25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬೆಳ್ತಂಗಡಿ ಮೆಟ್ರಿಕ್ ನಂತರದ ಬಾಲಕರ ವಸತಿ ನಿಲಯಕ್ಕೆ ಲೋಕಾಯುಕ್ತ ಅಧಿಕಾರಿಗಳ ಭೇಟಿ: ವಿವಿಧ ವಿಭಾಗಗಳ ಪರಿಶೀಲನೆ

ಬೆಳ್ತಂಗಡಿ : ಬೆಳ್ತಂಗಡಿ ಪದವಿಪೂರ್ವ ಕಾಲೇಜು ಬಳಿ ಇರುವ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವ್ಯಾಪ್ತಿಗೆ ಒಳಪಟ್ಟ ಡಿ. ದೇವರಾಜ ಅರಸು ಹಿಂದುಳಿದ ವರ್ಗಗಳ ಮೆಟ್ರಿಕ್ ನಂತರದ ಬಾಲಕರ ವಸತಿನಿಲಯಕ್ಕೆ ಲೋಕಾಯುಕ್ತ ಅಧಿಕಾರಿಗಳು ಬುಧವಾರ(ಜೂ12) ಭೇಟಿ ನೀಡಿ ವಸತಿ ನಿಲಯದ ವಿವಿಧ ವಿಭಾಗಗಳನ್ನು ಪರಿಶೀಲನೆ ನಡೆಸಿ, ಮಕ್ಕಳಿಗೆ ಮೂಲ ಭೂತ ಸೌಕರ್ಯಗಳನ್ನು ಒದಗಿಸಲಾಗಿದೆಯೇ ಎಂದು ವಿಚಾರಣೆ ನಡೆಸಿ, ಸೂಕ್ತ ಮಾರ್ಗದರ್ಶನ ನೀಡಿದರು.


ಕುಡಿಯುವ ನೀರು, ಅಡುಗೆಕೋಣೆ, ವಿಶ್ರಾಂತಿ ಕೊಠಡಿ, ಶೌಚಾಲಯ ವ್ಯವಸ್ಥೆಗಳ ಪರಿಶಿಲನೆ ಮಾಡಿದ ಅಧಿಕಾರಿಗಳು ವಸತಿನಿಲಯದ ಮೆಲ್ವಿಚಾರಕರಿಂದ ಮಾಹಿತಿ ಪಡೆದರು. ಅಡುಗೆ ಕೋಣೆ ಪರಿಶೀಲಿಸಿದ ಅಧಿಕಾರಿಗಳು ಆಹಾರ ದಾಸ್ತಾನು ಡಬ್ವಗಳ ಪರಿಶೀಲನೆ ಮಾಡಿದರು. ಮಳೆಗಾಲದಲ್ಲಿ ಮಕ್ಕಳಿಗೆ ಬಿಸಿ ನೀರು ಕೊಡಬೇಕು, ಸಣ್ಣ ಪುಟ್ಟ ಅನಾರೋಗ್ಯ ಕಂಡು ಬಂದರೆ ತಕ್ಷಣ ಸ್ಥಳೀಯ ಆರೋಗ್ಯ ಕೇಂದ್ರಕ್ಕೆ ಕರೆದುಕೊಂಡು ಹೊಗುವಂತೆ ಸೂಚಿಸಿದರು. ಈ ಬಗ್ಗೆ ನಿರ್ಲಕ್ಷ್ಯ ಕಂಡುಬಂದರೆ ಲೋಕಾಯುಕ್ತ ಸಂಬಂಧ ಪಟ್ಟ ಅಧಿಕಾರಿಗಳ ಮೇಲೆ ಕ್ರಮಕೈಗೊಳ್ಳುವ ಎಚ್ಚರಿಕೆ ನೀಡಿದರು.


