25.5 C
ಪುತ್ತೂರು, ಬೆಳ್ತಂಗಡಿ
June 8, 2026
Uncategorized

ಅಕ್ರಮ ಗಣಿಗಾರಿಕೆ : ಶಶಿರಾಜ್ ಶೆಟ್ಟಿ ಮತ್ತು ಪ್ರಮೋದ್ ಗೌಡ ಜಾಮೀನು

ಬೆಳ್ತಂಗಡಿ : ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ನ್ಯಾಯಾಂಗ ಬಂಧನದಲ್ಲಿದ್ದ ಶಶಿರಾಜ್ ಶೆಟ್ಟಿ ಗೆ 25 ದಿನಗಳ ಬಳಿಕ ಸೆಷನ್ಸ್‌ ಕೋರ್ಟ್ ಜಾಮೀನು ಮಂಜೂರು ಮಾಡಿದೆ. ಅದರಂತೆ ತಲೆಮರೆಸಿಕೊಂಡಿದ್ದ ಮತ್ತೊಬ್ಬ ಆರೋಪಿ ಪ್ರಮೋದ್‌ ದಿಡುಪೆಗೂ ಜೂ.13 ರಂದು(ಇಂದು) ಷರತ್ತು ಬದ್ಧ ಜಾಮೀನು ಮಂಜೂರು ಮಾಡಿದೆ.

ಬೆಳ್ತಂಗಡಿ ತಾಲೂಕಿನ ಮೇಲಂತಬೆಟ್ಟು ಗ್ರಾಮದಲ್ಲಿ ಅಕ್ರಮ ಗಣಿಗಾರಿಕೆ ನಡೆಯುತ್ತಿದ್ದ ಸ್ಥಳಕ್ಕೆ ಮೇ.18 ರಂದು ಬೆಳ್ತಂಗಡಿ ತಹಶೀಲ್ದಾ‌ರ್ ಪೃಥ್ವಿ ಸಾನಿಕಾಂ ನೇತೃತ್ವದಲ್ಲಿ ಬೆಳ್ತಂಗಡಿ ಪೊಲೀಸರು ದಾಳಿ ಮಾಡಿ ಪ್ರಕರಣ ದಾಖಲಿಸಿದ್ದರು.

ಬಳಿಕ ಪ್ರಕರಣದ ಆರೋಪಿಯಾದ ಶಶಿರಾಜ್ ಶೆಟ್ಟಿಯನ್ನು ಮೇ.18 ರಂದು ರಾತ್ರಿ ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿ ನ್ಯಾಯಾಲಯ ನ್ಯಾಯಾಂಗ ಬಂಧನ ವಿಧಿಸಿತ್ತು.ಬಂಧನ 25 ದಿನಗಳ ಬಳಿಕ ಶಶಿರಾಜ್ ಶೆಟ್ಟಿಗೆ ಮಂಗಳೂರು ಸೆಷನ್ಸ್ ಕೋರ್ಟ್ ನಿಂದ ಜೂ.13 ರಂದು(ಇಂದು) ಷರತ್ತು ಬದ್ಧ ಜಾಮೀನು ಮಂಜೂರು ಮಾಡಿ ಆದೇಶ ಮಾಡಿದ್ದಾರೆ. ಶಶಿರಾಜ್ ಶೆಟ್ಟಿ ಪರ ನ್ಯಾಯವಾದಿ ಮಹೇಶ್ ಕಜೆ ಕೋರ್ಟ್ ನಲ್ಲಿ ವಾದಿಸಿದರು.

ಅಕ್ರಮ ಗಣಿಗಾರಿಕೆ ಪ್ರಕರಣದ ಪ್ರಮುಖ ಆರೋಪಿ ಪ್ರಮೋದ್‌ ದಿಡುಪೆ ಪ್ರಕರಣದ ಬಳಿಕ ತಲೆಮರೆಕೊಂಡಿದ್ದ ಆತನಿಗೂ ಷರತ್ತು ಬದ್ಧ ಜಾಮೀನು ಮಂಜೂರಾಗಿದೆ. ಪ್ರಮೋದ್ ದಿಡುಪೆ ಪರ ವಕೀಲರಾದ ಶಂಭು ಶರ್ಮ ಮತ್ತು ಅಜಯ್‌ ಸುವರ್ಣ ವಾದಿಸಿದರು.

Related posts

ಸ್ವಚ್ಛತಾ ಕೀ ಸೇವಾ ಆಂದೋಲನ

Suddi Udaya

ಉಜಿರೆ ರುಡ್ ಸೆಟ್ ನಲ್ಲಿ ಮಹಿಳೆಯರ ವಸ್ತ್ರ ವಿನ್ಯಾಸ ತರಬೇತಿ ಕಾರ್ಯಕ್ರಮದ ಸಮಾರೋಪ

Suddi Udaya

ಗುಂಡೂರಿ ಶ್ರೀ ಗುರು ಚೈತನ್ಯ ಸೇವಾ ಪ್ರತಿಷ್ಠಾನದ ಸೇವಾಶ್ರಮದಲ್ಲಿ ಶುಶ್ರೂಷೆಯ ಪಡೆಯುತ್ತಿದ್ದ ವ್ಯಕ್ತಿ ನಾಪತ್ತೆ

Suddi Udaya

ಮೇ 16: ಎಮ್.ಆರ್.ಪಿ.ಎಲ್ ಹಾಗೂ ಕಕ್ಕಿಂಜೆ ಶ್ರೀ ಕೃಷ್ಣ ಆಸ್ಪತ್ರೆ, ಬಿ.ವಿ.ಕೆ ಇರ್ವತ್ರಾಯ ಮೆಮೋರಿಯಲ್ ಚಾರಿಟೇಬಲ್ ಫೌಂಡೇಶನ್ ಇವರ ಆಶ್ರಯದಲ್ಲಿ ” ಉಚಿತ ಆರೋಗ್ಯ ತಪಾಸಣೆ ಶಿಬಿರ

Suddi Udaya

ಗೇರುಕಟ್ಟೆ: ಕಳಿಯ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಯಿಂದ ವಿವಿಧ ಕಡೆ ಧಿಡೀರ್ ಭೇಟಿ

Suddi Udaya

ಉಜಿರೆ ಮೋಹನ್ ಕುಮಾರ್ ಮಾಲಕತ್ವದ ಲಕ್ಷ್ಮೀ ಇಂಡಸ್ಟ್ರೀಸ್ ಕನಸಿನ ಮನೆ ನೂತನ ಶಾಖೆ ಉಪ್ಪಿನಂಗಡಿಯಲ್ಲಿ ಶುಭಾರಂಭ

Suddi Udaya
error: Content is protected !!