25.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಸರಳಿಕಟ್ಟೆ ಪ್ರೌಢಶಾಲೆಯಲ್ಲಿ ಯುವ ಸಂಸತ್ತು ಚುನಾವಣೆ


ಬಾರ್ಯ: ಸರಳಿಕಟ್ಟೆಯ ಸರಕಾರಿ ಪ್ರೌಢಶಾಲೆಯಲ್ಲಿ 2024-25ನೇ ಸಾಲಿಗೆ ಪ್ರಜಾಪ್ರಭುತ್ವ ಮಾದರಿಯಲ್ಲಿ ಯುವ ಸಂಸತ್ತಿಗೆ ಶಾಲಾ ನಾಯಕ ಹಾಗೂ ಶಾಲಾ ಉಪನಾಯಕನ ಆಯ್ಕೆ ನಡೆಸಲಾಯಿತು. ಮೊಬೈಲ್ ಇ.ವಿ.ಎಂ. ಆಪ್ ಬಳಸಿ ಮತ ಚಲಾಯಿಸುವ ವಿಧಾನದ ಬಗ್ಗೆ ವಿವರಿಸಿ ನಂತರ ವಿದ್ಯಾರ್ಥಿಗಳಿಗೆ ಮತದಾನದ ಅವಕಾಶ ನೀಡಲಾಯಿತು.


ಶಾಲಾ ನಾಯಕನಾಗಿ 10ನೇ ತರಗತಿಯ ಇಸ್ಮಾಯಿಲ್ ರಂಶಿದ್, ಉಪನಾಯಕನಾಗಿ 9ನೇ ತರಗತಿಯ ಮುಹಮ್ಮದ್ ಅಶ್ವರ್ ಆಯ್ಕೆಯಾದರು. ವಿರೋಧ ಪಕ್ಷದ ನಾಯಕನಾಗಿ 10ನೇ ತರಗತಿಯ ಮಹಮ್ಮದ್ ಅಜ್ಮಲ್ ವಿರೋಧ ಪಕ್ಷದ ಉಪನಾಯಕಿಯಾಗಿ 9ನೇ ತರಗತಿಯ ಫಾತಿಮತ್ ಅಫ್ರ ಆಯ್ಕೆಯಾದರು.

ಚುನಾವಣಾ ಸಾಕ್ಷರತಾ ಕ್ಲಬ್ ನ ಸಂಚಾಲಕರಾದ ವಿಜಯಶ್ರೀ ಯವರು ಚುನಾವಣಾ ಪ್ರಕ್ರಿಯೆಯನ್ನು ನಡೆಸಿಕೊಟ್ಟರು. ಮುಖ್ಯೋಪಾಧ್ಯಾಯರಾದ ಹರಿಕಿರಣ್ ಕೆ ಇವರ ಮಾರ್ಗದರ್ಶನದಲ್ಲಿ ಸಹಶಿಕ್ಷಕರಾದ ಮಹಮ್ಮದ್ ಹನೀಫ್, ನಳಿನಾಕ್ಷಿ, ವಿಜಯಶ್ರೀ, ಸಪ್ನಾರಾವ್, ಶಾಂತಾ, ಗಂಗವ್ವ, ರಾಜೇಸಾಬ್ ಹೊಸಕೇರಿ ಹಾಗೂ ತಾರಾ ಚುನಾವಣಾ ಪ್ರಕ್ರಿಯೆ ನಡೆಸಲು ಸಹಕರಿಸಿದರು.

Related posts

ತೆಕ್ಕಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ನೂತನ ಕಟ್ಟಡ “ಸೌಭಾಗ್ಯ” ಲೋಕಾರ್ಪಣೆ

Suddi Udaya

ಓಡೀಲು ಶ್ರೀ ಮಹಾಲಿಂಗೇಶ್ವರ ದೇವರಿಗೆ ಸಹಸ್ರ ಸೀಯಾಳಾಭಿಷೇಕ

Suddi Udaya

ಪಣಕಜೆ ಹೆದ್ದಾರಿಯಲ್ಲಿ ವಿದ್ಯುತ್ ವಯರ್ ಗೆ ಜೆಸಿಬಿ ತಾಗಿ ವಾಹನ ಸಂಚಾರ ಕ್ಕೆ ಆಡಚಣೆ

Suddi Udaya

ನಿಡ್ಲೆ ಸರಕಾರಿ ಪ್ರೌಢಶಾಲೆ ನೂತನ ಹಳೆ ವಿದ್ಯಾರ್ಥಿ ಸಂಘ ರಚನೆ

Suddi Udaya

ಬೆಳ್ತಂಗಡಿ: ತೆಂಕಕಾರಂದೂರು ಪಲ್ಕೆ ಎರಡು ಮನೆಯಲ್ಲಿ ಕಳ್ಳತನ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ್ ಭೇಟಿ

Suddi Udaya
error: Content is protected !!