25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕರ್ನಾಟಕ ರಾಜ್ಯದ ವೃತ್ತಿಪರ ಸಿವಿಲ್ ಇಂಜಿನಿಯರುಗಳ ಪರಿಷತ್ತಿನ ಚೊಚ್ಚಲ ಸಮಿತಿಗೆ ಜಗದೀಶ ಪ್ರಸಾದ್ ಆಯ್ಕೆ

ಬೆಳ್ತಂಗಡಿ: ಕರ್ನಾಟಕ ರಾಜ್ಯದ ವೃತ್ತಿಪರ ಸಿವಿಲ್ ಎಂಜಿನಿಯರುಗಳ ಪರಿಷತ್ತಿನ ಚೊಚ್ಚಲ ಸಮಿತಿಗೆ ಅಸೋಸಿಯೇಟ್ ಕನ್ಸ್ಲಟಿಂಗ್ ಸಿವಿಲ್ ಇಂಜಿನಿಯರ್ ಬೆಳ್ತಂಗಡಿ ತಾಲೂಕು ಸೆಂಟರ್ ಪ್ರಸ್ತುತ ಅಧ್ಯಕ್ಷ, ಸ್ಥಾಪಕಾದ್ಯಕ್ಷ ಇಂಜಿನಿಯರ್ ಜಗದೀಶ ಪ್ರಸಾದ್ ರವರು ರಾಜ್ಯ ಮಟ್ಟದ ಅತ್ಯುನ್ನತ ಸ್ಥಾನಮಾನವನ್ನು ಪಡೆದಿದ್ದಾರೆ.

ಕರ್ನಾಟಕ ವೃತ್ತಿ ಪರ ಸಿವಿಲ್ ಇಂಜಿನೀಯರುಗಳ ಪರಿಷತ್ತು ಇನ್ನು ಮುಂದೆ ಕಾರ್ಯಾಚರಣೆ ಮಾಡಲಿದ್ದು, ಇದರ ಕೇಂದ್ರ ಕಚೇರಿ ಬೆಂಗಳೂರಿನಲ್ಲಿ ಕಾರ್ಯನಿರ್ವಹಿಸುತ್ತಿದೆ. ಈ ಪರಿಷತ್ತು 18 ಸದಸ್ಯರ ಸಮಿತಿ ಹೊಂದಿದ್ದು, ಇದರಲ್ಲಿ 8 ಜನ ಸರಕಾರದಿಂದ ಆಯ್ದ ಸಿವಿಲ್ ಎಂಜಿನಿಯರ್ ಕ್ಷೇತ್ರದಿಂದ ನಾಮನಿರ್ದೇಶನ ಆಗಲಿದ್ದಾರೆ. ಉಳಿದ 10 ಜನ ಸದಸ್ಯರು ವೃತ್ತಿ ನಿರತ ಸಿವಿಲ್ ಎಂಜಿನಿಯರ್ ಗಳು ಆಯ್ಕೆ ಆಗಲಿದ್ದಾರೆ. ಇದರಲ್ಲಿ 4 ಜನ ಬೆಂಗಳೂರು ಕೇಂದ್ರದಿಂದ, ಉಳಿದ 6 ಜನ ಕಲಬುರ್ಗಿ, ಬೆಳಗಾವಿ ಮತ್ತು ಮಂಗಳೂರು ಕೇಂದ್ರದಿಂದ ತಲಾ 2 ಜನ ಆಯ್ಕೆ ಆಗಲಿದ್ದಾರೆ. ಅಧಿಕಾರದ ಅವಧಿ ಮೂರು ವರ್ಷ ಇರಲಿದೆ.

ಚೊಚ್ಚಲ ಕರ್ನಾಟಕ ವೃತ್ತಿ ಪರ ಸಿವಿಲ್ ಇಂಜಿನಿಯರುಗಳ ಪರಿಷತ್ತು ನಲ್ಲಿ ಮಂಗಳೂರು ವಿಭಾಗದಿಂದ ಇಂಜಿನಿಯರ್ ಜಗದೀಶ್ ಪ್ರಸಾದ್ ಇವರು ಸರ್ವಾನುಮತದಿಂದ ಆಯ್ಕೆ ಆಗಿದ್ದಾರೆ.

ಇವರು ವೃತ್ತಿಯಲ್ಲಿ ಸಿವಿಲ್ ಇಂಜಿನಿಯರ್, ನ್ಯಾಷನಲ್ ಬ್ಯಾಂಕ್ ಗಳ ವ್ಯಾಲ್ಯೂವರ್ ಆದರೂ ಕೃಷಿ ಕ್ಷೇತ್ರದಲ್ಲಿ ತನ್ನ ಛಾಪನ್ನು ಮೂಡಿಸಿರುವ, ಹಲವು ಸಮಾಜ ಮುಖಿ ಕಾರ್ಯಗಳಲ್ಲಿ ತನ್ನನ್ನು ತಾನು ತೊಡಗಿಸಿಕೊಂಡಿದ್ದಾರೆ .

Related posts

ವಿಧಾನಸಭೆಯ ಕಲಾಪದಲ್ಲಿ ದ.ಕ. ಜಿಲ್ಲೆಯ ಸಮಸ್ಯೆಗಳ ಬಗ್ಗೆ ಮತ್ತು ಅಭಿವೃದ್ಧಿಯ ಬೇಡಿಕೆಗಳನ್ನು ಪ್ರಸ್ತಾಪಿಸಿದ ಶಾಸಕ ಹರೀಶ್ ಪೂಂಜ

Suddi Udaya

ಶ್ರೀ ಕೃಷ್ಣ ಜನ್ಮಾಷ್ಟಮಿಯ ಪ್ರಯುಕ್ತ ಆದೂರು ಪೇರಲ್ ನ ಶ್ರೀ ಕೃಷ್ಣ ಭಜನಾ ಮಂದಿರದಲ್ಲಿ ದೇವರಿಗೆ ವಿಶೇಷ ಭಜನಾ ಕಾರ್ಯಕ್ರಮ

Suddi Udaya

ಸುಳ್ಯ ಶಾಸಕಿಯ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ಪೋಸ್ಟ್ : ಬೆಳ್ತಂಗಡಿ ಠಾಣೆಯಲ್ಲಿ ಬಿಜೆಪಿ ಎಸ್ಸಿ ಮೋರ್ಚಾದಿಂದ ದೂರು ದಾಖಲು

Suddi Udaya

ಶಿರ್ತಾಡಿ: ಸಾಯಿ ಎಂಟರ್ಪ್ರೈಸಸ್ ನಲ್ಲಿ 4 ನೇ ಹಂತದ ಲಕ್ಕಿ ಸ್ಕೀಮ್: 15 ಸದಸ್ಯರನ್ನು ಸೇರಿಸಿದ ಸದಸ್ಯರಿಗೆ ಸ್ಕೀಮ್ ಕಾರ್ಡ್ ಉಚಿತ

Suddi Udaya

ತಾಲೂಕು ಮಟ್ಟದ ಕರಾಟೆ ಪಂದ್ಯಾಟ : ಗುಡ್ ಫ್ಯೂಚರ್ ಚೈಲ್ಡ್ ಆಂ.ಮಾ. ಶಾಲೆಯ ವಿದ್ಯಾರ್ಥಿ ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ದ.ಕ. ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ: ಧರ್ಮಸ್ಥಳದಲ್ಲಿ ಆಮಂತ್ರಣ ಪತ್ರ ಬಿಡುಗಡೆ

Suddi Udaya
error: Content is protected !!