25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕರ್ನಾಟಕ ರಾಜ್ಯದ ವೃತ್ತಿಪರ ಸಿವಿಲ್ ಇಂಜಿನಿಯರುಗಳ ಪರಿಷತ್ತಿನ ಚೊಚ್ಚಲ ಸಮಿತಿಗೆ ಜಗದೀಶ ಪ್ರಸಾದ್ ಆಯ್ಕೆ

ಬೆಳ್ತಂಗಡಿ: ಕರ್ನಾಟಕ ರಾಜ್ಯದ ವೃತ್ತಿಪರ ಸಿವಿಲ್ ಎಂಜಿನಿಯರುಗಳ ಪರಿಷತ್ತಿನ ಚೊಚ್ಚಲ ಸಮಿತಿಗೆ ಅಸೋಸಿಯೇಟ್ ಕನ್ಸ್ಲಟಿಂಗ್ ಸಿವಿಲ್ ಇಂಜಿನಿಯರ್ ಬೆಳ್ತಂಗಡಿ ತಾಲೂಕು ಸೆಂಟರ್ ಪ್ರಸ್ತುತ ಅಧ್ಯಕ್ಷ, ಸ್ಥಾಪಕಾದ್ಯಕ್ಷ ಇಂಜಿನಿಯರ್ ಜಗದೀಶ ಪ್ರಸಾದ್ ರವರು ರಾಜ್ಯ ಮಟ್ಟದ ಅತ್ಯುನ್ನತ ಸ್ಥಾನಮಾನವನ್ನು ಪಡೆದಿದ್ದಾರೆ.

ಕರ್ನಾಟಕ ವೃತ್ತಿ ಪರ ಸಿವಿಲ್ ಇಂಜಿನೀಯರುಗಳ ಪರಿಷತ್ತು ಇನ್ನು ಮುಂದೆ ಕಾರ್ಯಾಚರಣೆ ಮಾಡಲಿದ್ದು, ಇದರ ಕೇಂದ್ರ ಕಚೇರಿ ಬೆಂಗಳೂರಿನಲ್ಲಿ ಕಾರ್ಯನಿರ್ವಹಿಸುತ್ತಿದೆ. ಈ ಪರಿಷತ್ತು 18 ಸದಸ್ಯರ ಸಮಿತಿ ಹೊಂದಿದ್ದು, ಇದರಲ್ಲಿ 8 ಜನ ಸರಕಾರದಿಂದ ಆಯ್ದ ಸಿವಿಲ್ ಎಂಜಿನಿಯರ್ ಕ್ಷೇತ್ರದಿಂದ ನಾಮನಿರ್ದೇಶನ ಆಗಲಿದ್ದಾರೆ. ಉಳಿದ 10 ಜನ ಸದಸ್ಯರು ವೃತ್ತಿ ನಿರತ ಸಿವಿಲ್ ಎಂಜಿನಿಯರ್ ಗಳು ಆಯ್ಕೆ ಆಗಲಿದ್ದಾರೆ. ಇದರಲ್ಲಿ 4 ಜನ ಬೆಂಗಳೂರು ಕೇಂದ್ರದಿಂದ, ಉಳಿದ 6 ಜನ ಕಲಬುರ್ಗಿ, ಬೆಳಗಾವಿ ಮತ್ತು ಮಂಗಳೂರು ಕೇಂದ್ರದಿಂದ ತಲಾ 2 ಜನ ಆಯ್ಕೆ ಆಗಲಿದ್ದಾರೆ. ಅಧಿಕಾರದ ಅವಧಿ ಮೂರು ವರ್ಷ ಇರಲಿದೆ.

ಚೊಚ್ಚಲ ಕರ್ನಾಟಕ ವೃತ್ತಿ ಪರ ಸಿವಿಲ್ ಇಂಜಿನಿಯರುಗಳ ಪರಿಷತ್ತು ನಲ್ಲಿ ಮಂಗಳೂರು ವಿಭಾಗದಿಂದ ಇಂಜಿನಿಯರ್ ಜಗದೀಶ್ ಪ್ರಸಾದ್ ಇವರು ಸರ್ವಾನುಮತದಿಂದ ಆಯ್ಕೆ ಆಗಿದ್ದಾರೆ.

ಇವರು ವೃತ್ತಿಯಲ್ಲಿ ಸಿವಿಲ್ ಇಂಜಿನಿಯರ್, ನ್ಯಾಷನಲ್ ಬ್ಯಾಂಕ್ ಗಳ ವ್ಯಾಲ್ಯೂವರ್ ಆದರೂ ಕೃಷಿ ಕ್ಷೇತ್ರದಲ್ಲಿ ತನ್ನ ಛಾಪನ್ನು ಮೂಡಿಸಿರುವ, ಹಲವು ಸಮಾಜ ಮುಖಿ ಕಾರ್ಯಗಳಲ್ಲಿ ತನ್ನನ್ನು ತಾನು ತೊಡಗಿಸಿಕೊಂಡಿದ್ದಾರೆ .

Related posts

ಬೆಳ್ತಂಗಡಿ: ನೇತಾಜಿ ಸುಭಾಶ್ಚಂದ್ರ ಬೋಸ್ ಆವಾಸೀಯ ವಿದ್ಯಾಲಯದಲ್ಲಿ ಸಂಭ್ರಮ ಶನಿವಾರಕ್ಕೆ ಚಾಲನೆ

Suddi Udaya

ಬೆಳ್ತಂಗಡಿ ಬಸದಿಯಲ್ಲಿ ನಮೋಕಾರ ಮಹಾಮಂತ್ರ ಪಠಣ

Suddi Udaya

ಕರಾಯ ಶ್ರೀ ಕೃಷ್ಣ ಭಜನಾ ಮಂದಿರದಲ್ಲಿ ಭಜನಾ ತರಬೇತಿ ಕಾರ್ಯಾಗಾರ

Suddi Udaya

ಶ್ರೀ ಕುಕ್ಕೆ ಸುಬ್ರಹ್ಮಣ್ಯ ಮಠದ ಶ್ರೀವಿದ್ಯಾಪ್ರಸನ್ನ ತೀರ್ಥ ಸ್ವಾಮೀಜಿಯವರಿಂದ ಬೆನಕ ಆಸ್ಪತ್ರೆಯ ವಿಸ್ತೃತ ಕಟ್ಟಡದ ಧಾರ್ಮಿಕ ಕಾರ್ಯಕ್ರಮಗಳಿಗೆ ಚಾಲನೆ

Suddi Udaya

ಅರಸಿನಮಕ್ಕಿ ಕಾಪು ಉಪ್ಪರಡ್ಕ ದೈವಸ್ಥಾನದಲ್ಲಿ ದೈವಗಳ ವಾರ್ಷಿಕ ಜಾತ್ರೆ

Suddi Udaya

ಉಜಿರೆ : ಎಸ್. ಡಿ. ಎಂ. ವಸತಿ ಪದವಿ ಪೂರ್ವ ಕಾಲೇಜಿನಲ್ಲಿ ಡಿಜಿಟಲ್ ಗ್ರಂಥಾಲಯಕ್ಕೆ ಚಾಲನೆ

Suddi Udaya
error: Content is protected !!