ವಿದ್ಯಾರ್ಥಿಗಳಲ್ಲಿ ಮಾಹಿತಿ ಸಂಗ್ರಹಿಸಿದ ಅಧಿಕಾರಿಗಳು ಆಹಾರ ವ್ಯವಸ್ಥೆ, ಇನ್ನಿತರ ಸೌಲಭ್ಯಗಳ ಬಗ್ಗೆ ಮಾಹಿತಿ ಪಡೆದರು. ಉತ್ತಮ ಶಿಕ್ಷಣ ಪಡೆದು ಸಮಾಜದಲ್ಲಿ ಉತ್ತಮ ವ್ಯಕ್ತಿಗಳಾಗಬೇಕು, ವಸತಿ ನಿಲಯದಲ್ಲಿ ಸಮಸ್ಯೆ ಬಂದರೆ ಲೋಕಾಯುಕ್ತಕ್ಕೆ ದೂರು ನೀಡಲು ತಿಳಿಸಿದರು. ವಸತಿನಿಲಯದ ವಿದ್ಯಾರ್ಥಿಗಳು 100% ಫಲಿತಾಂಶ ಪಡೆದ ಬಗ್ಗೆ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಜೋಸೆಫ್ ಮಾಹಿತಿ ನೀಡಿದರು. ಇದಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ ಅಧಿಕಾರಿಗಳು ಸ್ಥಳೀಯ ಸಂಘ ಸಂಸ್ಥೆಗಳ ಸಂಪರ್ಕ ಪಡೆದು ಇಂತಹ ವಿದ್ಯಾರ್ಥಿಗಳಿಗೆ, ವಸತಿನಿಲಯದ ಸಿಬ್ಬಂದಿಗಳನ್ನು ಗುರುತಿಸಬೇಕು ಎಂದು ಸೂಚಿಸಿದರು.


ಲೋಕಾಯುಕ್ತ ಎಸ್ ಪಿ ನಟರಾಜ್ ಮಾರ್ಗದರ್ಶನದಲ್ಲಿ ಇನ್ಪೆಕ್ಟರುಗಳಾದ ಚಂದ್ರಶೇಖರ ಸಿ ಎಲ್, ಚಂದ್ರಶೇಖರ ಕೆ ಎನ್, ಅಮಾನುಲ್ಲಾ, ಸಿಬ್ಬಂದಿಗಳಾದ ವಿನಾಯಕ್, ಮಹೇಶ್, ಪಾಪಣ್ಣ ಭೇಟಿ ನೀಡಿ ಪರಿಶೀಲನೆ ನಡೆಸಿದರು.

Related posts

ರಾಜ್ಯ ಸರಕಾರ ಗ್ಯಾರಂಟಿ ಯೋಜನೆಗಳಿಗೆ ಹಣಕ್ಕಾಗಿ ಮದ್ಯ ಮಾರಾಟದ ಹಾದಿ ಹಿಡಿದಿರುವುದು ಅತ್ಯಂತ ವಿಷಾಧನೀಯ: ಪ್ರತಾಪಸಿಂಹ ನಾಯಕ್

Suddi Udaya

ಶಿಶಿಲ ಗ್ರಾ.ಪಂ. ನಲ್ಲಿ ನೋಂದಾಯಿತ ಕಟ್ಟಡ ಮತ್ತು ನಿರ್ಮಾಣ ಕಾರ್ಮಿಕರಿಗೆ ಹಾಗೂ ಅವಲಂಬಿತರಿಗೆ ಆರೋಗ್ಯ ತಪಾಸಣಾ ಶಿಬಿರ

Suddi Udaya

ಧರ್ಮಸ್ಥಳ: ಶಾಂತಿವನದಲ್ಲಿ 79ನೇ ಸ್ವಾತಂತ್ರ‍್ಯೋತ್ಸವದ ಭಾವೈಕ್ಯ ಉತ್ಸವ

Suddi Udaya

ಮಡಂತ್ಯಾರು : ಸೇಕ್ರೆಡ್ ಹಾರ್ಟ್ ಕಾಲೇಜಿನ ಸಹಪ್ರಾಧ್ಯಾಪಕ ಈಶ್ವರ ಗೌಡ ಪಿ. ಅವರಿಗೆ ಪಿ. ಎಚ್.ಡಿ ಪದವಿ ಪ್ರದಾನ

Suddi Udaya

ಮಾಲಾಡಿ ಗ್ರಾ.ಪಂ. ನಲ್ಲಿ ಮಹಿಳಾ ದಿನಾಚರಣೆ ಮತ್ತು ಗ್ಯಾರಂಟಿ ಯೋಜನೆಗಳ ಅರಿವು ಕಾರ್ಯಕ್ರಮ

Suddi Udaya

ಭೀಕರ ರಸ್ತೆ ಅಪಘಾತ; ಓರ್ವ ಯುವತಿಗೆ ಗಂಭೀರ ಗಾಯ

Suddi Udaya
error: Content is protected !!