July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕೇಲ್ತಾಜೆ ಸಿರಾಜುಲ್ ಹುದಾ ಮದರಸ ಮತ್ತು ಜುಮಾ ಮಸ್ಜಿದ್ ಇದರ ಅಧ್ಯಕ್ಷರಾಗಿ ಕೆ ಹನೀಫ್ ಪುನರಾಯ್ಕೆ

ಬೆಳ್ತಂಗಡಿ: ಕೇಲ್ತಾಜೆ ಸಿರಾಜುಲ್ ಹುದಾ ಮದರಸ ಮತ್ತು ಜುಮಾ ಮಸ್ಜಿದ್ ಮಹಾಸಭೆಯಲ್ಲಿ 2024-25ನೇ ಸಾಲಿನ ಅಧ್ಯಕ್ಷರಾಗಿ ಕೆ ಹನೀಫ್, ಪ್ರಧಾನ ಕಾರ್ಯದರ್ಶಿಯಾಗಿ ಶರೀಫ್ ಸಖಾಫಿ ಕನ್ಯಾಡಿ, ಕೋಶಾಧಿಕಾರಿಯಾಗಿ ಅಬುಸಾಲಿ ಕೇಲ್ತಾಜೆ ಪುನರಾಯ್ಕೆಯಾದರು.

ಸಯ್ಯದ್ ಅಬೂಬಕ್ಕರ್ ಸಿದ್ದೀಕ್ ತಂಙಳ್ ಮುರ ತೀರ್ಥಹಳ್ಳಿ ಇವರು ಗೌರವಾಧ್ಯಕ್ಷ ಸ್ಥಾನವನ್ನು ವಹಿಸಿಕೊಂಡರು. ಉಪಾಧ್ಯಕ್ಷರಾಗಿ ಹಮೀದ್ ಕೆ.ಬಿ ಹಾಗೂ ಸದಸ್ಯರಾಗಿ ಅಬ್ದುಲ್ ಹಮೀದ್ ಟಿ, ಮಹಮ್ಮದ್ ಯು.ಕೆ, ಅಬೂಬಕ್ಕರ್ ಬಿ.ಎ, ಉಮರ್ ಫಾರೂಕ್ ಬಿ, ಮಹಮ್ಮದ್ ಪಾರ್ನಡ್ಕ, ಇಸುಬು ಬಿ.ಎ, ಅಶ್ರಫ್ ಪಾರ್ನಡ್ಕ, ಇವರನ್ನು ಮರು ಆಯ್ಕೆ ಮಾಡಲಾಯಿತು.

ಲೆಕ್ಕಪರಿಶೋದಕರಾಗಿ ಶಮೀಮ್ ಪಾರ್ನಡ್ಕ ಇವರನ್ನು ಮುಂದುವರೆಸಲಾಯಿತು. ಅಬುಸಾಲಿ ಝೈನಿ ದುಆ ನೆರವೇರಿಸಿದರು. ಕಾರ್ಯದರ್ಶಿ ಶರೀಫ್ ಸಖಾಫಿ ಸ್ವಾಗತಿಸಿ ವರದಿ ವಾಚಿಸಿದರು. ಹಮೀದ್ ಟಿ ಲೆಕ್ಕಪತ್ರ ಮಂಡಿಸಿದರು. ಇಸಾಕ್ ಮುಸ್ಲಿಯಾರ್ ಧನ್ಯವಾದವಿತ್ತರು.


Related posts

ಸ್ಟಾರ್ ವುಮನ್ ಪ್ರಶಸ್ತಿಗೆ ಬೆಳ್ತಂಗಡಿಯ ಫೌಝಿಯಾ ಆಯ್ಕೆ

Suddi Udaya

ಸ್ಪಂದನಾ ಸೇವಾ ಸಂಘದಿಂದ ವೈದ್ಯಕೀಯ ನೆರವು

Suddi Udaya

ತೆಕ್ಕಾರು ಶ್ರೀ ಗೋಪಾಲಕೃಷ್ಣ ದೇವಸ್ಥಾನದ ಬ್ರಹ್ಮಕಲಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಗ್ರಾಮೀಣ ಸರಕಾರಿ ಪ್ರೌಢಶಾಲೆಯಲ್ಲಿ ಹೀಗೊಂದು ವಿನೂತನ ಶೌಚಾಲಯ

Suddi Udaya

ಬೆಳ್ತಂಗಡಿ ಧರ್ಮ ಪ್ರಾಂತ್ಯ ರಜತ ಸಂಭ್ರಮ: ಸಂಸದ ನಳಿನ್ ಕುಮಾರ್ ಕಟೀಲ್ ಗೆ ಆಮಂತ್ರಣ

Suddi Udaya

ಮುಂಬೈ, ಗೋವಾ, ಮಹಾರಾಷ್ಟ ನಬಾರ್ಡ್ ಬ್ಯಾಂಕ್ ಅಧಿಕಾರಿಯವರಿಂದ ಸಿಡ್ಬಿ ಸಾಲ ಪಡೆದು ಸ್ವ ಉದ್ಯೋಗ ನಡೆಸುತ್ತಿರುವ ಘಟಕಕ್ಕೆ ಭೇಟಿ

Suddi Udaya
error: Content is protected !!