ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳಾಲು: ಕೊಲ್ಪಾಡಿ ಶಾಲೆಯಲ್ಲಿ ಶಾಲಾ ಸಂಸತ್ ಚುನಾವಣೆ: ಇವಿಎಂ ಮಾದರಿ ಆ್ಯಪ್ ಬಳಸಿ ಮತ ಚಲಾವಣೆ

ಬೆಳಾಲು: ಇಲ್ಲಿನ ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಕೊಲ್ಪಾಡಿಯಲ್ಲಿ,ವಿದ್ಯಾರ್ಥಿಗಳಿಗೆ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಚುನಾವಣಾ ಪ್ರಕ್ರಿಯೆಯ ಬಗ್ಗೆ ಅರಿವು ಮೂಡಿಸುವ ಬಗ್ಗೆ ಮತ್ತು ನಾಯಕತ್ವ ಗುಣಗಳನ್ನು ಬೆಳಸುವ ಹಿನ್ನೆಲೆಯಲ್ಲಿ ಶಾಲಾ ಸಂಸತ್ ಚುನಾವಣೆಯನ್ನು ಇವಿಎಂ ಬಳಸಿ ಮಾಡಲಾಯಿತು.

ಚುನಾವಣಾ ಅಧಿಸೂಚನೆ,ನಾಮಪತ್ರ ಸಲ್ಲಿಕೆ,ಪರಿಶೀಲನೆ, ಚಿಹ್ನೆ ಗಳ ವಿತರಣೆ, ಚುನಾವಣಾ ಪ್ರಚಾರ ಪ್ರಕ್ರಿಯೆಗಳು ನಡೆದು,ಚುನಾವಣೆಯ ದಿನ ವಿದ್ಯಾರ್ಥಿಗಳು ಸರತಿ ಸಾಲಿನಲ್ಲಿ ಶಿಸ್ತಿನಿಂದ ಬಂದು,ತಮ್ಮ ಗುರುತು ಪತ್ರ ತೋರಿಸಿ ಮತ ಚಲಾಯಿಸಿದರು.


ಸಾರ್ವತ್ರಿಕ ಚುನಾವಣೆಗಳಲ್ಲಿ ಬಳಸುವ ಇವಿಎಂ ಮಾದರಿಯ ಮೊಬೈಲ್ ಆ್ಯಪ್ ಮೂಲಕ ವಿದ್ಯಾರ್ಥಿಗಳು ಮತ ಚಲಾಯಿಸಿ ಸಂಭ್ರಮ ಪಟ್ಟರು. ಮತ ಚಲಾಯಿಸಿದ ವಿದ್ಯಾರ್ಥಿಗಳ ಬೆರಳಿಗೆ ಇಂಕ್ ಗುರುತು ಹಾಕಲಾಯಿತು. ಮತ ಎಣಿಕೆಯನ್ನು ಸಹ ಕ್ರಮಬದ್ಧವಾಗಿ ನಡೆಸಲಾಯಿತು.


