23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬೆಳ್ತಂಗಡಿ ಮೆಟ್ರಿಕ್ ನಂತರದ ಬಾಲಕರ ವಸತಿ ನಿಲಯಕ್ಕೆ ಲೋಕಾಯುಕ್ತ ಅಧಿಕಾರಿಗಳ ಭೇಟಿ: ವಿವಿಧ ವಿಭಾಗಗಳ ಪರಿಶೀಲನೆ

ಬೆಳ್ತಂಗಡಿ : ಬೆಳ್ತಂಗಡಿ ಪದವಿಪೂರ್ವ ಕಾಲೇಜು ಬಳಿ ಇರುವ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವ್ಯಾಪ್ತಿಗೆ ಒಳಪಟ್ಟ ಡಿ. ದೇವರಾಜ ಅರಸು ಹಿಂದುಳಿದ ವರ್ಗಗಳ ಮೆಟ್ರಿಕ್ ನಂತರದ ಬಾಲಕರ ವಸತಿನಿಲಯಕ್ಕೆ ಲೋಕಾಯುಕ್ತ ಅಧಿಕಾರಿಗಳು ಬುಧವಾರ(ಜೂ12) ಭೇಟಿ ನೀಡಿ ವಸತಿ ನಿಲಯದ ವಿವಿಧ ವಿಭಾಗಗಳನ್ನು ಪರಿಶೀಲನೆ ನಡೆಸಿ, ಮಕ್ಕಳಿಗೆ ಮೂಲ ಭೂತ ಸೌಕರ್ಯಗಳನ್ನು ಒದಗಿಸಲಾಗಿದೆಯೇ ಎಂದು ವಿಚಾರಣೆ ನಡೆಸಿ, ಸೂಕ್ತ ಮಾರ್ಗದರ್ಶನ ನೀಡಿದರು.


ಕುಡಿಯುವ ನೀರು, ಅಡುಗೆಕೋಣೆ, ವಿಶ್ರಾಂತಿ ಕೊಠಡಿ, ಶೌಚಾಲಯ ವ್ಯವಸ್ಥೆಗಳ ಪರಿಶಿಲನೆ ಮಾಡಿದ ಅಧಿಕಾರಿಗಳು ವಸತಿನಿಲಯದ ಮೆಲ್ವಿಚಾರಕರಿಂದ ಮಾಹಿತಿ ಪಡೆದರು. ಅಡುಗೆ ಕೋಣೆ ಪರಿಶೀಲಿಸಿದ ಅಧಿಕಾರಿಗಳು ಆಹಾರ ದಾಸ್ತಾನು ಡಬ್ವಗಳ ಪರಿಶೀಲನೆ ಮಾಡಿದರು. ಮಳೆಗಾಲದಲ್ಲಿ ಮಕ್ಕಳಿಗೆ ಬಿಸಿ ನೀರು ಕೊಡಬೇಕು, ಸಣ್ಣ ಪುಟ್ಟ ಅನಾರೋಗ್ಯ ಕಂಡು ಬಂದರೆ ತಕ್ಷಣ ಸ್ಥಳೀಯ ಆರೋಗ್ಯ ಕೇಂದ್ರಕ್ಕೆ ಕರೆದುಕೊಂಡು ಹೊಗುವಂತೆ ಸೂಚಿಸಿದರು. ಈ ಬಗ್ಗೆ ನಿರ್ಲಕ್ಷ್ಯ ಕಂಡುಬಂದರೆ ಲೋಕಾಯುಕ್ತ ಸಂಬಂಧ ಪಟ್ಟ ಅಧಿಕಾರಿಗಳ ಮೇಲೆ ಕ್ರಮಕೈಗೊಳ್ಳುವ ಎಚ್ಚರಿಕೆ ನೀಡಿದರು.


