22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಸರಳಿಕಟ್ಟೆ ಪ್ರೌಢಶಾಲೆಯಲ್ಲಿ ಯುವ ಸಂಸತ್ತು ಚುನಾವಣೆ


ಬಾರ್ಯ: ಸರಳಿಕಟ್ಟೆಯ ಸರಕಾರಿ ಪ್ರೌಢಶಾಲೆಯಲ್ಲಿ 2024-25ನೇ ಸಾಲಿಗೆ ಪ್ರಜಾಪ್ರಭುತ್ವ ಮಾದರಿಯಲ್ಲಿ ಯುವ ಸಂಸತ್ತಿಗೆ ಶಾಲಾ ನಾಯಕ ಹಾಗೂ ಶಾಲಾ ಉಪನಾಯಕನ ಆಯ್ಕೆ ನಡೆಸಲಾಯಿತು. ಮೊಬೈಲ್ ಇ.ವಿ.ಎಂ. ಆಪ್ ಬಳಸಿ ಮತ ಚಲಾಯಿಸುವ ವಿಧಾನದ ಬಗ್ಗೆ ವಿವರಿಸಿ ನಂತರ ವಿದ್ಯಾರ್ಥಿಗಳಿಗೆ ಮತದಾನದ ಅವಕಾಶ ನೀಡಲಾಯಿತು.


ಶಾಲಾ ನಾಯಕನಾಗಿ 10ನೇ ತರಗತಿಯ ಇಸ್ಮಾಯಿಲ್ ರಂಶಿದ್, ಉಪನಾಯಕನಾಗಿ 9ನೇ ತರಗತಿಯ ಮುಹಮ್ಮದ್ ಅಶ್ವರ್ ಆಯ್ಕೆಯಾದರು. ವಿರೋಧ ಪಕ್ಷದ ನಾಯಕನಾಗಿ 10ನೇ ತರಗತಿಯ ಮಹಮ್ಮದ್ ಅಜ್ಮಲ್ ವಿರೋಧ ಪಕ್ಷದ ಉಪನಾಯಕಿಯಾಗಿ 9ನೇ ತರಗತಿಯ ಫಾತಿಮತ್ ಅಫ್ರ ಆಯ್ಕೆಯಾದರು.

ಚುನಾವಣಾ ಸಾಕ್ಷರತಾ ಕ್ಲಬ್ ನ ಸಂಚಾಲಕರಾದ ವಿಜಯಶ್ರೀ ಯವರು ಚುನಾವಣಾ ಪ್ರಕ್ರಿಯೆಯನ್ನು ನಡೆಸಿಕೊಟ್ಟರು. ಮುಖ್ಯೋಪಾಧ್ಯಾಯರಾದ ಹರಿಕಿರಣ್ ಕೆ ಇವರ ಮಾರ್ಗದರ್ಶನದಲ್ಲಿ ಸಹಶಿಕ್ಷಕರಾದ ಮಹಮ್ಮದ್ ಹನೀಫ್, ನಳಿನಾಕ್ಷಿ, ವಿಜಯಶ್ರೀ, ಸಪ್ನಾರಾವ್, ಶಾಂತಾ, ಗಂಗವ್ವ, ರಾಜೇಸಾಬ್ ಹೊಸಕೇರಿ ಹಾಗೂ ತಾರಾ ಚುನಾವಣಾ ಪ್ರಕ್ರಿಯೆ ನಡೆಸಲು ಸಹಕರಿಸಿದರು.

Related posts

ಎಸ್.ಡಿ.ಎಂ. ಪಿ.ಯು. ವಾಣಿಜ್ಯಶಾಸ್ತ್ರ ವಿದ್ಯಾರ್ಥಿಗಳಿಂದ ಕೈಗಾರಿಕಾ ಪ್ರದೇಶಗಳಿಗೆ ಭೇಟಿ

Suddi Udaya

ಕಲ್ಮಂಜ: ನಿಡಿಗಲ್ ಶ್ರೀ ಸತ್ಯನಾರಾಯಣ ಭಜನಾ ಮಂಡಳಿ ನೂತನ ಸಮಿತಿ ರಚನೆ

Suddi Udaya

ಕುವೆಟ್ಟು:ಖಾಸಗಿ ವಿದ್ಯಾಸಂಸ್ಥೆಯ ಆಡಳಿತ ಮಂಡಳಿಯ ವಿರುದ್ಧ ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಕಣಿಯೂರು: ಪಿಲಿಗೂಡು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸ್ಮಾರ್ಟ್ ಕ್ಲಾಸ್ ಬಿಡುಗಡೆ

Suddi Udaya

ಕುವೆಂಪು ವಿಶ್ವವಿದ್ಯಾನಿಲಯದಿಂದ ಸ್ವಾತಿ ಬಿ ಅವರಿಗೆ ಪಿ.ಹೆಚ್.ಡಿ ಅವಾರ್ಡ್

Suddi Udaya

ಸೆ.6: ರೆಖ್ಯದಲ್ಲಿ 24ನೇ ವರ್ಷದ ಮೊಸರು ಕುಡಿಕೆ ಉತ್ಸವ

Suddi Udaya
error: Content is protected !!