25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಸರಳಿಕಟ್ಟೆ ಪ್ರೌಢಶಾಲೆಯಲ್ಲಿ ಯುವ ಸಂಸತ್ತು ಚುನಾವಣೆ


ಬಾರ್ಯ: ಸರಳಿಕಟ್ಟೆಯ ಸರಕಾರಿ ಪ್ರೌಢಶಾಲೆಯಲ್ಲಿ 2024-25ನೇ ಸಾಲಿಗೆ ಪ್ರಜಾಪ್ರಭುತ್ವ ಮಾದರಿಯಲ್ಲಿ ಯುವ ಸಂಸತ್ತಿಗೆ ಶಾಲಾ ನಾಯಕ ಹಾಗೂ ಶಾಲಾ ಉಪನಾಯಕನ ಆಯ್ಕೆ ನಡೆಸಲಾಯಿತು. ಮೊಬೈಲ್ ಇ.ವಿ.ಎಂ. ಆಪ್ ಬಳಸಿ ಮತ ಚಲಾಯಿಸುವ ವಿಧಾನದ ಬಗ್ಗೆ ವಿವರಿಸಿ ನಂತರ ವಿದ್ಯಾರ್ಥಿಗಳಿಗೆ ಮತದಾನದ ಅವಕಾಶ ನೀಡಲಾಯಿತು.


ಶಾಲಾ ನಾಯಕನಾಗಿ 10ನೇ ತರಗತಿಯ ಇಸ್ಮಾಯಿಲ್ ರಂಶಿದ್, ಉಪನಾಯಕನಾಗಿ 9ನೇ ತರಗತಿಯ ಮುಹಮ್ಮದ್ ಅಶ್ವರ್ ಆಯ್ಕೆಯಾದರು. ವಿರೋಧ ಪಕ್ಷದ ನಾಯಕನಾಗಿ 10ನೇ ತರಗತಿಯ ಮಹಮ್ಮದ್ ಅಜ್ಮಲ್ ವಿರೋಧ ಪಕ್ಷದ ಉಪನಾಯಕಿಯಾಗಿ 9ನೇ ತರಗತಿಯ ಫಾತಿಮತ್ ಅಫ್ರ ಆಯ್ಕೆಯಾದರು.

ಚುನಾವಣಾ ಸಾಕ್ಷರತಾ ಕ್ಲಬ್ ನ ಸಂಚಾಲಕರಾದ ವಿಜಯಶ್ರೀ ಯವರು ಚುನಾವಣಾ ಪ್ರಕ್ರಿಯೆಯನ್ನು ನಡೆಸಿಕೊಟ್ಟರು. ಮುಖ್ಯೋಪಾಧ್ಯಾಯರಾದ ಹರಿಕಿರಣ್ ಕೆ ಇವರ ಮಾರ್ಗದರ್ಶನದಲ್ಲಿ ಸಹಶಿಕ್ಷಕರಾದ ಮಹಮ್ಮದ್ ಹನೀಫ್, ನಳಿನಾಕ್ಷಿ, ವಿಜಯಶ್ರೀ, ಸಪ್ನಾರಾವ್, ಶಾಂತಾ, ಗಂಗವ್ವ, ರಾಜೇಸಾಬ್ ಹೊಸಕೇರಿ ಹಾಗೂ ತಾರಾ ಚುನಾವಣಾ ಪ್ರಕ್ರಿಯೆ ನಡೆಸಲು ಸಹಕರಿಸಿದರು.

Related posts

ಚಿಕ್ಕಮಗಳೂರಿನಲ್ಲಿ ಕಳ್ಳತನವಾದ ಓಮಿನಿ ಕಾರು ಉಜಿರೆಯಲ್ಲಿ ಪತ್ತೆ: ಮಾಲೀಕನ ಸ್ನೇಹಿತರ ಮೂಲಕ 10 ದಿನದಲ್ಲಿ ಕಾರು ಪತ್ತೆ

Suddi Udaya

ಗೇರುಕಟ್ಟೆ: ಪರಪ್ಪು ಮಸೀದಿಯಲ್ಲಿ ರಾಷ್ಟ್ರ ಮಟ್ಟದ ಸಾಹಿತ್ಯೋತ್ಸವದಲ್ಲಿ ವಿಜೇತರಾದವರಿಗೆ ಅಭಿನಂದನೆ

Suddi Udaya

ಮಚ್ಚಿನ: ಬಳ್ಳಮಂಜ ಮಹತೋಭಾರ ಶ್ರೀ ಅನಂತೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಪಂಚಮಿಯ ಕೊಪ್ಪರಿಗೆ ಮುಹೂರ್ತ, ಅಂಗಪ್ರದಕ್ಷಿಣೆ

Suddi Udaya

ಹತ್ಯಡ್ಕ ಗ್ರಾಮದ ಪಲಸ್ತಡ್ಕ ನಿವಾಸಿ ಸಂಜೀವ ಗೌಡ ನಿಧನ

Suddi Udaya

ಮಚ್ಚಿನ : ಸರ್ಕಾರಿ ಪ್ರೌಢಶಾಲೆಯಲ್ಲಿ ವಾರ್ಷಿಕ ಕ್ರೀಡಾಕೂಟ

Suddi Udaya

ನಡ ಗೌಡರ ಯಾನೆ ಒಕ್ಕಲಿಗರ ಗ್ರಾಮ ಸಮಿತಿ ಮತ್ತು ಯುವ ವೇದಿಕೆಯಿಂದ ಆಟಿಡೊಂಜಿ ದಿನ ಮತ್ತು ‘ಪ್ರತಿಭಾ ಪುರಸ್ಕಾರ’ ಕಾರ್ಯಕ್ರಮ

Suddi Udaya
error: Content is protected !!