September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಶ್ರೀ ಕ್ಷೇತ್ರ ಧ.ಗ್ರಾ.ಯೋಜನೆಯ ವತಿಯಿಂದ ಔಟ್ ಸೈಡ್ ವಾಕರ್ ವಿತರಣೆ

ಧರ್ಮಸ್ಥಳ ಗ್ರಾಮದ ಮಲ್ಲರ್ ಮಾಡಿ ಮೋಹಿನಿ ಬೇಕಲ್ ರವರ ಮಗ, ಅನೂಪ್ ಕೃಷ್ಣ, ಇವರಿಗೆ ಧರ್ಮಸ್ಥಳ ಧರ್ಮಾಧಿಕಾರಿ ಡಾ, ಡಿ ವೀರೇಂದ್ರ ಹೆಗ್ಗಡೆಯವರು ಜನಮಂಗಳ ಕಾರ್ಯಕ್ರಮದಡಿಯಲ್ಲಿ ವಿಶೇಷವಾಗಿ ನೀಡಿರುವ ವಾಕರ್ ಅನ್ನು ಧರ್ಮಸ್ಥಳ ವಲಯದ ಮೇಲ್ವಿಚಾರಕರಾದ ರವೀಂದ್ರ ಅನೂಪ್ ಕೃಷ್ಣ ರವರ ಮನೆಯಲ್ಲಿ ವಿತರಿಸಿದರು.

ಇತ್ತೀಚೆಗೆ ಧ್ವಿಚಕ್ರ ವಾಹನದಲ್ಲಿ ನೇತ್ರಾವತಿ ಬಳಿ ಹೋಗುತ್ತಿರುವಾಗ ಅಪಘಾತ ಸಂಭವಿಸಿ ಬಲ ಕಾಲಿಗೆ ಬಲವಾದ ಪೆಟ್ಟು ಬಿದ್ದ ಕಾರಣ ತಕ್ಕ ಮಟ್ಟಿಗೆ ಸರಿಯಾಗಿ ನಡೆಯಲು ಆಗದ ಕಾರಣ ನಡೆದಾಡಲು ವಾಕರಿನ ಅವಶ್ಯಕತೆ ಇರುವುದರಿಂದ ಅವರ ಮನೆಗೆ ಭೇಟಿ ನೀಡಿ ವಿತರಿಸಿದರು.

ಈ ಸಂದರ್ಭದಲ್ಲಿ ಬೆಳ್ತಂಗಡಿ ತಾಲೂಕು ಶೌರ್ಯ ವಿಪತ್ತು ನಿರ್ವಹಣಾ ಘಟಕದ ಮಾಸ್ಟರ್ ಸ್ನೇಕ್ ಪ್ರಕಾಶ್, ಒಕ್ಕೂಟದ ಅಧ್ಯಕ್ಷ ಸುಲೈಮಾನ್, ಕಾರ್ಯದರ್ಶಿ ಯಮುನಾ, ಸೇವಾಪ್ರತಿನಿಧಿ ಸುಜಾತಾ, ಶೌರ್ಯ ಧರ್ಮಸ್ಥಳ ಘಟಕದ ಸ್ವಯಂಸೇವಕರಾದ ನಳಿನ್ ಕುಮಾರ್, ಶ್ರೀಧರ್ ಗೌಡ, ಮೋಹಿನಿ, ಉಪಸ್ಥಿತರಿದ್ದರು

Related posts

ಪಿಎಂ ಶ್ರೀ ಸರ್ಕಾರಿ ಮಾದರಿ ಬೆಳ್ತಂಗಡಿ ಶಾಲೆಗೆ ಧರ್ಮಸ್ಥಳದ ‘ಜ್ಞಾನ ವಿಕಾಸ’ ತಂಡ ಭೇಟಿ: ಸ್ಮಾರ್ಟ್ ಕ್ಲಾಸ್ ವೀಕ್ಷಣೆ

Suddi Udaya

ಬೆಳ್ತಂಗಡಿ ಜ್ಯೋತಿ ಹಾಸ್ಪಿಟಲ್ ವತಿಯಿಂದ ನಾರಾವಿಯ ಕುತ್ಲೂರಿನಲ್ಲಿ ಕ್ಯಾನ್ಸರ್ ತಪಾಸಣಾ ಶಿಬಿರ

Suddi Udaya

ಉಜಿರೆಯಲ್ಲಿ ಯಕ್ಷಭಾರತಿಯಿಂದ ತಾಳಮದ್ದಳೆ

Suddi Udaya

ಚೆಸ್ ಪಂದ್ಯಾಟ: ವೈಬ್ರೆಂಟ್ ಕಾಲೇಜಿನ ವಿದ್ಯಾರ್ಥಿಗಳು ರಾಜ್ಯಮಟ್ಟಕ್ಕೆ ಆಯ್ಕೆ

Suddi Udaya

ಉಜಿರೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸೇವಾ ಸಂಘದ ವಾರ್ಷಿಕ ಮಹಾಸಭೆ

Suddi Udaya

ಗಡಿ ಪಾರು ಮಾಡಿ ಎನ್ನಲು ರಕ್ಷಿತ್ ಶಿವರಾಂ ಯಾರು..? ಕುಂಬಳಕಾಯಿ ಕಳ್ಳ ಎಂದಾಗ ಹೆಗಲು ಮುಟ್ಟಿ ಅರಚಾಡಿದರೆ ನಾವೇನು ಮಾಡಲು ಸಾಧ್ಯ:ತಾ.ಪಂ ಮಾಜಿ ಸದಸ್ಯ ಮಂಜುನಾಥ್ ಸಾಲ್ಯಾನ್

Suddi Udaya
error: Content is protected !!