September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕಣಿಯೂರು ವಲಯದ ನೂತನ ಒಕ್ಕೂಟದ ಪದಾಧಿಕಾರಿಗಳ ತರಬೇತಿ ಕಾರ್ಯಾಗಾರ

ಕಣಿಯೂರು : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಗುರುವಾಯನಕೆರೆ ಯೋಜನಾ ಕಚೇರಿ ವ್ಯಾಪ್ತಿಯ ಕಣಿಯೂರು ವಲಯದ ಒಕ್ಕೂಟದ ಪದಾಧಿಕಾರಿಗಳ ತರಬೇತಿ ಕಾರ್ಯಾಗಾರವನ್ನು ಕೊರಿಂಜ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ಸಭಾಭವನದಲ್ಲಿ ಆಯೋಜಿಸಲಾಗಿತ್ತು.


ತರಬೇತಿಯ ಉದ್ಘಾಟನೆಯನ್ನು ಜಿಲ್ಲಾ ನಿರ್ದೇಶಕ ಮಹಾಬಲ ಉದ್ಘಾಟಿಸಿ ಮಾತನಾಡುತ್ತಾ ಒಕ್ಕೂಟದ ಪದಾಧಿಕಾರಿಗಳು ತಮಗೆ ನೀಡಲಾದ ಜವಾಬ್ದಾರಿ ಗುಂಪುಗಳ ಪರಿಚಯ ಮಾಡಿಕೊಳ್ಳಬೇಕು. ಗುಂಪುಗಳ ನಿರ್ವಹಣೆಯಲ್ಲಿರುವ ಲೋಪಗಳನ್ನು ಗುರುತಿಸಿ ಅವುಗಳನ್ನು ಕಾರ್ಯಕರ್ತರ ಸಹಕಾರದ ಮೂಲಕ ಸರಿಪಡಿಸಬೇಕು.
ಒಕ್ಕೂಟದ ಮಾಸಿಕ ಸಭೆಗಳಿಗೆ ಗುಂಪಿನ ಸದಸ್ಯರು ಸಾಲದ ಬೇಡಿಕೆ ಗಳನ್ನು ಸಲ್ಲಿಸಬೇಕು ಒಕ್ಕೂಟ ಸಭೆ ಆದ ಬಳಿಕ ಉಪಸಮಿತಿ ಸಭೆಯನ್ನು ನಡೆಸಿ ಗುಂಪಿನ ಗುಣಮಟ್ಟ ಸದಸ್ಯರ ಮರು ಪಾವತಿ ಸಾಮರ್ಥ್ಯ ಪರಿಗಣಿಸಿ ಸಮರ್ಪಕ ವಾಗೀ ಚರ್ಚಿಸಿ ಸಾಲ ಬಿಡುಗಡೆಗೆ ಶಿಫಾರಸ್ಸು ಮಾಡಬೇಕು ಎಂದರು.


ಒಕ್ಕೂಟದ ವಾರ್ಷಿಕ ಬಜೆಟ್ ತಯಾರು ಮಾಡಿ ಅನುಷ್ಟಾನ ಮಾಡಬೇಕು ಇವುಗಳಲ್ಲಿ ಮುಖ್ಯವಾಗಿ ಶಾಲಾ ಕೈ ತೋಟ, ಸ್ವಚ್ಛತಾ ಕಾರ್ಯಕ್ರಮ, ಪರಿಸರ ಕಾರ್ಯಕ್ರಮ, ಹೊಸ ಗುಂಪು ರಚನೆ, ಶ್ರಮದಾನ, ಕೃಷಿ ತರಬೇತಿ, ಅಧ್ಯಯನ ಪ್ರವಾಸ, ಗಿಡಗಳ ನಾಟಿ, ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜಾ ಕಾರ್ಯಕ್ರಮ, ನೀರಾವರಿ ಸೌಲಭ್ಯ, ಸಮುದಾಯ ಅಭಿವೃದ್ಧಿ ಕಾರ್ಯಗಳು ಮೊದಲಾದವುಗಳನ್ನು ಪರಿಗಣಿಸಬೇಕು ಎಂದು ವಿವರಿಸಿದರು.


ಉಡುಪಿ ಪ್ರಾದೇಶಿಕ ವಿಭಾಗದ ಕಚೇರಿ ತಪಾಸಣಾ ವಿಭಾಗದ ಯೋಜನಾಧಿಕಾರಿ ಅಮರ್ ಪ್ರಸಾದ್, ಸಮನ್ವಯಧಿಕಾರಿ ಶ್ರೀಮತಿ ಹೇಮಲತಾ, ರುಡ್ ಸೆಟ್ ಸಂಸ್ಥೆಯ ಉಷಾ ಸಮಾಜ್ ತರಬೇತಿಯನ್ನು ನಡೆಸಿಕೊಟ್ಟರು.
ತಾಲೂಕ್ ಯೋಜನಾಧಿಕಾರಿ ದಯಾನಂದ ಪೂಜಾರಿ, ವಲಯ ಮೇಲ್ವಿಚಾರಕರಾದ ಶಿವಾನಂದ, ಸೇವಾ ಪ್ರತಿನಿಧಿಗಳು ಭಾಗವಹಿಸಿದ್ದರು.


ವಲಯದ ಎಲ್ಲಾ ಒಕ್ಕೂಟದ ಪದಾಧಿಕಾರಿಗಳು ತರಬೇತಿಯಲ್ಲಿ ಭಾಗವಹಿಸಿದರು

Related posts

ಅಗ್ರಿಲೀಫ್ ಎಕ್ಸ್ ಪೋರ್ಟ್ ಪ್ರೈವೇಟ್ ಲಿಮಿಟೆಡ್ ಇದರ ವಿಸ್ತ್ರತ ಘಟಕ “ಅಗ್ರಿಲೀಫ್ 2.0” ಉದ್ಘಾಟನೆ

Suddi Udaya

ಕಕ್ಯಪದವು ಎಲ್.ಸಿ.ಆರ್ ಪ.ಪೂ. ಕಾಲೇಜು: ವಾಣಿಜ್ಯ ವಿಭಾಗದಲ್ಲಿ 100% ಫಲಿತಾಂಶ

Suddi Udaya

ಶಿರ್ಲಾಲು ಕೃಷಿಕ ಶಿವಪ್ಪ ಪೂಜಾರಿ ನಿಧನ

Suddi Udaya

ಶ್ರೀ ನಾಳ ಕ್ಷೇತ್ರದಲ್ಲಿ ನವರಾತ್ರಿ ಉತ್ಸವದ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಚಾಲನೆ

Suddi Udaya

ಬಳ್ಳಮಂಜ ವಿದ್ಯಾಸಾಗರ ಸಿ.ಬಿ.ಎಸ್ಇ ಶಾಲೆಯಲ್ಲಿ ಯೋಗ ದಿನಾಚರಣೆ

Suddi Udaya

ದ.ಕ. ಜಿಲ್ಲಾ 28ನೇ ಕನ್ನಡ ಸಾಹಿತ್ಯ ಸಮ್ಮೇಳನ: ಶಿಬಾಜೆಯ ಸಂಪ್ರೀತಾ ಎಸ್. ಶೆಟ್ಟಿಗಾರ್‌ ರವರ “ಅಂತರಾಳದ ಧ್ವನಿ” ಕವನ ಸಂಕಲನ ಬಿಡುಗಡೆ

Suddi Udaya
error: Content is protected !!