September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ರೋಟರಿ ಕ್ಲಬ್ ಮಡಂತ್ಯಾರ್ ಗೆ ಪ್ರತಿಷ್ಠಿತ ಪ್ಲಾಟಿನಂ ಕ್ಲಬ್ ಪ್ರಶಸ್ತಿ

ಮಡಂತ್ಯಾರು :- ದ. ಕ ಜಿಲ್ಲೆಯ ಪ್ರತಿಷ್ಠಿತ ರೋಟರಿ ಕ್ಲಬ್ ಗಳಲ್ಲಿ ಒಂದಾದ ರೋಟರಿ ಕ್ಲಬ್ ಮಡಂತ್ಯಾರ್ ಗೆ ಇತ್ತೀಚಿಗೆ ಮೈಸೂರು ನಲ್ಲಿ ನಡೆದ ಸಮ್ಮೇಳನದಲ್ಲಿ ಅಂತರಾಷ್ಟ್ರೀಯ ಪ್ಲಾಟಿನಂ ಕ್ಲಬ್ ಪ್ರಶಸ್ತಿ ನೀಡಿ ಗೌರವಿಸಲಾಯಿತು.

ಪ್ರಸಕ್ತ ಸಾಲಿನಲ್ಲಿ ಮಡಂತ್ಯಾರ್ ಕ್ಲಬ್ ಜಿಲ್ಲೆಯಲ್ಲೇ ಮಾದರಿ ಕಾರ್ಯಕ್ರಮಗಳಾದ ನಮ್ಮ ನಡೆ ಆರ್ಥಿಕ ಸಾಕ್ಷಾರತೆಯ ಕಡೆಗೆ ಹಾಗೂ ಇತರ 180 ಕ್ಕೂ ಅಧಿಕ ಸಾರ್ವಜನಿಕರಿಗೆ ಬಹುಉಪಯೋಗವಾಗುವಂತಹ ಅನೇಕ ಕಾರ್ಯಕ್ರಮಗಳನ್ನು ಆಯೋಜಿಸಿತ್ತು. ಇದರಿಂದಾಗಿ ಕ್ಲಬ್ ನ ಇತಿಹಾಸದಲ್ಲಿ ಪ್ರಥಮ ಬಾರಿಗೆ ಪ್ಲಾಟಿನಂ ಪ್ರಶಸ್ತಿ ಬಂದಿರುತ್ತದೆ.

ಪ್ರಸಕ್ತ ಸಾಲಿನ ಕ್ಲಬ್ ನ ಸೇವಾಚಟುವಟಿಕೆಗಳನ್ನು ಆಧಾರಿಸಿ ಕೊಡಮಾಡುವ ಅತ್ಯುನ್ನತ ಗೌರವಕ್ಕೆ ಪಾತ್ರರಾದ ಕ್ಲಬ್ ನ ಪರವಾಗಿ ಕ್ಲಬ್ ನ ಅಧ್ಯಕ್ಷ ಪೇಜಾವರ ಶ್ರೀಧರ ರಾವ್ ಇವರು ಜಿಲ್ಲಾ ಗೌವರ್ನರ್ ಹೆಚ್. ಆರ್.ಕೇಶವ ರವರಿಂದ ಗೌರವವನ್ನು ಸ್ವೀಕರಿಸಿದರು.

ಕ್ಲಬ್ ನ ಸಹಕಾರ್ಯದರ್ಶಿಯವರಾದ ಆದಿತ್ಯ ಎಸ್ ರಾವ್ ಮತ್ತು ಇತರ ಸದಸ್ಯರು ಹಾಜರಿದ್ದರು.

Related posts

ಶಿಶಿಲ : 9 ವರ್ಷದ ಬಾಲಕ ಅಶ್ವಿನ್ ನಿಧನ

Suddi Udaya

ಗುರುವಾಯನಕೆರೆ : ಜ್ಞಾನ ವಿಕಾಸ ಕಾರ್ಯಕ್ರಮದಡಿಯಲ್ಲಿ ಹೊಲಿಗೆ ತರಬೇತಿಯ ಸಮಾರೋಪ ಸಮಾರಂಭ

Suddi Udaya

ಧರ್ಮಸ್ಥಳ: ಅಖಿಲ ಕರ್ನಾಟಕ ಜೈನ ಮಹಿಳಾ ಒಕ್ಕೂಟದ ಬೆಳ್ಳಿಹಬ್ಬ ಸಂಭ್ರಮ: ರಜತ ಸಂಚಿಕೆ ಲೋಕಾರ್ಪಣೆ – ಸಾಧಕರಿಗೆ ಸನ್ಮಾನ

Suddi Udaya

ಅ.28: ಕುತ್ಲೂರು ಹಾಲು ಉತ್ಪಾದಕರ ಸಹಕಾರ ಸಂಘದ ವತಿಯಿಂದ ಸಮಗ್ರ ರಕ್ಷಣಾ ಯೋಜನೆ ಅಪಘಾತ ವಿಮಾ ಮೇಳ’

Suddi Udaya

ಸೆ.7: ಪ್ರವಾದಿ ಮುಹಮ್ಮದ್ ಸೀರತ್ ಅಭಿಯಾನದ ಪ್ರಯುಕ್ತ ಧಾರ್ಮಿಕ ಸೌಹಾರ್ದ ಕಾರ್ಯಕ್ರಮ: ಸವಾಲುಗಳು ಮತ್ತು ಅವಕಾಶಗಳು ಎಂಬ ವಿಷಯದಡಿ ಸಾರ್ವಜನಿಕ ಸಮಾವೇಶ

Suddi Udaya

ಬೆಳ್ತಂಗಡಿ ತಾಲೂಕು ಬಿಎಂಎಸ್ ರಿಕ್ಷಾ ಚಾಲಕರ ಸಂಘದ ಮಹಾಸಭೆ

Suddi Udaya
error: Content is protected !!