32.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ಲಯನ್ಸ್ ಕ್ಲಬ್‌ನಿಂದ ಡಾ.ಡಿ. ವೀರೇಂದ್ರ ಹೆಗ್ಗಡೆಯವರ ಭೇಟಿ

ಬೆಳ್ತಂಗಡಿ : ಧರ್ಮಸ್ಥಳದಲ್ಲಿ ಲಯನ್ಸ್ ಕ್ಲಬ್ ನಿಂದ ಧರ್ಮಾಧಿಕಾರಿ ಡಾ. ಡಿ ವೀರೇಂದ್ರ ಹೆಗ್ಗಡೆಯವರನ್ನು ಜೂ.9 ರಂದು ಭೇಟಿ ಮಾಡಿ 50 ಸಂವತ್ಸರಗಳನ್ನು ಪೂರೈಸಿದ ಲಯನ್ಸ್ ಕ್ಲಬ್ ಬೆಳ್ತಂಗಡಿಯ ಸಾರ್ಥಕ ಸೇವೆಯ ಸವಿನೆನಪಿಗಾಗಿ ಜೂ.23ರಂದು ನಡೆಯಲಿರುವ ” ಸುವರ್ಣ ಸಂಭ್ರಮ” ದಿನಾಚರಣೆಗೆ ಆಹ್ವಾನ ನೀಡಿ ನಂತರ ರೂ.1 ಕೋಟಿ ವೆಚ್ಚದಲ್ಲಿ ನಿರ್ಮಾಣಗೊಳ್ಳಲಿರುವ ನೂತನ ಸಭಾಂಗಣಕ್ಕೆ ದೇಣಿಗೆಗಾಗಿ ಮನವಿ ಪತ್ರ ಸಲ್ಲಿಸಲಾಯಿತು.

ಈ ವೇಳೆ ಜು.13ರಂದು ನಡೆಯಲಿರುವ 2024-25ನೇ ಸಾಲಿನ ನೂತನ ಸಾರಥಿ ಲಯನ್ ದೇವದಾಸ್ ಶೆಟ್ಟಿ ಮತ್ತು ತಂಡದ ಪದಗ್ರಹಣ ಸಮಾರಂಭದ ಆಮಂತ್ರಣ ಪತ್ರಿಕೆಯನ್ನು ಬಿಡುಗಡೆಗೊಳಿಸಿ ಶುಭ ಹಾರೈಸಿದರು. ನಂತರ ಹೆಗ್ಗಡೆಯವರು ಲಯನ್ಸ್ ಭವನದ ಉದ್ಘಾಟನೆಗೆ ಬರುವ ಭರವಸೆ ಮತ್ತು ಅನುದಾನ ನೀಡುವುದಾಗಿ ಭರವಸೆ ನೀಡಿದರು.

ಈ ಸಂದರ್ಭದಲ್ಲಿ ಲಯನ್ಸ್ ಕ್ಲಬ್ ಅಧ್ಯಕ್ಷ ಉಮೇಶ್ ಶೆಟ್ಟಿ, ಕಾರ್ಯದರ್ಶಿ ಅನಂತ ಕೃಷ್ಣ, ಕೋಶಾಧಿಕಾರಿ ದತ್ತಾತ್ರೇಯ ಗೊಲ್ಲ, ಸ್ಥಾಪಕ ಅಧ್ಯಕ್ಷ ಎಂ.ಜಿ ಶೆಟ್ಟಿ, ವಿ.ಆರ್ ನಾಯಕ್, ಮಾಜಿ ಅಧ್ಯಕ್ಷ ವಸಂತ್ ಶೆಟ್ಟಿ, ಧರಣೇಂದ್ರ ಜೈನ್, ರವೀಂದ್ರ ಶೆಟ್ಟಿ, ಪ್ರಕಾಶ್ ಶೆಟ್ಟಿ ನೊಚ್ಚ, ನಿತ್ಯಾನಂದ ನಾವರ, ಜಯರಾಮ್ ಭಂಡಾರಿ, ಹೇಮಂತ್ ರಾವ್, ಜಯಂತ ಶೆಟ್ಟಿ, ರಾಜು ಶೆಟ್ಟಿ, ದೇವಿಪ್ರಸಾದ್ ಬೋಲ್ಮ, ನಿಯೋಜಿತ ಅಧ್ಯಕ್ಷ ದೇವದಾಸ್ ಶೆಟ್ಟಿ, ಕಾರ್ಯದರ್ಶಿ ಕಿರಣ್ ಕುಮಾರ್ ಶೆಟ್ಟಿ, ಸದಸ್ಯರಾದ ಕೃಷ್ಣಾಚಾರ್, ನ್ಯಾಣಪ್ಪ, ಲಿವೋ ಕಾರ್ಯದರ್ಶಿ ನಿರೀಕ್ಷಾ ಉಪಸ್ಥಿತರಿದ್ದರು.

Related posts

ನ.16-17: ಎಕ್ಸೆಲ್ ಕಾಲೇಜಿನಲ್ಲಿ ಎಕ್ಸೆಲ್ ಪರ್ಬ, ಸಾಂಸ್ಕೃತಿಕ ವೈವಿಧ್ಯ

Suddi Udaya

ಉಜಿರೆಯಲ್ಲಿ ರಾಮೋತ್ಸವ ಕಾರ್ಯಕ್ರಮ ಹಿನ್ನಲೆ ಕಾರ್ಯಕ್ರಮಕ್ಕೆ ಬರುತ್ತಿದ್ದ ಪುನೀತ್ ಕೆರೆಹಳ್ಳಿಯನ್ನು ತಡೆದು ಹಿಂದಕ್ಕೆ ಕಳುಹಿಸಿದ ಪೊಲೀಸರು

Suddi Udaya

ನಾರಾವಿ ಸೊಸೈಟಿಯ ಆರ್ಥಿಕ ಸಹಕಾರದಿಂದ ರಿಕ್ಷಾ ನಿಲ್ದಾಣ ನಿರ್ಮಾಣ: ಅಧ್ಯಕ್ಷ ಸುಧಾಕರ ಭಂಡಾರಿಯವರಿಂದ ಉದ್ಘಾಟನೆ, ಸಂಭ್ರಮದ ವಾಹನ ಪೂಜೆ

Suddi Udaya

ಅಂಡೆತಡ್ಕ : ಕರಾಯ ಕ್ಲಸ್ಟರ್ ಮಟ್ಟದ ಪ್ರಾಥಮಿಕ ಶಾಲಾ ಪ್ರತಿಭಾ ಕಾರಂಜಿ ಸ್ಪರ್ಧೆ

Suddi Udaya

ಚಾರ್ಮಾಡಿ ಘಾಟಿಯಲ್ಲಿ ಕೆ.ಎಸ್.ಆರ್.ಟಿ.ಸಿ ಬಸ್ಸಿಗೆ ಅಡ್ಡ ಬಂದ ಒಂಟಿ ಸಲಗ

Suddi Udaya

ವೈಟ್ ಲಿಫ್ಟಿಂಗ್ ನಲ್ಲಿ ಪ್ರತ್ಯೂಷ್ ರವರ ಸಾಧನೆ: ಬರೆಂಗಾಯ ನಿಸರ್ಗ ಯುವಜನೇತರ ಮಂಡಲ ವತಿಯಿಂದ ಅಭಿನಂದನೆ

Suddi Udaya
error: Content is protected !!