23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ರೋಟರಿ ಕ್ಲಬ್ ಮಡಂತ್ಯಾರ್ ಗೆ ಪ್ರತಿಷ್ಠಿತ ಪ್ಲಾಟಿನಂ ಕ್ಲಬ್ ಪ್ರಶಸ್ತಿ

ಮಡಂತ್ಯಾರು :- ದ. ಕ ಜಿಲ್ಲೆಯ ಪ್ರತಿಷ್ಠಿತ ರೋಟರಿ ಕ್ಲಬ್ ಗಳಲ್ಲಿ ಒಂದಾದ ರೋಟರಿ ಕ್ಲಬ್ ಮಡಂತ್ಯಾರ್ ಗೆ ಇತ್ತೀಚಿಗೆ ಮೈಸೂರು ನಲ್ಲಿ ನಡೆದ ಸಮ್ಮೇಳನದಲ್ಲಿ ಅಂತರಾಷ್ಟ್ರೀಯ ಪ್ಲಾಟಿನಂ ಕ್ಲಬ್ ಪ್ರಶಸ್ತಿ ನೀಡಿ ಗೌರವಿಸಲಾಯಿತು.

ಪ್ರಸಕ್ತ ಸಾಲಿನಲ್ಲಿ ಮಡಂತ್ಯಾರ್ ಕ್ಲಬ್ ಜಿಲ್ಲೆಯಲ್ಲೇ ಮಾದರಿ ಕಾರ್ಯಕ್ರಮಗಳಾದ ನಮ್ಮ ನಡೆ ಆರ್ಥಿಕ ಸಾಕ್ಷಾರತೆಯ ಕಡೆಗೆ ಹಾಗೂ ಇತರ 180 ಕ್ಕೂ ಅಧಿಕ ಸಾರ್ವಜನಿಕರಿಗೆ ಬಹುಉಪಯೋಗವಾಗುವಂತಹ ಅನೇಕ ಕಾರ್ಯಕ್ರಮಗಳನ್ನು ಆಯೋಜಿಸಿತ್ತು. ಇದರಿಂದಾಗಿ ಕ್ಲಬ್ ನ ಇತಿಹಾಸದಲ್ಲಿ ಪ್ರಥಮ ಬಾರಿಗೆ ಪ್ಲಾಟಿನಂ ಪ್ರಶಸ್ತಿ ಬಂದಿರುತ್ತದೆ.

ಪ್ರಸಕ್ತ ಸಾಲಿನ ಕ್ಲಬ್ ನ ಸೇವಾಚಟುವಟಿಕೆಗಳನ್ನು ಆಧಾರಿಸಿ ಕೊಡಮಾಡುವ ಅತ್ಯುನ್ನತ ಗೌರವಕ್ಕೆ ಪಾತ್ರರಾದ ಕ್ಲಬ್ ನ ಪರವಾಗಿ ಕ್ಲಬ್ ನ ಅಧ್ಯಕ್ಷ ಪೇಜಾವರ ಶ್ರೀಧರ ರಾವ್ ಇವರು ಜಿಲ್ಲಾ ಗೌವರ್ನರ್ ಹೆಚ್. ಆರ್.ಕೇಶವ ರವರಿಂದ ಗೌರವವನ್ನು ಸ್ವೀಕರಿಸಿದರು.

ಕ್ಲಬ್ ನ ಸಹಕಾರ್ಯದರ್ಶಿಯವರಾದ ಆದಿತ್ಯ ಎಸ್ ರಾವ್ ಮತ್ತು ಇತರ ಸದಸ್ಯರು ಹಾಜರಿದ್ದರು.

Related posts

ಬಂದಾರು :ಪೆರ್ಲ -ಬೈಪಾಡಿ ನಿವಾಸಿ ನಾರಾಯಣ ಪೂಜಾರಿ ನಿಧನ

Suddi Udaya

ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ಪರಿಶಿಷ್ಟ ಜಾತಿ ನಗರ ಮತ್ತು ಗ್ರಾಮೀಣ ಘಟಕದ ಪದಾಧಿಕಾರಿಗಳ ಸಭೆ

Suddi Udaya

ಅಯೋಧ್ಯೆಯಲ್ಲಿ ಶ್ರೀರಾಮ ಪ್ರಾಣ ಪ್ರತಿಷ್ಠೆ: ಗುರುವಾಯನಕೆರೆ ಎರ್ಡೂರು ಬಳಿ ‘ಶ್ರೀರಾಮನಗರ’ ನಾಮಫಲಕ ಅನಾವರಣ

Suddi Udaya

ರಾಜ್ಯಮಟ್ಟದ ಮುಕ್ತ ಕರಾಟೆ ಚಾಂಪಿಯನ್ಶಿಪ್ ಸ್ಪರ್ಧೆ: ಶಿಹಾನ್ ಅಬ್ದುಲ್ ರೆಹಮಾನ್ ರವರ ನೇತೃತ್ವದ ಉಜಿರೆ ಹಾಗೂ ಬೆಳ್ತಂಗಡಿ ಕರಾಟೆ ತರಬೇತಿ ಕೇಂದ್ರದ ಮಕ್ಕಳಿಗೆ ಹಲವು ಪ್ರಶಸ್ತಿ

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರಕ್ಕೆ ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡ ಭೇಟಿ

Suddi Udaya

10 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಂಧಿಸಿದ ವೇಣೂರು ಪೊಲೀಸರು

Suddi Udaya
error: Content is protected !!