್ಲಿ ಸಹಶಿಕ್ಷಕರಾದ ಮಹಮ್ಮದ್ ಹನೀಫ್, ನಳಿನಾಕ್ಷಿ, ವಿಜಯಶ್ರೀ, ಸಪ್ನಾರಾವ್, ಶಾಂತಾ, ಗಂಗವ್ವ, ರಾಜೇಸಾಬ್ ಹೊಸಕೇರಿ ಹಾಗೂ ತಾರಾ ಚುನಾವಣಾ ಪ್ರಕ್ರಿಯೆ ನಡೆಸಲು ಸಹಕರಿಸಿದರು.

Related posts

ಉಜಿರೆ ಶ್ರೀ ಧ.ಮಂ. ಪದವಿಪೂರ್ವ ಕಾಲೇಜಿನಲ್ಲಿ ಸಂಸ್ಕೃತೋತ್ಸವ

Suddi Udaya

ಉಜಿರೆ: ಅಂತರ್ ಜಿಲ್ಲಾ ಮಟ್ಟದ ಟೆನ್ನಿಸ್ ಬಾಲ್ ಓವರ್ ಆರ್ಮ್ ಕ್ರಿಕೆಟ್ ಪಂದ್ಯಾಟ ಗೌಡಸ್ 2024

Suddi Udaya

ಗುರುವಾಯನಕೆರೆ ಎಕ್ಸೆಲ್ ಕಾಲೇಜಿನಲ್ಲಿ ಶೈಕ್ಷಣಿಕ ಸಮ್ಮೇಳನ

Suddi Udaya

ಬಂದಾರು ಗ್ರಾ.ಪಂ. ಜಮಾಬಂದಿ ಹಾಗೂ ರಾಜ್ಯ ಮಟ್ಟದ ಪ್ರಶಸ್ತಿ ಪಡೆದ ಯುವ ಸಾಹಿತಿ ಚಂದ್ರಹಾಸ ಕುಂಬಾರ ಹಾಗೂ ರಾಜ್ಯ ಮಟ್ಟದ ವೆಟ್ ಲಿಫ್ಟಿಂಗ್ ನಲ್ಲಿ ಅವಳಿ ಚಿನ್ನದ ಪದಕ ವಿಜೇತೆ ಕು. ತೇಜಶ್ವಿನಿ ಪೂಜಾರಿ ರವರಿಗೆ ಸನ್ಮಾನ

Suddi Udaya

ಅಳದಂಗಡಿ: ಮಹಿಳೆ ನೇಣು ಬಿಗಿದು ಆತ್ಮಹತ್ಯೆ

Suddi Udaya

ಉಜಿರೆ: ಅಗತ್ಯ ದಾಖಲೆ ಹಾಗೂ ನಗದು ಇದ್ದ ಪರ್ಸ್ ಬಿದ್ದು ಕಳೆದುಹೋಗಿದೆ

Suddi Udaya
error: Content is protected !!