25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕಣಿಯೂರು ವಲಯದ ನೂತನ ಒಕ್ಕೂಟದ ಪದಾಧಿಕಾರಿಗಳ ತರಬೇತಿ ಕಾರ್ಯಾಗಾರ

ಕಣಿಯೂರು : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಗುರುವಾಯನಕೆರೆ ಯೋಜನಾ ಕಚೇರಿ ವ್ಯಾಪ್ತಿಯ ಕಣಿಯೂರು ವಲಯದ ಒಕ್ಕೂಟದ ಪದಾಧಿಕಾರಿಗಳ ತರಬೇತಿ ಕಾರ್ಯಾಗಾರವನ್ನು ಕೊರಿಂಜ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ಸಭಾಭವನದಲ್ಲಿ ಆಯೋಜಿಸಲಾಗಿತ್ತು.


ತರಬೇತಿಯ ಉದ್ಘಾಟನೆಯನ್ನು ಜಿಲ್ಲಾ ನಿರ್ದೇಶಕ ಮಹಾಬಲ ಉದ್ಘಾಟಿಸಿ ಮಾತನಾಡುತ್ತಾ ಒಕ್ಕೂಟದ ಪದಾಧಿಕಾರಿಗಳು ತಮಗೆ ನೀಡಲಾದ ಜವಾಬ್ದಾರಿ ಗುಂಪುಗಳ ಪರಿಚಯ ಮಾಡಿಕೊಳ್ಳಬೇಕು. ಗುಂಪುಗಳ ನಿರ್ವಹಣೆಯಲ್ಲಿರುವ ಲೋಪಗಳನ್ನು ಗುರುತಿಸಿ ಅವುಗಳನ್ನು ಕಾರ್ಯಕರ್ತರ ಸಹಕಾರದ ಮೂಲಕ ಸರಿಪಡಿಸಬೇಕು.
ಒಕ್ಕೂಟದ ಮಾಸಿಕ ಸಭೆಗಳಿಗೆ ಗುಂಪಿನ ಸದಸ್ಯರು ಸಾಲದ ಬೇಡಿಕೆ ಗಳನ್ನು ಸಲ್ಲಿಸಬೇಕು ಒಕ್ಕೂಟ ಸಭೆ ಆದ ಬಳಿಕ ಉಪಸಮಿತಿ ಸಭೆಯನ್ನು ನಡೆಸಿ ಗುಂಪಿನ ಗುಣಮಟ್ಟ ಸದಸ್ಯರ ಮರು ಪಾವತಿ ಸಾಮರ್ಥ್ಯ ಪರಿಗಣಿಸಿ ಸಮರ್ಪಕ ವಾಗೀ ಚರ್ಚಿಸಿ ಸಾಲ ಬಿಡುಗಡೆಗೆ ಶಿಫಾರಸ್ಸು ಮಾಡಬೇಕು ಎಂದರು.


ಒಕ್ಕೂಟದ ವಾರ್ಷಿಕ ಬಜೆಟ್ ತಯಾರು ಮಾಡಿ ಅನುಷ್ಟಾನ ಮಾಡಬೇಕು ಇವುಗಳಲ್ಲಿ ಮುಖ್ಯವಾಗಿ ಶಾಲಾ ಕೈ ತೋಟ, ಸ್ವಚ್ಛತಾ ಕಾರ್ಯಕ್ರಮ, ಪರಿಸರ ಕಾರ್ಯಕ್ರಮ, ಹೊಸ ಗುಂಪು ರಚನೆ, ಶ್ರಮದಾನ, ಕೃಷಿ ತರಬೇತಿ, ಅಧ್ಯಯನ ಪ್ರವಾಸ, ಗಿಡಗಳ ನಾಟಿ, ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜಾ ಕಾರ್ಯಕ್ರಮ, ನೀರಾವರಿ ಸೌಲಭ್ಯ, ಸಮುದಾಯ ಅಭಿವೃದ್ಧಿ ಕಾರ್ಯಗಳು ಮೊದಲಾದವುಗಳನ್ನು ಪರಿಗಣಿಸಬೇಕು ಎಂದು ವಿವರಿಸಿದರು.


ಉಡುಪಿ ಪ್ರಾದೇಶಿಕ ವಿಭಾಗದ ಕಚೇರಿ ತಪಾಸಣಾ ವಿಭಾಗದ ಯೋಜನಾಧಿಕಾರಿ ಅಮರ್ ಪ್ರಸಾದ್, ಸಮನ್ವಯಧಿಕಾರಿ ಶ್ರೀಮತಿ ಹೇಮಲತಾ, ರುಡ್ ಸೆಟ್ ಸಂಸ್ಥೆಯ ಉಷಾ ಸಮಾಜ್ ತರಬೇತಿಯನ್ನು ನಡೆಸಿಕೊಟ್ಟರು.
ತಾಲೂಕ್ ಯೋಜನಾಧಿಕಾರಿ ದಯಾನಂದ ಪೂಜಾರಿ, ವಲಯ ಮೇಲ್ವಿಚಾರಕರಾದ ಶಿವಾನಂದ, ಸೇವಾ ಪ್ರತಿನಿಧಿಗಳು ಭಾಗವಹಿಸಿದ್ದರು.


ವಲಯದ ಎಲ್ಲಾ ಒಕ್ಕೂಟದ ಪದಾಧಿಕಾರಿಗಳು ತರಬೇತಿಯಲ್ಲಿ ಭಾಗವಹಿಸಿದರು

Related posts

ಶಿಶಿಲ: ದೇನೋಡಿ ನಿವಾಸಿ ನಾಣ್ಯಪ್ಪ ಪೂಜಾರಿ ನಿಧನ

Suddi Udaya

ನಾಳ ವರ್ಷವಧಿ ಜಾತ್ರಾ ಮಹೋತ್ಸವ ಲೆಕ್ಕಪತ್ರ ಮಂಡನೆ, ಅಭಿನಂದನೆ ಹಾಗೂ ಅಧಿಕಾರ ಹಸ್ತಾಂತರ

Suddi Udaya

ನೆರಿಯದಲ್ಲಿ ಅಟಲ್ ವಿರಾಸತ್ ಜನ್ಮ ಶತಾಬ್ದಿ ಪ್ರಯುಕ್ತ ಕಿರಣ್ ಚಂದ್ರ ಡಿ. ಪುಷ್ಪಗಿರಿಯವರಿಂದ ಕಿಟ್ ವಿತರಣೆ

Suddi Udaya

ಸುಲ್ಕೇರಿಮೊಗ್ರು ಕಂಬಳದಡ್ಡ ನಿವಾಸಿ ಅಣ್ಣಿ ಮಡಿವಾಳ ನಿಧನ

Suddi Udaya

ಉಜಿರೆಯಲ್ಲಿ ರೈತ ತರಬೇತಿ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ರಿಕ್ಷಾ ಚಾಲಕ ಮಾಲಕರ ಸಂಘದ ಕ್ಷೇಮನಿಧಿ ಯೋಜನೆಯ ಸಹಾಯಧನ ಹಸ್ತಾಂತರ

Suddi Udaya
error: Content is protected !!