25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಸರಳಿಕಟ್ಟೆ ಪ್ರೌಢಶಾಲೆಯಲ್ಲಿ ಯುವ ಸಂಸತ್ತು ಚುನಾವಣೆ


ಬಾರ್ಯ: ಸರಳಿಕಟ್ಟೆಯ ಸರಕಾರಿ ಪ್ರೌಢಶಾಲೆಯಲ್ಲಿ 2024-25ನೇ ಸಾಲಿಗೆ ಪ್ರಜಾಪ್ರಭುತ್ವ ಮಾದರಿಯಲ್ಲಿ ಯುವ ಸಂಸತ್ತಿಗೆ ಶಾಲಾ ನಾಯಕ ಹಾಗೂ ಶಾಲಾ ಉಪನಾಯಕನ ಆಯ್ಕೆ ನಡೆಸಲಾಯಿತು. ಮೊಬೈಲ್ ಇ.ವಿ.ಎಂ. ಆಪ್ ಬಳಸಿ ಮತ ಚಲಾಯಿಸುವ ವಿಧಾನದ ಬಗ್ಗೆ ವಿವರಿಸಿ ನಂತರ ವಿದ್ಯಾರ್ಥಿಗಳಿಗೆ ಮತದಾನದ ಅವಕಾಶ ನೀಡಲಾಯಿತು.


ಶಾಲಾ ನಾಯಕನಾಗಿ 10ನೇ ತರಗತಿಯ ಇಸ್ಮಾಯಿಲ್ ರಂಶಿದ್, ಉಪನಾಯಕನಾಗಿ 9ನೇ ತರಗತಿಯ ಮುಹಮ್ಮದ್ ಅಶ್ವರ್ ಆಯ್ಕೆಯಾದರು. ವಿರೋಧ ಪಕ್ಷದ ನಾಯಕನಾಗಿ 10ನೇ ತರಗತಿಯ ಮಹಮ್ಮದ್ ಅಜ್ಮಲ್ ವಿರೋಧ ಪಕ್ಷದ ಉಪನಾಯಕಿಯಾಗಿ 9ನೇ ತರಗತಿಯ ಫಾತಿಮತ್ ಅಫ್ರ ಆಯ್ಕೆಯಾದರು.

ಚುನಾವಣಾ ಸಾಕ್ಷರತಾ ಕ್ಲಬ್ ನ ಸಂಚಾಲಕರಾದ ವಿಜಯಶ್ರೀ ಯವರು ಚುನಾವಣಾ ಪ್ರಕ್ರಿಯೆಯನ್ನು ನಡೆಸಿಕೊಟ್ಟರು. ಮುಖ್ಯೋಪಾಧ್ಯಾಯರಾದ ಹರಿಕಿರಣ್ ಕೆ ಇವರ ಮಾರ್ಗದರ್ಶನದಲ್ಲಿ ಸಹಶಿಕ್ಷಕರಾದ ಮಹಮ್ಮದ್ ಹನೀಫ್, ನಳಿನಾಕ್ಷಿ, ವಿಜಯಶ್ರೀ, ಸಪ್ನಾರಾವ್, ಶಾಂತಾ, ಗಂಗವ್ವ, ರಾಜೇಸಾಬ್ ಹೊಸಕೇರಿ ಹಾಗೂ ತಾರಾ ಚುನಾವಣಾ ಪ್ರಕ್ರಿಯೆ ನಡೆಸಲು ಸಹಕರಿಸಿದರು.

Related posts

ಕೊಕ್ಕಡ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ: ಸಾಧಕರಿಗೆ ಸನ್ಮಾನ

Suddi Udaya

ಉಜಿರೆ: ಕೆಲಸಕ್ಕೆಂದು ಹೋದ ಯುವತಿ ವಾಪಸ್ಸು ಮನೆಗೆ ಬಾರದೆ ನಾಪತ್ತೆ

Suddi Udaya

ಬೆಳ್ತಂಗಡಿಯಲ್ಲಿ ‘ಮಾದಕ ವಸ್ತು ತಡೆ ಜಾಗೃತಿ ಬೃಹತ್ ಕಾಲ್ನಡಿಗೆ ಜಾಥಾ’

Suddi Udaya

ಬೆಳ್ತಂಗಡಿ : ಪಿ. ಡೀಕಯ್ಯ ಚಳುವಳಿಯ ಹೆಜ್ಜೆ ಗುರುತುಗಳು-ಒಂದು ಸ್ಮರಣೆ’ ಕಾರ್ಯಕ್ರಮ

Suddi Udaya

ಕಲ್ಮಂಜ ಸ.ಹಿ.ಪ್ರಾ. ಶಾಲೆಯ ಶತಮಾನೋತ್ಸವ ವರ್ಷದ ಕಾರ್ಯಕ್ರಮಗಳ ಉದ್ಘಾಟನೆ ಹಾಗೂ ಮನವಿ ಪತ್ರಗಳ ಬಿಡುಗಡೆ

Suddi Udaya

ಕಳಿಯ ಗ್ರಾ.ಪಂ. ಆಡಳಿತ ಮಂಡಳಿಯಿಂದ ಜಿಲ್ಲಾಧಿಕಾರಿ ಭೇಟಿ, ಪಂಚಾಯತ್ ವ್ಯಾಪ್ತಿಯಲ್ಲಿ ಜಾಗ ಗುರುತಿಸುವಿಕೆಗಾಗಿ ಮನವಿ ಸಲ್ಲಿಕೆ

Suddi Udaya
error: Content is protected !!