July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳಾಲು: ಕೊಲ್ಪಾಡಿ ಶಾಲೆಯಲ್ಲಿ ಶಾಲಾ ಸಂಸತ್ ಚುನಾವಣೆ: ಇವಿಎಂ ಮಾದರಿ ಆ್ಯಪ್ ಬಳಸಿ ಮತ ಚಲಾವಣೆ

ಬೆಳಾಲು: ಇಲ್ಲಿನ ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಕೊಲ್ಪಾಡಿಯಲ್ಲಿ,ವಿದ್ಯಾರ್ಥಿಗಳಿಗೆ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಚುನಾವಣಾ ಪ್ರಕ್ರಿಯೆಯ ಬಗ್ಗೆ ಅರಿವು ಮೂಡಿಸುವ ಬಗ್ಗೆ ಮತ್ತು ನಾಯಕತ್ವ ಗುಣಗಳನ್ನು ಬೆಳಸುವ ಹಿನ್ನೆಲೆಯಲ್ಲಿ ಶಾಲಾ ಸಂಸತ್ ಚುನಾವಣೆಯನ್ನು ಇವಿಎಂ ಬಳಸಿ ಮಾಡಲಾಯಿತು.

ಚುನಾವಣಾ ಅಧಿಸೂಚನೆ,ನಾಮಪತ್ರ ಸಲ್ಲಿಕೆ,ಪರಿಶೀಲನೆ, ಚಿಹ್ನೆ ಗಳ ವಿತರಣೆ, ಚುನಾವಣಾ ಪ್ರಚಾರ ಪ್ರಕ್ರಿಯೆಗಳು ನಡೆದು,ಚುನಾವಣೆಯ ದಿನ ವಿದ್ಯಾರ್ಥಿಗಳು ಸರತಿ ಸಾಲಿನಲ್ಲಿ ಶಿಸ್ತಿನಿಂದ ಬಂದು,ತಮ್ಮ ಗುರುತು ಪತ್ರ ತೋರಿಸಿ ಮತ ಚಲಾಯಿಸಿದರು.


ಸಾರ್ವತ್ರಿಕ ಚುನಾವಣೆಗಳಲ್ಲಿ ಬಳಸುವ ಇವಿಎಂ ಮಾದರಿಯ ಮೊಬೈಲ್ ಆ್ಯಪ್ ಮೂಲಕ ವಿದ್ಯಾರ್ಥಿಗಳು ಮತ ಚಲಾಯಿಸಿ ಸಂಭ್ರಮ ಪಟ್ಟರು. ಮತ ಚಲಾಯಿಸಿದ ವಿದ್ಯಾರ್ಥಿಗಳ ಬೆರಳಿಗೆ ಇಂಕ್ ಗುರುತು ಹಾಕಲಾಯಿತು. ಮತ ಎಣಿಕೆಯನ್ನು ಸಹ ಕ್ರಮಬದ್ಧವಾಗಿ ನಡೆಸಲಾಯಿತು.