ಶಾಲಾ ವಿದ್ಯಾರ್ಥಿ ನಾಯಕನಾಗಿ ಮನ್ವಿತ್ ಎಂ.ಎಸ್,ಉಪನಾಯಕನಾಗಿ ಚಿರಾಗ್ ಆಯ್ಕೆಯಾದರು. ಶಿಕ್ಷಣ ಮಂತ್ರಿಯಾಗಿ ಆಧ್ಯಾ,ಆರೋಗ್ಯ ಮಂತ್ರಿಯಾಗಿ ಪ್ರೀತೇಶ್, ಆಹಾರ ಮತ್ತು ಗ್ರಂಥಾಲಯ ಮಂತ್ರಿಯಾಗಿ ಅದ್ವಿತ್,ಕ್ರೀಡಾ ಮಂತ್ರಿಯಾಗಿ ಪ್ರಣಮ್ಯ,ನೀರಾವರಿ ಮಂತ್ರಿಯಾಗಿ ವೀಕ್ಷಿತಾ, ವಾರ್ತಾ ಮಂತ್ರಿಯಾಗಿ ಶ್ರೇಯಾ,ಸ್ವಚ್ಚತಾ ಮಂತ್ರಿಯಾಗಿ ತೃಷಾ,ತೋಟಗಾರಿಕೆ ಮಂತ್ರಿಯಾಗಿ ಆದಿತ್ಯ ಹಾಗೂ ವಿರೋಧ ಪಕ್ಷದ ನಾಯಕರಾಗಿ ತನ್ವಿ ಮತ್ತು ಶ್ರಾವಣಿ ಆಯ್ಕೆಯಾದರು.
ಶಾಲಾ ಮುಖ್ಯೋಪಾಧ್ಯಾಯರಾದ ಸುರೇಶ್ ಎಂ.ರ ಮಾರ್ಗದರ್ಶನದಲ್ಲಿ ನಡೆದ ಚುನಾವಣಾ ಪ್ರಕ್ರಿಯೆಯಲ್ಲಿ ಶಿಕ್ಷಕರಾದ ಹರಿಣಾಕ್ಷಿ ಎನ್, ಕರಿಯಣ್ಣ ಗೌಡ ಸಹಕರಿಸಿದರು.

Related posts

ಗುರುವಾಯನಕೆರೆ-ಉಜಿರೆ ನ್ಯೂ ಸಿಟಿ ಎಲೆಕ್ಟ್ರಾನಿಕ್ಸ್‌ನಲ್ಲಿ ದೀಪಾವಳಿ ಪ್ರಯುಕ್ತ ಶೇ.40 ರಷ್ಟು ಡಿಸ್ಕೌಂಟ್ ಸೇಲ್

Suddi Udaya

ಜೂ.14: ಅಳದಂಗಡಿಯಲ್ಲಿ 24ನೇ ವರ್ಷದ ಉಚಿತ ಪುಸ್ತಕ ವಿತರಣೆ, ಪ್ರತಿಭಾ ಪುರಸ್ಕಾರ, ಸನ್ಮಾನ ಕಾರ್ಯಕ್ರಮ – ಕಂಪ್ಯೂಟರ್ ವಿತರಣೆ ಮತ್ತು ಆರೋಗ್ಯ ತಪಾಸಣೆ ಶಿಬಿರ

Suddi Udaya

ಧಾರ್ಮಿಕ ಮುಖಂಡ ಕಿರಣ್ ಚಂದ್ರ ಪುಷ್ಪಗಿರಿ ರವರ ಹುಟ್ಟುಹಬ್ಬದ ಪ್ರಯುಕ್ತ ಕುದ್ರಡ್ಕ ಶ್ರೀ ಮಹಾಗಣಪತಿ ಭಜನಾ ಮಂದಿರದಲ್ಲಿ ಭಜನೆ ಹಾಗೂ ಪೂಜಾ ಕಾರ್ಯಕ್ರಮ

Suddi Udaya

ತಾಲೂಕು ಮಟ್ಟದ ಕರಾಟೆ ಸ್ಪರ್ಧೆ: ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿನಿ ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ಧರ್ಮಸ್ಥಳ: 13ನೇ ಸ್ಥಳದಲ್ಲಿ ಜಿ.ಪಿ.ಆರ್ ಕಾರ್ಯಾಚರಣೆ: ಮಧ್ಯಾಹ್ನದ ಬಳಿಕ ಶವದ ಅವಶೇಷಕ್ಕಾಗಿ ಶೋಧ ಕಾರ್ಯಾಚರಣೆ

Suddi Udaya

ಪುತ್ತೂರಿನ ವಿವೇಕಾನಂದ ಪ.ಪೂ. ಕಾಲೇಜಿಗೆ ಅತ್ಯಧಿಕ ರ‍್ಯಾಂಕ್‌ಗಳು

Suddi Udaya
error: Content is protected !!