ವಿದ್ಯಾರ್ಥಿಗಳಲ್ಲಿ ಮಾಹಿತಿ ಸಂಗ್ರಹಿಸಿದ ಅಧಿಕಾರಿಗಳು ಆಹಾರ ವ್ಯವಸ್ಥೆ, ಇನ್ನಿತರ ಸೌಲಭ್ಯಗಳ ಬಗ್ಗೆ ಮಾಹಿತಿ ಪಡೆದರು. ಉತ್ತಮ ಶಿಕ್ಷಣ ಪಡೆದು ಸಮಾಜದಲ್ಲಿ ಉತ್ತಮ ವ್ಯಕ್ತಿಗಳಾಗಬೇಕು, ವಸತಿ ನಿಲಯದಲ್ಲಿ ಸಮಸ್ಯೆ ಬಂದರೆ ಲೋಕಾಯುಕ್ತಕ್ಕೆ ದೂರು ನೀಡಲು ತಿಳಿಸಿದರು. ವಸತಿನಿಲಯದ ವಿದ್ಯಾರ್ಥಿಗಳು 100% ಫಲಿತಾಂಶ ಪಡೆದ ಬಗ್ಗೆ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಜೋಸೆಫ್ ಮಾಹಿತಿ ನೀಡಿದರು. ಇದಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ ಅಧಿಕಾರಿಗಳು ಸ್ಥಳೀಯ ಸಂಘ ಸಂಸ್ಥೆಗಳ ಸಂಪರ್ಕ ಪಡೆದು ಇಂತಹ ವಿದ್ಯಾರ್ಥಿಗಳಿಗೆ, ವಸತಿನಿಲಯದ ಸಿಬ್ಬಂದಿಗಳನ್ನು ಗುರುತಿಸಬೇಕು ಎಂದು ಸೂಚಿಸಿದರು.


ಲೋಕಾಯುಕ್ತ ಎಸ್ ಪಿ ನಟರಾಜ್ ಮಾರ್ಗದರ್ಶನದಲ್ಲಿ ಇನ್ಪೆಕ್ಟರುಗಳಾದ ಚಂದ್ರಶೇಖರ ಸಿ ಎಲ್, ಚಂದ್ರಶೇಖರ ಕೆ ಎನ್, ಅಮಾನುಲ್ಲಾ, ಸಿಬ್ಬಂದಿಗಳಾದ ವಿನಾಯಕ್, ಮಹೇಶ್, ಪಾಪಣ್ಣ ಭೇಟಿ ನೀಡಿ ಪರಿಶೀಲನೆ ನಡೆಸಿದರು.

Related posts

ಆಮಂತ್ರಣ ಪರಿವಾರದ ರಾಯಭಾರಿ ವಿಜಯ ಕುಮಾರ್ ಜೈನ್ ಅಳದಂಗಡಿ ರವರಿಗೆ ಪುತ್ತೂರು ಪ್ರತಿಭಾ ಸಾಂಸ್ಕೃತಿಕ ಉತ್ಸವದಲ್ಲಿ ಸನ್ಮಾನ

Suddi Udaya

ಸುಲ್ಕೇರಿ ಗ್ರಾಮ ಪಂಚಾಯತ್ ನ ಪ್ರಥಮ ಸುತ್ತಿನ ಗ್ರಾಮಸಭೆ

Suddi Udaya

ಬೆಳ್ತಂಗಡಿ: ಗೋ ಸಂರಕ್ಷಣಾ ತಿದ್ದುಪಡಿ ವಿಧೇಯಕದ ವಿರುದ್ಧ ವಿ.ಹಿಂ.ಪ ಪ್ರತಿಭಟನೆ

Suddi Udaya

ಗುರುವಾಯನಕೆರೆ: ವಿದ್ವತ್ ಪ.ಪೂ. ಕಾಲೇಜಿನಲ್ಲಿ ಚಾರ್ಟರ್ಡ್ ಅಕೌಂಟೆಂಟ್ಸ್ ಡೇ ಆಚರಣೆ

Suddi Udaya

ಮಚ್ಚಿನ: ಅಂಗನವಾಡಿ ಶಾಲಾ ಮಕ್ಕಳಿಗೆ ಭಜನೆ ಪುಸ್ತಕ ವಿತರಣೆ

Suddi Udaya

ಅಳದಂಗಡಿ ಪ್ರಾ.ಕೃ.ಪ.ಸ. ಸಂಘದ ಸಿಬ್ಬಂದಿ ಪ್ರಿಯಾ ಡಿಸೋಜಾರಿಗೆ ಬಿಳ್ಕೋಡುಗೆ ಸಮಾರಂಭ

Suddi Udaya
error: Content is protected !!