ಶಾಲಾ ವಿದ್ಯಾರ್ಥಿ ನಾಯಕನಾಗಿ ಮನ್ವಿತ್ ಎಂ.ಎಸ್,ಉಪನಾಯಕನಾಗಿ ಚಿರಾಗ್ ಆಯ್ಕೆಯಾದರು. ಶಿಕ್ಷಣ ಮಂತ್ರಿಯಾಗಿ ಆಧ್ಯಾ,ಆರೋಗ್ಯ ಮಂತ್ರಿಯಾಗಿ ಪ್ರೀತೇಶ್, ಆಹಾರ ಮತ್ತು ಗ್ರಂಥಾಲಯ ಮಂತ್ರಿಯಾಗಿ ಅದ್ವಿತ್,ಕ್ರೀಡಾ ಮಂತ್ರಿಯಾಗಿ ಪ್ರಣಮ್ಯ,ನೀರಾವರಿ ಮಂತ್ರಿಯಾಗಿ ವೀಕ್ಷಿತಾ, ವಾರ್ತಾ ಮಂತ್ರಿಯಾಗಿ ಶ್ರೇಯಾ,ಸ್ವಚ್ಚತಾ ಮಂತ್ರಿಯಾಗಿ ತೃಷಾ,ತೋಟಗಾರಿಕೆ ಮಂತ್ರಿಯಾಗಿ ಆದಿತ್ಯ ಹಾಗೂ ವಿರೋಧ ಪಕ್ಷದ ನಾಯಕರಾಗಿ ತನ್ವಿ ಮತ್ತು ಶ್ರಾವಣಿ ಆಯ್ಕೆಯಾದರು.
ಶಾಲಾ ಮುಖ್ಯೋಪಾಧ್ಯಾಯರಾದ ಸುರೇಶ್ ಎಂ.ರ ಮಾರ್ಗದರ್ಶನದಲ್ಲಿ ನಡೆದ ಚುನಾವಣಾ ಪ್ರಕ್ರಿಯೆಯಲ್ಲಿ ಶಿಕ್ಷಕರಾದ ಹರಿಣಾಕ್ಷಿ ಎನ್, ಕರಿಯಣ್ಣ ಗೌಡ ಸಹಕರಿಸಿದರು.

Related posts

ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಯೋಜನೆ ವಿರುದ್ದದ ಪ್ರಕರಣ ಹೈಕೋರ್ಟ್‌ನಲ್ಲಿ ವಜಾ

Suddi Udaya

ಟುನಿಷಿಯ ಅಂತರಾಷ್ಟ್ರೀಯ ವಿಜ್ಞಾನ ಮೇಳ: ಆಪ್ತಚಂದ್ರಮತಿ ಮುಳಿಯರವರಿಗೆ ಗ್ಯಾಂಡ್ ಗೋಲ್ಡ್ ಮೆಡಲ್

Suddi Udaya

ಉಜಿರೆ ಎಸ್.ಡಿ.ಎಂ ಆಂ.ಮಾ. ಶಾಲೆಯಲ್ಲಿ ಜಾಗೃತಿ ಕಾರ್ಯಕ್ರಮ

Suddi Udaya

ಸಿಇಟಿ ಯಲ್ಲಿ ಎಕ್ಸೆಲ್ ವಿದ್ಯಾರ್ಥಿಗಳ ಅಮೋಘ ಸಾಧನೆ, ಜೆಇಇ, ಎನ್ ಡಿ ಎ, ನಾಟಾ ಸೇರಿ ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿಯೂ ಅತ್ಯುತ್ತಮ ಸಾಧನೆ

Suddi Udaya

ವೇಣೂರು: ಮೂಡುಕೋಡಿ ನಿವಾಸಿ ಪಿ. ಎಸ್. ಅಬ್ದುಲ್ ರಹಿಮಾನ್ ನಿಧನ

Suddi Udaya

ಲಾಯಿಲ ಕುಂಟಿನಿಯಿಂದ ನಡ, ಪುತ್ರಬೈಲು ಮೂಲಕ ಬೆಳ್ತಂಗಡಿ ಮತ್ತು ಕಿಲ್ಲೂರಿಗೆ ಸಂಪರ್ಕಿಸುವ ಕಿರಿದಾದ ಮಣ್ಣಿನ ಮತ್ತು ಕಾಂಕ್ರಿಟ್ ರಸ್ತೆ : ಭಾರೀ ಮಳೆಗೆ ರಸ್ತೆಯ ಎರಡು ಬದಿಗಳಲ್ಲಿ ಮಣ್ಣು ಕುಸಿದು ಅಪಾಯವನ್ನು ಆಹ್ವಾನಿಸುವ ಮುನ್ಸೂಚನೆ

Suddi Udaya
error: Content is protected !!